ವಿಜಯನಗರ | ಸಮಾಜದ ಅನಿಷ್ಟ ಪದ್ದತಿಗಳನ್ನು ಕಡ್ಡಾಯವಾಗಿ ನಿಯಂತ್ರಿಸಿ; ಬಸವಶ್ರೀ ಪ್ರಶಸ್ತಿ ಪುರಸ್ಕೃತೆ ವಿದ್ಯಾ ಪಟೇಲ್

Date:

  • ಮಲವಿ ಗ್ರಾಮದಲ್ಲಿ ಮದ್ಯಮಳಿಗೆ ತೆರೆಯದಂತೆ ಎಚ್ಚರಿಕೆ
  • ಗ್ರಾಮೀಣ ಭಾಗದಲ್ಲಿ ನಡೆದ ಜಿಲ್ಲಾ ಮಹಿಳಾ ಸಮಾವೇಶ

ದೇವದಾಸಿ ಪದ್ಧತಿ, ಬಾಲ್ಯ ವಿವಾಹ ಹಾಗೂ ಮದ್ಯದಂತಹ ಅನಿಷ್ಟ ಪದ್ದತಿಗಳನ್ನು ಕಡ್ಡಾಯವಾಗಿ ನಿಯಂತ್ರಿಸಬೇಕು. ಇಲ್ಲದಿದ್ದರೆ ಗ್ರಾಮದಲ್ಲಿ ನಿರುದ್ಯೋಗ ಮತ್ತು ಬಡತನಗಳು ಹೆಚ್ಚಾಗುತ್ತವೆ ಎಂದು ಬಸವ ಶ್ರೀ ಪ್ರಶಸ್ತಿ ಪುರಸ್ಕೃತೆ ಶ್ರೀಮತಿ ವಿದ್ಯಾ ಪಟೇಲ್ ಆತಂಕ ವ್ಯಕ್ತಪಡಿಸಿದ್ದಾರೆ.

- Advertisement -

ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲವಿ ಗ್ರಾಮದಲ್ಲಿ ಮಂಗಳವಾರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ‘ರಾಜ್ಯ ಮಹಿಳಾ ಒಕ್ಕೂಟ ಮತ್ತು ಕೂಲಿ ಕಾರ್ಮಿಕರ ಸಂಘಟನೆ’ ವತಿಯಿಂದ ಜಿಲ್ಲಾ ಮಟ್ಟದ ಮಹಿಳಾ ಸಮಾವೇಶ ಆಯೋಜಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಕಾರ್ಯಕ್ರಮ ಉದ್ಘಾಟಿಸಿದ ವಿದ್ಯಾ ಪಾಟೀಲ್‌ ಮಾತನಾಡಿ, “ಸರ್ಕಾರದ ಶಾಲೆ ಬಾಗಿಲು ತೆರೆಯುವ ಮುನ್ನವೇ ಗ್ರಾಮಗಳಲ್ಲಿ ಮದ್ಯದಂಗಡಿ ತೆರೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಮಕ್ಕಳಲ್ಲಿ ಆರೋಗ್ಯದ ಸಮಸ್ಯೆ ಜೊತೆಗೆ ಅನಕ್ಷರತೆ ಸೃಷ್ಠಿಯಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ಗ್ರಾಮದ ಹಲವರು ಕುಡಿತಕ್ಕೆ ದಾಸರಾಗಿ ತಮ್ಮ ತಮ್ಮ ಕುಟುಂಬದ ಜವಾಬ್ದಾರಿಯನ್ನು ನಿರ್ವಹಿಸಲು ಆಗುತ್ತಿಲ್ಲ. ಹಾಗಾಗಿ, ಗ್ರಾಮದಲ್ಲಿ ಮದ್ಯದಂಗಡಿ ತೆರೆಯದಂತೆ ಅಧಿಕಾರಿಗಳು ಕ್ರಮವಹಿಸಬೇಕು. ಇಲ್ಲದಿದ್ದರೆ ಮದ್ಯದಂಗಡಿ ಮುಂದೆ ಕುಳಿತು ಉಗ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಸಿದರು.

