ವಿಜಯನಗರ | ಭಾರತ ಸ್ವಾವಲಂಬಿಯಾಗಲು ಗೃಹ ಕೈಗಾರಿಕೆಗಳು ಮುಂಚೂಣಿಗೆ ಬರಬೇಕು: ಡಾ. ವೀರೇಶ ಬಡಿಗೇರ

Date:

Advertisements

ವರ್ಣ, ವರ್ಗ, ಲಿಂಗರಹಿತ ಸಮಾಜ ಸ್ಥಾಪನೆಯು ಗಾಂಧಿಯ ಕನಸಾಗಿತ್ತು. ಸ್ವದೇಶಿ ಚಳವಳಿ, ಸ್ವಾವಲಂಬನೆ ಹಾಗೂ ಗೃಹ ಕೈಗಾರಿಕೆಗಳು ಮುಂಚೂಣಿಗೆ ಬರಬೇಕು. ದುಡಿಯುವ ವರ್ಗಗಳು ಯಾರಿಗೂ ಅಧೀನರಾಗದೆ ದುಡಿದು ಬದುಕುವಂತಾಗಬೇಕೆಂದು ಮಹಾತ್ಮ ಗಾಂಧಿಯವರು ಯಾವಾಗಲೂ ಚಿಂತಿಸುತ್ತಿದ್ದರು ಎಂದು ಹಸ್ತಪ್ರತಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ವೀರೇಶ ಬಡಿಗೇರ ಅವರು ತಿಳಿಸಿದರು.

ಕನ್ನಡ ವಿಶ್ವವಿದ್ಯಾಲಯದ ಕ್ರಿಯಾಶಕ್ತಿಯ ಸಭಾಭವನದಲ್ಲಿ ಮಹಾತ್ಮಾಗಾಂಧಿ ಜಯಂತಿ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಗಾಂಧೀಜಿ ‘ಸ್ವತಂತ್ರ ಭಾರತದ ಪರಿಕಲ್ಪನೆ’ ಎಂಬ ವಿಷಯ ಕುರಿತು ಉಪನ್ಯಾಸ ನೀಡಿ ಮಾತನಾಡಿದರು.

“ಲಾಲ್‌ಬಹಾದ್ದೂರ್ ಶಾಸ್ತ್ರಿಯವರು ಹಸಿರು ಕ್ರಾಂತಿಯ ಮೂಲಕ `ಜೈಜವಾನ್‌ ಜೈಕಿಸಾನ್’ ಎಂದು ಹೇಳಿದರೆ, ಗಾಂಧೀಜಿಯವರು ರೈತರೇ ಈ ದೇಶದ ಬೆನ್ನೆಲುಬು ಎನ್ನುತ್ತಾರೆ. ಸಬಲರಾಗಿ, ಸ್ವತಂತ್ರರಾಗಿ, ಸ್ವಾವಲಂಬಿಗಳಾಗಿ ತಮಗೆ ಬೇಕಾದ ವಸ್ತುಗಳನ್ನು ಭಾರತೀಯರು ತಾವೇ ಉತ್ಪಾದಿಸಿಕೊಳ್ಳಬೇಕೆಂದು ಇಬ್ಬರೂ ಕನಸು ಕಂಡಿದ್ದರು. ಎಂದು ಹೇಳಿದರು.

