ವಿಜಯನಗರ | ಸಾಂಸ್ಥಿಕ ಭಾಷಾಂತರಗಳು ಭಾರತೀಯ ಭಾಷೆಗಳಲ್ಲಿ ಸಾಮರಸ್ಯ ಮೂಡಿಸುತ್ತವೆ: ಸಾಹಿತಿ ಕೃಷ್ಣಮೂರ್ತಿ

Date:

Advertisements

ಸಾಂಸ್ಥಿಕ ಭಾಷಾಂತರರಗಳು ಭಾರತದ ಬಹು ಭಾಷಗಳಲ್ಲಿ ಸಾಮರಸ್ಯ ಮೂಡಿಸುವ ಕೆಲಸ ಮಾಡುತ್ತವೆ ಎಂದು ಹಿರಿಯ ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು.

ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾಂತರ ಅಧ್ಯಯನ ವಿಭಾಗದಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ “ಸಾಂಸ್ಥಿಕ ಅನುವಾದಗಳ ಸವಾಲುಗಳು” ಎಂಬ ವಿಷಯದ ಕುರಿತು ಮಾತನಾಡಿದ ಅವರು, ಸಾಂಸ್ಥಿಕ ಭಾಷಾಂತರದ ವ್ಯಾಪಕತೆ ಅಪಾರವಾದದ್ದು. ಸ್ವಾಂತಂತ್ರ್ಯ ಬಂದ ನಂತರ  ಆಡಳಿತಗಾರರು ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಅಭಿವೃದ್ಧಿಪಡಿಸುವ ಸಲುವಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ, ನ್ಯಾಷನಲ್ ಬುಕ್ ಟ್ರಸ್ಟ್ ಮುಂತಾದ ಸಂಸ್ಥೆಗಳನ್ನು ಸ್ಥಾಪಿಸಿದರು. ಅಲ್ಲದೇ ಇಂತಹ ಸಂಸ್ಥೆಗಳು ಅನುವಾದಕರ ಕೆಲಸ ನಿರರ್ಥಕವಾಗಿರುವ ಈಗಿನ ದಿನಮಾನಗಳಲ್ಲಿ ಅವರನ್ನು ಗುರುತಿಸುವ ಕೆಲಸ ಮಾಡುತ್ತಿವೆ ಎಂದರು.

WhatsApp Image 2025 01 21 at 1.59.02 PM

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಾಷಾಂತರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ಮೋಹನ್ ಕುಂಟಾರ  ಮಾತನಾಡಿ, ಭಾಷಾಂತರ ಎಂಬುದು ಸೃಜನಶೀಲ ಪ್ರಕ್ರಿಯೆ. ಸಾಂಸ್ಥಿಕ ಭಾಷಾಂತರದ ದೃಷ್ಟಿಯೇ ಭಾರತದ ಎಲ್ಲಾ ಭಾಷೆಗಳ ಸಾಹಿತ್ಯವನ್ನು ಏಕರೂಪದಲ್ಲಿ ನೋಡುವುದು. ಆ ಮೂಲಕ ಭಾವೈಕ್ಯ ಸಾಧಿಸುವುದೇ ಈ ಸಂಸ್ಥೆಗಳ ಮುಖ್ಯ ಉದ್ದೇಶ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ರೆಬೆಕ್ಕಾ, ಶ್ವೇತಾ ಬಾಳಿ, ಭಾಷಾಂತರ ಅಧ್ಯಯನ ವಿಭಾಗದ ಸಂಶೋಧನಾರ್ಥಿಗಳು, ಇತರ ಅಧ್ಯಯನ ವಿಭಾಗಗಳ ಸಂಶೋಧನಾರ್ಥಿಗಳು ಹಾಗೂ ಎಂ.ಎ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ?:ವಿಜಯನಗರ | ಡಿ. ವಿರೇಶ್ ಗೆ ಪಿಹೆಚ್.ಡಿ ಪದವಿ ಘೋಷಣೆ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X