ವಿಜಯನಗರ | ಹಲವು ಭಾಷೆಗಳ ಸಂಗಮ ಕಾಸರಗೋಡು: ಮಹಮ್ಮದ್‌ ಅಲಿ

Date:

ಕಾಸರಗೋಡು ಕೇರಳ ಹಾಗೂ ಕರ್ನಾಟಕದ ಗಡಿಯಲ್ಲಿರುವುದರಿಂದ ಕನ್ನಡ, ತುಳು, ಮಲಯಾಳಂ ಸೇರಿದಂತೆ ಹಲವು ಭಾಷೆಗಳು ಹಾಗೂ ಸಂಸ್ಕೃತಿಗಳ ಸಂಗಮವಾಗಿದೆ ಎಂದು ಕಾಸರಗೋಡು ಜಿಲ್ಲೆಯ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ಪ್ರಾಚಾರ್ಯ ಮಹಮ್ಮದ್ ಅಲಿ ಕೆ ಹೇಳಿದರು.

- Advertisement -

ಕನ್ನಡ ವಿಶ್ವವಿದ್ಯಾಲಯದ ಮಂಟಪ ಸಭಾಂಗಣದಲ್ಲಿ ಸಂಗೀತ ಮತ್ತು ನೃತ್ಯ ವಿಭಾಗ, ನಾಟಕ ವಿಭಾಗ, ಆಂತರಿಕ ಭರವಸೆ ಕೋಶ ಹಾಗೂ ಗೋವಿಂದ ಪೈ ಸ್ಮಾರಕ ಕಾಲೇಜು ಮಂಜೇಶ್ವರ, ಕಾಸರಗೋಡು ಜಿಲ್ಲೆ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ವಿನಿಮಯ ಹಾಗೂ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“1956ರ ಮೊದಲು ಕರ್ನಾಟಕದ ಭಾಗವಾಗಿದ್ದ ಕಾಸರಗೋಡು ಜಿಲ್ಲೆ ನಂತರ ಕೇರಳದ ರಾಜ್ಯಕ್ಕೆ ಸೇರಿತು. ಹೀಗೆ ಭಾಗವಾದ ಪ್ರದೇಶದಲ್ಲಿ ಕಲೆ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಸುಮಾರು ಏಳಕ್ಕಿಂತ ಹೆಚ್ಚು ಭಾಷೆಯನ್ನು ದಿನನಿತ್ಯ ಮಾತನಾಡುತ್ತಾರೆ. ಗೋವಿಂದ ಪೈ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವು ವಿಭಿನ್ನ ಸಂಸ್ಕೃತಿಗಳನ್ನು ಸಹಬಾಳ್ವೆಯಿಂದ ನಡೆಸಿಕೊಂಡು, ರಾಷ್ಟೀಯ ಭಾವೈಕ್ಯತೆಯನ್ನು ಮೂಡಿಸುವ ಹಾಗೂ ವಿವಿಧ ಸಂಸ್ಕೃತಿ ಹಾಗೂ ಕಲೆಯನ್ನು ಬೆಳೆಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾ ಬಂದಿದೆ” ಎಂದು ತಿಳಿಸಿದರು.

