ವಿಜಯನಗರ | ಭಾರೀ ಮಳೆ; ಸಿಡಿಲಿಗೆ ಬಾಲಕ ಬಲಿ

Date:

Advertisements

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆ ಹಿನ್ನೆಲೆ, ಸಿಡಿಲು ಬಡಿದು ಬಾಲಕನೊಬ್ಬ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಬಂಡೇ ಬಸಾಪುರ ತಾಂಡ(ಬಿಬಿ ತಾಂಡ)ದಲ್ಲಿ ನಡೆದಿದೆ.

ಗ್ರಾಮದ ಪಾಂಡುನಾಯ್ಕ (16) ಮೃತ ಬಾಲಕ. ಬಾಲಕ ಗುಡುಗು ಸಹಿತ ಮಳೆ ಶುರುವಾದ ಸಂದರ್ಭದಲ್ಲಿ ಮನೆಯ ಮೆಟ್ಟಿಲಿನ ಮೇಲೆ ಕುಳಿತು ಮೊಬೈಲ್‌ ನೋಡುತ್ತಿದ್ದ ಎನ್ನಲಾಗಿದೆ. ಬಾಲಕನಿಂದ ಮಾರಳತೆ ಅಂತರದಲ್ಲಿದ್ದ ಮತ್ತೋರ್ವನಿಗೆ ಯಾವುದೇ ತೊಂದರೆಯಾಗಿಲ್ಲ, ಆದರೆ ಆತನ ಕಣ್ಣೆದುರೇ ಘಟನೆ ಜರುಗಿದ ಪರಿಣಾಮ ಅಘಾತಕ್ಕೀಡಾಗಿ ನಂತರ ಚೇತರಿಸಿಕೊಂಡಿದ್ದಾನೆಂದು ತಿಳಿದುಬಂದಿದೆ.

ಮೃತ ಬಾಲಕ ಪಾಂಡುನಾಯ್ಕ ಎಸ್‌ಎಸ್‌ಎಲ್‌ಸಿ ವ್ಯಾಸಾಂಗ ಮಾಡಿದ್ದು, ಇತ್ತೀಗಷ್ಟೇ ನಡೆದ ಪರೀಕ್ಷೆಗೆ ಹಾಜರಾಗಿ ಬರೆದಿದ್ದ. ಕೂಡ್ಲಿಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisements

ಇದನ್ನೂ ಓದಿ: ವಿಜಯನಗರ | ಕೃತಿಕಾ ಕೆ ಆರ್‌ಗೆ ಹಂಪಿ ಕನ್ನಡ ವಿವಿಯಿಂದ ಪಿಎಚ್‌ಡಿ ಪದವಿ ಪ್ರದಾನ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X