ವಿಜಯನಗರ | ಮನರೇಗಾ ಯೋಜನೆ; ಸಮರ್ಪಕ ಅನುಷ್ಠಾನಕ್ಕೆ ‘ಗ್ರಾಕೂಸ’ ಒತ್ತಾಯ

Date:

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆಯನ್ನು ಸಮರ್ಪಕ ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿ ಗ್ರಾಕೂಸ ಮುಖಂಡರು ವಿಜಯನಗರ ಜಿಲ್ಲೆಯ ಮರಬ್ಬಿಹಾಳು, ಮಾಲವಿ, ಬನ್ನಿ ಕಲ್ಲು ಹಾಗೂ ಬಳ್ಳಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

“ಮನರೇಗಾ ಯೋಜನೆಯಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಪರಿಹಾರ ಇಲ್ಲದೆ ಹೈರಾಣಾಗುತ್ತಿದ್ದೇವೆ. ಹಾಗಾಗಿ ಪ್ರತಿ ಸಮಸ್ಯೆಗೂ ರಾಜ್ಯ ಹಾಗೂ ಕೇಂದ್ರ ಮಟ್ಟದಲ್ಲಿ ಬಗೆಹರಿಸಬೇಕು. ಇಲ್ಲವೇ ಪರಿಹಾರ ಬಗೆಹರಿಸಲು ಸ್ಥಳೀಯ ಸರ್ಕಾರ ಗ್ರಾಮ ಪಂಚಾಯಿತಿಗೆ ಅಧಿಕಾರ ಕೊಡಬೇಕು” ಎಂದು ಆಗ್ರಹಿಸಿದರು.

“ಹಳೆ ಉದ್ಯೋಗ ಚೀಟಿ(ಜಾಬ್ ಕಾರ್ಡ್) ರದ್ದು ಮಾಡಿ ಹೊಸ ಜಾಬ್ ಕಾರ್ಡ್ ನೀಡುವುದು, ಆಧಾರ್ ಕಾರ್ಡ್ ಲಿಂಕ್ ಮಾಡುವುದು, ಇನ್ನಿತರ ಕೆಲಸಗಳು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯಬೇಕು” ಎಂದು ಒತ್ತಾಯಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ತಾಲೂಕು ಗ್ರಾಕೂಸ ಕಾರ್ಯಕರ್ತೆ ಅಕ್ಕಮ್ಮ ಮರಬ್ಬಿ ಹಾಳು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಮನರೇಗಾ ಬಜೆಟ್ ಅತಿ ಕಡಿಮೆ ಇದೆ. ಕೆಲಸ ಮಾಡಿದ 2 ತಿಂಗಳ ಕೂಲಿ ಹಣದಲ್ಲಿ ಒಂದು ವಾರ ಹಾಗೂ ಎರಡು ವಾರದ ಹಣ ಖಾತೆಗೆ ಜಮಾ ಆಗಿದ್ದು , ಕಾರ್ಮಿಕರಿಗೆ 15 ದಿನಗಳ ಒಳಗಾಗಿ ಹಣ ಪಾವತಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ. ನಿರಂತರ 100 ದಿನಗಳ ಕೆಲಸಕ್ಕೆ ಸಮಯಕ್ಕೆ ಸರಿಯಾಗಿ ಕೂಲಿ ಪಾವತಿಸುವಂತೆ ಬಜೆಟ್ ಹಣವನ್ನು ಹೆಚ್ಚಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಪಂಪ್‌ಸೆಟ್‌ಗಳಿಗೆ ಮೀಟರ್ ಆಳವಡಿಸದಂತೆ ರೈತ ಸಂಘ ಆಗ್ರಹ

“200 ಮಾನವ ದಿನಗಳ ಕೂಲಿ ಕೊಡಬೇಕು. ಕೂಲಿ ₹600ಕ್ಕೆ ಹೆಚ್ಚಳ ಮಾಡಬೇಕು. ಕೂಲಿ ಕೆಲಸ ಮಾಡುವಾಗ ಕಾರ್ಮಿಕರು ಮೃತಪಟ್ಟರೆ ಸರ್ಕಾರ 5 ಲಕ್ಷ ರೂ. ಪರಿಹಾರ ಘೋಷಿಸಬೇಕು” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮನರೇಗಾ ಯೋಜನೆಯ ಲಾಭ ಬಡವರಿಗೆ ದೊರಕಲಿ: ಬಸವರಾಜ ಗಿರಿತಿಮ್ಮಣ್ಣವರ 

ಮನರೇಗಾ ಯೋಜನೆಯಡಿ ಈ ಬಾರಿ ಸಮುದಾಯ ಕಾಮಗಾರಿಗಳನ್ನು ಸಮರ್ಪಕವಾಗಿ ಕಾರ್ಯ ರೂಪಕ್ಕೆ...

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ ಸಮುದಾಯದ ಅಭ್ಯರ್ಥಿ ಘೋಷಣೆಗೆ ಆಗ್ರಹ

2024ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ...

ಬೀದರ್‌ | ಕೇಂದ್ರ ಸಚಿವ ಭಗವಂತ ಖೂಬಾಗೆ ಇದು ಕೊನೆ ಚುನಾವಣೆ: ಸಚಿವ ಈಶ್ವರ ಖಂಡ್ರೆ

ಕೇಂದ್ರ ಸಚಿವ ಭಗವಂತ ಖೂಬಾ ಅವರ ದುರಂಕಾರ, ಅಧಿಕಾರದ ದರ್ಪ ಹಾಗೂ...

ಕಲಬುರಗಿ | ದಾಖಲೆ ಇಲ್ಲದ 114.72 ಗ್ರಾಂ ಚಿನ್ನ ಹಾಗೂ 3.2 ಕೆ.ಜಿ. ಬೆಳ್ಳಿ ವಶ

ಕಲಬುರಗಿ-ಯಾದಗಿರಿ ಜಿಲ್ಲೆಯ ಗಡಿಯ ನಾಲವಾರ ಚೆಕ್ ಪೋಸ್ಟ್ ಬಳಿ ಗುರುವಾರ (ಮಾ.28)...