ವಿಜಯನಗರ | ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿ ಬಂಧನ

Date:

Advertisements

ಅಪ್ರಾಪ್ತೆ ಮೇಲೆ 47 ವರ್ಷದ ಕಾಮುಕನೊಬ್ಬ ಅತ್ಯಾಚಾರವೆಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಸಿದ್ದಾಪುರ ವಡ್ಡರಹಟ್ಟಿಯಲ್ಲಿ ಮೇ 29ರಂದು ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದಿತ್ತು. ಗುರುವಾರ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತ ಆರೋಪಿ ಸಿದ್ದಾಪುರ ವಡ್ಡರಹಟ್ಟಿಯ ಗೊಣಬಾವಿ ಹನುಮಂತಪ್ಪ ಅಲಿಯಾಸ್ ಗುಂಡೂರಾವ್ (47) ಎಂದು ಗುರುತಿಸಲಾಗಿದೆ.

ಘಟನೆ ವಿವರ: ಆರೋಪಿಯು ಬಾಲಕಿಯನ್ನು ಮಾತನಾಡಿಸಿ, ಹೆದರಿಸಿ ಅಲ್ಲಿಯೇ ಇದ್ದ ಕಣಕ್ಕೆ ಎಳೆದೊಯ್ದಿದ್ದಾನೆ. ಬಾಲಕಿಯ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರವೆಸಗಿದ್ದಾನೆ. ಈ ವಿಷಯವನ್ನು ಮನೆಯಲ್ಲಿ ತಿಳಿಸಿದರೆ ಕೊಲೆ ಮಾಡುವ ಬೆದರಿಕೆಯನ್ನೂ ಹಾಕಿದ್ದಾನೆ ಎಂದು ಬಾಲಕಿಯ ತಾಯಿ ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

ಘಟನೆ ಕುರಿತು ವಿಚಾರಿಸಲು ಹೋದ ತಾಯಿಗೂ ಹನುಮಂತಪ್ಪ ಬೆದರಿಕೆ ಹಾಕಿದ್ದಾನೆ. ಆ ಬಳಿಕ ತಾಯಿ ಗ್ರಾಮದ ಹಿರಿಯರಿಗೆ ತಿಳಿಸಿ ಮೇ 29ರಂದು ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಹೊಸಹಳ್ಳಿ ಪೊಲೀಸರು ಆರೋಪಿಯನ್ನು ಅಂದೇ ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ...

ರಸ್ತೆ ತುಂಬಾ ತಗ್ಗು ಗುಂಡಿಗಳದ್ದೇ ಕಾರುಬಾರು; ಸವಾರರ ಜೀವಕ್ಕೆ ‘ಗ್ಯಾರಂಟಿ’ಯೇ ಇಲ್ಲ!

ರಾಯಚೂರಿನ ಅನ್ವರಿ - ಹಟ್ಟಿ ಚಿನ್ನದ ಗಣಿ ಪಟ್ಟಣಕ್ಕೆ ಹೋಗುವ ಮುಖ್ಯ...

Download Eedina App Android / iOS

X