ಕನ್ನಡ ವಿಶ್ವವಿದ್ಯಾಲಯದ ಲಲಿತಕಲಾ ನಿಕಾಯದ ಡೀನರಾದ ಡಾ. ಶಿವಾನಂದ ವಿರಕ್ತಮಠ ಮಾತನಾಡಿ, “ಮನುಷ್ಯ ಲೋಕ ಎಂಬುದು ಸಾವಿರ ಆಲೋಚನೆಗಳ ಸಾಗರ. ನಮ್ಮಲ್ಲಿ ಹಲವು ಸಂಸ್ಕೃತಿಯ ವೈವಿಧ್ಯಮಯಗಳನ್ನು ಕಾಣಬಹುದು. ಇಲ್ಲಿ ಒಂದು ಶ್ರೇಷ್ಠ ಇನ್ನೊಂದು ಕನಿಷ್ಟ ಎಂಬುವುದಿಲ್ಲ. ಸಂಸ್ಕೃತಿಗೆ ಅನುಗುಣವಾಗಿ ತಮ್ಮದೇ ಆದ ವಿಶಿಷ್ಟತೆಯಿಂದ ರೂಢಿ ಸಂಪ್ರದಾಯಗಳನ್ನು ಆಚರಣೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ನಮ್ಮೆಲ್ಲರ ತಾರತಮ್ಯವನ್ನು ಹೋಗಲಾಡಿಸಲು ಇಂತಹ ಕಾರ್ಯಕ್ರಮಗಳು ಹಮ್ಮಿಕೊಳ್ಳುವುದು ಬಹಳ ಮುಖ್ಯ” ಎಂದರು.

ಇದನ್ನೂ ಓದಿ: ವಿಜಯನಗರ | ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಜಾಹ್ನವಿ ನೇಮಕ

ಕನ್ನಡ ವಿಶ್ವವಿದ್ಯಾಲಯದ ಕುಲಸಚಿವಡಾ. ವಿಜಯ ಪೂಣಚ್ಚ ತಂಬಂಡ ಮಾತನಾಡಿ, “ಕನ್ನಡದ ಕಲೆ, ಸಂಸ್ಕೃತಿ ಹಾಗೂ ಸಂಗೀತವನ್ನು ಜಗತ್ತಿನಾದ್ಯಂತ ಪರಿಚಯಿಸುವ ಜವಾಬ್ದಾರಿ ನಮ್ಮ ಮೇಲಿದೆ. ಇನ್ನೂ ಕಾಸರಗೋಡು ಜಿಲ್ಲೆಯಲ್ಲಿ ಗೋವಿಂದ ಪೈ ಕಾಲೇಜಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಕನ್ನಡ ಸರಳವಾಗಿ ಮಾತನಾಡುತ್ತಿದ್ದಾರೆ. ಹೀಗೆ ಕನ್ನಡವನ್ನು ಇನ್ನೂ ಹೆಚ್ಚು ಜನರು ಕಲಿತು ಇದರಲ್ಲಿನ ಸೂಕ್ಷ್ಮತೆಯ ವಿಚಾರಗಳನ್ನು ತಿಳಿಯಬೇಕು” ಎಂದರು.

ಕಾರ್ಯಕ್ರಮದಲ್ಲಿ ಸಂಗೀತ ಮತ್ತು ನೃತ್ಯ ವಿಭಾಗ ಮುಖ್ಯಸ್ಥರಾದ ವೀರೇಶ ಬಡಿಗೇರ, ಕನ್ನಡ ವಿಶ್ವವಿದ್ಯಾಲಯ ಹಾಗೂ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಕಾಲೇಜಿನ ಅಧ್ಯಾಪಕರು, ಪ್ರೊ.ಎ. ಶ್ರೀಧರ, ಡಾ.ಡಿ. ಮೀನಾಕ್ಷಿ, ಶಕುಂತಲ ಚೌಡನಾಯ್ಕ, ಸಂಗೀತ ವಿಭಾಗದ ಅಧ್ಯಾಪಕರು, ಬೋಧಕೇತರ ಸಿಬ್ಬಂದಿಗಳು, ಎಲ್ಲಾ ನಿಕಾಯದ ವಿದ್ಯಾರ್ಥಿಗಳು. ಬಿ. ಸತೀಶ,‌ಜ್ಯೋತಿ ಎಂ. ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...

ಮಂಗಳೂರು | ಯುಪಿಐಗೆ ಶುಲ್ಕ? ‘ಡಿಜಿಟಲ್ ಇಂಡಿಯಾ’ ಆಶಯಕ್ಕೆ ವಿರುದ್ಧ: ಪದ್ಮರಾಜ್ ಪೂಜಾರಿ

ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿಲುವು...