ವಿಜಯನಗರ | ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಅವಹೇಳನ; ಆರಗ ಜ್ಞಾನೇಂದ್ರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹ

Date:

ಬಿಜೆಪಿ ಮಾಜಿ ಸಚಿವ ಆರಗ ಜ್ಞಾನೇಂದ್ರನ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು‌ ಹೊಸಪೇಟೆ ಘಟಕದ ಬಾಬಾ ಸಾಹೇಬ ಅಂಬೇಡ್ಕರ್ ಸಂಘಟನೆ ಕಾರ್ಯಕರ್ತರು ವಿಜಯನಗರ ಜಿಲ್ಲೆ ಹೊಸಪೇಟೆ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆ ನಡೆಸಿದರು.

- Advertisement -

“ಹಿರಿಯ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆಯವರಿಗೆ ಬಿಜೆಪಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ವರ್ಣಭೇದ ಮಾಡುವುದರ ಮೂಲಕ ದ್ರಾವಿಡರ ಅಸ್ಮಿತೆಯ ಬಣ್ಣವಾದ ಕಪ್ಪು ಬಣ್ಣವನ್ನು ಹಿಯ್ಯಾಳಿಸುವುದರ ಜೊತೆಗೆ ಜನಾಂಗೀಯ ನಿಂದನೆ ಮಾಡಿದ್ದಾರೆ. ಇವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಸಂವಿಧಾನದಲ್ಲಿ ಧರ್ಮ, ಜನಾಂಗ, ಜಾತಿ, ಲಿಂಗ ಅಥವಾ ಜನಾಂಗೀಯ ಆಧಾರದ ಮೇಲೆ ಮಾತನಾಡುವುದನ್ನು ನಿಷೇಧಿಸಿದೆ. ಆದರೂ ಮನುವಾದವನ್ನು ಹೊತ್ತಿರುವ ಆರಗ ಜ್ಞಾನೇಂದ್ರನ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಬೆಳೆಹಾನಿ ಜಂಟಿ ಸಮೀಕ್ಷೆಗೆ ರೈತ ಸಂಘ ಒತ್ತಾಯ

ಅಂಬೇಡ್ಕರ್ ಸಂಘದ ಜಿಲ್ಲಾ ಅಧ್ಯಕ್ಷ ಟಿ ವಾಸುದೇವ್, ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಬಣ್ಣದ ಮನೆ, ಜೈ ಶಿವಕುಮಾರ್, ಪ್ರಗತಿಪರ ಸಂಘಟನೆಯ ಮುಖಂಡರುಗಳಾದ ದುರ್ಗಪ್ಪ ಪೂಜಾರ್, ತಮ್ಮನಳ್ಳೆಪ್ಪ ಡಿ ವೆಂಕಟರಮಣ, ಆಟೋ ರಾಮಚಂದ್ರ, ವೀರಭದ್ರ ನಾಯಕ, ಸಜ್ಜದ್ ಖಾನ್, ಮುದುಕಪ್ಪ, ನೀಲಕಂಠ, ಇಂತಿಯಾಜ್ ಓಬಳೇಶ್, ಹುಲುಗಣ್ಣ, ಗುಲಾಂ ರಸೂಲ್, ಕಾರಿಗನೂರು ರಾಮಕೃಷ್ಣ, ಚಲವಾದಿ ಮಹಾಸಭಾದ ಮುಖಂಡರಾದ ಜಿಕೆಟಿ ಕೊಟ್ರೇಶ್, ಸುನಿಲ್ ಕುಮಾರ್, ಕೂಡ್ಲಿಗಿ ಕೊಟ್ರೇಶ್, ಜಗದೀಶ್ ಸೇರಿದಂತೆ ಬಹುತೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...