ವಿಜಯನಗರ | ವೈದ್ಯರಿಲ್ಲದ ಆಸ್ಪತ್ರೆಗಳು; ಹಾವು ಕಚ್ಚಿದ ಇಬ್ಬರು ಮಹಿಳೆಯರ ಸಾವು

Date:

Advertisements

ಎರಡು ಪ್ರತ್ಯೇಕ ಘಟನೆಗಳಲ್ಲಿ ಹಾವು ಕಚ್ಚಿ, ತುರ್ತು ಚಿಕಿತ್ಸೆ ದೊರೆಯದೆ ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನಲ್ಲಿ ನಡೆದಿವೆ. ವೀಣಾ(26) ಮತ್ತು ಹುಲಿಗೆಮ್ಮ(49) ಮೃತ ಮಹಿಳೆಯರು.

ವೀಣಾ ಅವರು ಹಡಗಲಿ ತಾಲೂಕಿನ ಹಿರೇಬನ್ನಿಮಲ್ಲು ಗ್ರಾಮದವರಾಗಿದ್ದು, ಹುಲಿಗೆಮ್ಮ ಅಂಗೂರು ಗ್ರಾಮದವರು. ವೀಣಾ ಮೆಕ್ಕೆಜೋಳ ಕೊಯ್ಯಲೆಂದು ಹೊಲಕ್ಕೆ ಹೋಗಿದ್ದಾಗ ಹಾವು ಕಚ್ಚಿದೆ. ಹುಲಿಗೆಮ್ಮ ಚಿಂಚಲಿಯಲ್ಲಿ ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿದೆ. ಈ ಇಬ್ಬರೂ ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಸರಿಯಾದ ಚಿಕಿತ್ಸೆ ದೊರೆಯದೆ ಇಬ್ಬರೂ ಮೃತಪಟ್ಟಿದ್ದಾರೆ.

ವೀಣಾ ಮತ್ತು ಹುಲಿಗೆಮ್ಮ ಇಬ್ಬರ ಸಾವಿಗೂ ಆಸ್ಪತ್ರೆಗಳ ಅವ್ಯವಸ್ಥೆ ಕಾರಣವೆಂದು ಕಂಡುಬಂದಿದೆ. ಹಾವು ಕಡಿತದಿಂದ ಅಸ್ವಸ್ಥರಾಗಿದ್ದ ವೀಣಾರನ್ನು ಕೂಡಲೇ ಹೊಳಲು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಅಲ್ಲಿ ವೈದ್ಯರೇ ಇರಲಿಲ್ಲ. ಹೀಗಾಗಿ ವೀಣಾಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ, ವಿಷ ಮೈತುಂಬ ಹರಡಿ ಮೃತಪಟ್ಟಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೀದರ್ | ರಸ್ತೆ ಕಾಮಗಾರಿ ಸ್ಥಗಿತ; ಓಡಾಡಲು ಪರದಾಟ

ಹುಲಿಗೆಮ್ಮ ಸಾವಿನಲ್ಲೂ ಇದೇ ರೀತಿ ಅಂಶವೇ ಕಂಡುಬಂದಿದ್ದು, ಹುಲಿಗೆಮ್ಮ ಅವರನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಅಲ್ಲೂ ವೈದ್ಯರಿಲ್ಲದೆ ಚಿಕಿತ್ಸೆ ವಿಳಂಬವಾಗಿದ್ದು,.ಮೃತಪಟ್ಟಿದ್ದಾರೆ. ಈ ಬಗ್ಗೆ ಎರಡೂ ಕುಟುಂಬದವರೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಬ್ಬರೂ ಮಹಿಳೆಯರ ಸಾವಿನ ಪ್ರಕರಣ ಹಡಗಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X