Advertisements

“ಸತ್ಯವೇ ಗಾಂಧಿಯವರ ಉಸಿರಾಗಿತ್ತು. ಸತ್ಯವಾದ ನಡವಳಿಕೆ, ಸತ್ಯವಾದ ಬದುಕು, ಸ್ವತಂತ್ರ ಆಲೋಚನೆ, ಅಧೀನರಹಿತ ಬದುಕು ಇವೆಲ್ಲವೂ ಸತ್ಯದ ತಳಹದಿ ಎಂದು ಗಾಂಧಿಯವರು ನಂಬಿದ್ದರು. ನೇಯುವುದು, ನೂಲುವುದನ್ನು ಭಾರತದ ಆತ್ಮಸಾಕ್ಷಿಯಾಗಿ ನಾನು ಮಾಡುತ್ತೇನೆಂದು ಹೇಳುತ್ತಿದ್ದರು. ಗಾಂಧಿ, ಶಾಸ್ತ್ರಿ, ಅಂಬೇಡ್ಕರ್ ಇವರಂತಹ ಮಹಾತ್ಮರು ನಮಗೆ ಸ್ವಾತಂತ್ರ್ಯ, ಬದುಕು, ಸಂವಿಧಾನ, ಹಕ್ಕುಗಳನ್ನು ಕೊಟ್ಟಿದ್ದಾರೆ. ಇಂತಹ ಮಹಾತ್ಮರನ್ನು ಸ್ಮರಿಸಿ ಅವರ ಭಾವಚಿತ್ರಕ್ಕೆ ಹಾರ ಹಾಕುವ ಬದಲು ಅವರ ಜೀವನದ ಮೌಲ್ಯ ಆದರ್ಶಗಳನ್ನು ನಮ್ಮ ಬದುಕಿನ ಜೀವನದ ಭಾಗವಾಗಿ ಅಳವಡಿಸಿಕೊಳ್ಳಬೇಕು” ಎಂದು ಕರೆ ನೀಡಿದರು.‌

ಗಾಂಧಿ ಜಯಂತಿ 3

ಎನ್‌ಎಸ್‌ಎಸ್ ಘಟಕದ ಸಂಯೋಜನಾಧಿಕಾರಿ ಡಾ.ಎ.ಶ್ರೀಧರ ಅವರು ಮಾತನಾಡಿ, “ಹಿಂದ್ ಸ್ವರಾಜ್ ಹಾಗೂ ಮೈ ಎಕ್ಸ್ಪೆರಿಮೆಂಟ್ ವಿತ್‌ಟ್ರುಥ್ ಗಾಂಧಿಯವರ ಬಹಳ ಪ್ರಮುಖ ಕೃತಿಗಳಾಗಿವೆ. ಗ್ರಾಮ ಸ್ವರಾಜ್ಯದ ಕಲ್ಪನೆಯೊಂದಿಗೆ ಆಧುನಿಕತೆಗೂ ಪ್ರಾಮುಖ್ಯತೆ ನೀಡಿದ್ದರು. ಆದರೆ ಆಧುನಿಕತೆಯ ದಾಸರಾಗಬಾರದು ಎಂಬುದು ಗಾಂಧಿಯವರ ಅಭಿಪ್ರಾಯವಾಗಿತ್ತು” ಎಂದು ಹೇಳಿದರು.

ಎನ್‌ಎಸ್‌ಎಸ್ ಘಟಕದ ಸಂಯೋಜನಾಧಿಕಾರಿಗಳಾದ ಡಾ.ಎ.ಶ್ರೀಧರ ಅವರ ನೇತೃತ್ವದಲ್ಲಿ ಗಾಂಧಿಜಯಂತಿ ಪ್ರಯುಕ್ತ ವಿಶ್ವವಿದ್ಯಾಲಯದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

ಆರ್ ವಿ ದೇಶಪಾಂಡೆ, ಉಪಕುಲಸಚಿವ ಬಿ.ಗುರುಬಸಪ್ಪ, ಮಾಹಿತಿ ಕೇಂದ್ರದ ಮುಖ್ಯಸ್ಥ ಶಕುಂತಲಾ ಚೌಡನಾಯ್ಕ, ಕುಲಪತಿಯವರ ಆಪ್ತಕಾರ್ಯದರ್ಶಿ ಎ ಎಂ ಕೃಪಾಶಂಕರ್, ಎಂಜಿನಿಯರ್ ಚಂದ್ರಶೇಖರಪ್ಪ, ಡಾ. ಪಿ ಕೃಷ್ಣಮೂರ್ತಿ, ನಿವೃತ್ತ ಉಪನಿರ್ದೇಶಕಿ ಡಾ. ಡಿ ಮೀನಾಕ್ಷಿ ಸೇರಿದಂತೆ ವಿದ್ಯಾರ್ಥಿಗಳು, ಸಿಬ್ಬಂದಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X