ನಂದಿಪುರ ಕ್ಷೇತ್ರ ಮಹೇಶ್ವರಸ್ವಾಮಿ ಮಾತನಾಡಿ, “ಮಹಿಳೆಯರು ತಮ್ಮ ಹಕ್ಕುಗಳನ್ನು ಹೋರಾಟದ ಮೂಲಕ ಪಡೆದುಕೊಂಡು ಪುರುಷರಿಗೆ ಸರಿಸಾಮಾನವಾಗಿ ಜೀವನ ಸಾಗಿಸಬೇಕು. ಉಳಿತಾಯ ಖಾತೆ ತೆರೆದು ಪ್ರಗತಿ ಹೊಂದಬೇಕು. ಇಂತಹ ವಿಚಾರಗಳಿಗೆ ನಿಮಗೆ ಬೆಂಬಲವಾಗಿ ಇರುತ್ತೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? : ಬೆಂಗಳೂರು | ಮಕ್ಕಳ ಕಳ್ಳಿಯನ್ನು ಬಂಧಿಸಿದ ಕಲಾಸಿಪಾಳ್ಯ ಪೊಲೀಸರು

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹೋರಾಟಗಾರ್ತಿ ಗೀತಾ ಮಾತನಾಡಿ, “ನಮ್ಮ ಕುಟುಂಬದ ಜವಾಬ್ದಾರಿ ನಿರ್ವಹಿಸುವ ಪುರುಷರು ಕುಡಿತದ ಬಲೆಗೆ ಸಿಕ್ಕಿ ಬದಕು ಕಟ್ಟಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ” ಎಂದು ಭಾವುಕರಾದರು.

ಗ್ರಾಮೀಣ ಕೂಲಿ ಕಾರ್ಮಿಕ ಸಂಘದ ತಾಲೂಕು ಕಾರ್ಯಕರ್ತೆ ಎಂ.ಬಿ ಕೊಟ್ರಮ್ಮ ಮಾತನಾಡಿ, “ಇಡೀ ಕರ್ನಾಟಕದಲ್ಲೇ ಮದ್ಯ ನಿಷೇಧ ಮಾಡಬೇಕೆಂದು ಮೊದಲು ಹೋರಾಟಕ್ಕೆ ಚಾಲನೆ ನೀಡಿದ ಗ್ರಾಮವೆಂದರೆ ಅದು ಮಾಲವಿ ಗ್ರಾಮ. ಆದರೆ, ಇಂದು ಇದೆ ಗ್ರಾಮದಲ್ಲೆ ಕೆಲ ರಾಜಕೀಯ ಪ್ರಭಾವಿಗಳು ಮದ್ಯದಂಗಡಿ ತೆರೆಯಲು ಮುಂದಾಗಿದ್ದಾರೆ. ಇದನ್ನು ಗ್ರಾಮದ ಜನರು ತೆರೆಯದಂತೆ ಹೋರಾಟಕ್ಕೆ ಮುಂದಾಗಬೇಕಿದೆ” ಎಂದು ಕರೆಕೊಟ್ಟರು.

ವಿರುಪಮ್ಮ ಅವರು ದೇವದಾಸಿ ಮಹಿಳೆಯರ ಸೌಲಭ್ಯಗಳು ಹಾಗೂ ಅವರ ಮಕ್ಕಳ ವಿದ್ಯಾಭ್ಯಾಸದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ವೇಳೆ ಬಸಲಿಂಗಮ್ಮ, ರೇಣುಕಮ್ಮ, ಎಲ್ಲಪ್ಪ, ಬುಡೇನ್ ಸಾಬ್, ಮೋಕ್ಷಮ್ಮ ಮಸ್ಕಿ, ಮಲ್ಲೇಶ್ ಅಕ್ಕಮಹಾದೇವಿ, ಹನುಮಂತಪ್ಪ ಸೇರಿದಂತೆ ಹಲವರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...