ವಿಜಯನಗರ | ಉಡಸಲಮ್ಮ ಕಟ್ಟೆ ಒತ್ತುವರಿ; ಮನೆ ಖಾಲಿ ಮಾಡಲು ತಹಶೀಲ್ದಾರ್ ನೇತ್ರಾವತಿ ಸೂಚನೆ

Date:

Advertisements

ವಿಜಯನಗರದ ಕೂಡ್ಲಿಗಿ ಪಟ್ಟಣದ ಉಡಸಲಮ್ಮನ ಕಟ್ಟೆ ಏರಿಮೇಲಿನ ಜಾಗವನ್ನು ಖಾಸಗಿಐವರು ಒತ್ತುವರಿ ಮಾಡಿ ಅನಧಿಕೃತವಾಗಿ ನಿರ್ಮಿಸಿಕೊಂಡ ಮನೆಗಳನ್ನು ಕೂಡಲೇ ತೆರವುಗಳಿಸಬೇಕು ಎಂದು ತಹಶೀಲ್ದಾರ್ ವಿ ಕೆ ನೇತ್ರಾವತಿ ಸೂಚನೆ ನೀಡಿದರು. ಉಡಸಲಮ್ಮನ ಕಟ್ಟೆಯನ್ನು ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ಕೆರೆಯ ಭೂ ಸರ್ವೆ ನಡೆಸಿ ಮಾತನಾಡಿ, “ಒತ್ತುವಾರಿಯಾದ ಮನೆ ಖಾಲಿ ಮಾಡಲು ಈಗಾಗಲೇ ಕಂದಾಯ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದರೂ, ಅತಿಕ್ರಮಣಕಾರ ಅನೇಕ ಕುಟುಂಬಗಳು ಅದನ್ನು ಉಲ್ಲಂಘಿಸಿ ಇಲ್ಲಿಯೇ ವಾಸವಾಗಿವೆ. ಮನೆ ಇಲ್ಲದ 37 ಕುಟುಂಬಗಳ ಪಟ್ಟಿ ಮಾಡಲಾಗಿದೆ. ಆದರೆ, ಸ್ವಂತ ಮನೆ ಇದ್ದವರೂ ಇಲ್ಲಿ ಅನಧಿಕೃತವಾಗಿ ಮನೆ ಮಾಡಿಕೊಂಡು ವಾಸವಿದ್ದವರು 15 ದಿನಗಳಲ್ಲಿ ಇಲ್ಲಿನ ಮನೆ ಖಾಲಿ ಮಾಡಬೇಕು” ಎಂದು ಹೇಳಿದರು.

ಪಟ್ಟಣದ ಹೊರವಲಯದ ಕರೇಕಲ್ಲು ಬಗಡಿ ಮೇಲಿನ ಸರ್ಕಾರಿ ಜಾಗವನ್ನು ಮನೆ ಇಲ್ಲದವರಿಗಾಗಿ ಗುರುತಿಸಲಾಗಿದೆ. ಒತ್ತುವರಿಯಾದ ಉಡುಸಲಮ್ಮನ ಕೆರೆ 27 ಎಕರೆಯಷ್ಟಿದ್ದು, ಕೆರೆ ತೆರವು ಮಾಡಲು ತಿಳಿಸಿದರು.

ಇದನ್ನೂ ಓದಿ: ವಿಜಯನಗರ | ಪ್ರಜಾಪ್ರಭುತ್ವದಲ್ಲಿ ಪ್ರಶ್ನೆಮಾಡಿ ದೌರ್ಜನ್ಯಕ್ಕೆ ಒಳಗಾಗುವಂತಾಗಿದೆ: ಚಿನ್ನಸ್ವಾಮಿ ಸೋಸಲೆ

ಈ ವೇಳೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕಾವಲಿ ಶಿವಪ್ಪನಾಯಕ, ಮುಖ್ಯಾಧಿಕಾರಿ ಎಚ್. ದಾದಪೀರ್, ಸದಸ್ಯ ಟಿ. ವೆಂಕಟೇಶ, ಮುಖಂಡರಾದ ಬಿ. ಭೀಮೇಶ್, ಗ್ಯಾಸ್ ವೆಂಕಟೇಶ, ಬಿ.ಕೆ. ರಾಘವೇಂದ್ರ, ತಾಲೂಕು ಭೂ ಮಾಪನಾಧಿಕಾರಿ ಮಂಜುನಾಥ, ಕಂದಾಯ ನಿರೀಕ್ಷಕ ಪ್ರಭು ತಳವಾರ ಹಾಗೂ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X