ವಿಜಯನಗರ | ಶಂಕರರ ‘ಅನ್ಯ’ ಕಾದಂಬರಿ ಅವಲೋಕನ; ಹಂಪಿ ವಿವಿ ವಿದ್ಯಾರ್ಥಿಗಳಿಂದ ಸಂವಾದ

Date:

Advertisements

ವಿಜಯನಗರದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾಂತರ ಅಧ್ಯಯನ ವಿಭಾಗದಲ್ಲಿ ‘ವ್ಯಾಖ್ಯಾನ’ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮದಲ್ಲಿ ಸಾಹಿತಿ ಡಿ ಎ ಶಂಕರ ಅವರ ‘ಅನ್ಯ’ ಕಾದಂಬರಿಯ ಕುರಿತು ಅವಲೋಕನ ಸಂವಾದ ಏರ್ಪಡಿಸಲಾಗಿತ್ತು.

ಈ ಸಂವಾದದಲ್ಲಿ ಮಾತನಾಡಿದ ಸಂಶೋಧನಾರ್ಥಿ ಮಂಜುನಾಥ ಕರಿಲಿಂಗಣ್ಣ, “ಮನುಷ್ಯ ತಾನು ಸೃಷ್ಟಿಸಿಕೊಂಡ ವ್ಯವಸ್ಥೆಯಲ್ಲಿ ತಾನೇ ಹೇಗೆ ಬಂಧಿಯಾದ ಎಂಬ ವಿಷಯವನ್ನು ʼಅನ್ಯʼ ಕಾದಂಬರಿಯು ಚರ್ಚಿಸುತ್ತದೆ. ಅನುವಾದಕರ ಕುರಿತ ಚರ್ಚೆಗಳು ನಡೆಯುವುದೇ ವಿರಳ. ಈ ಅನುವಾದಕರು ತಮ್ಮ ಭಾಷೆಗಳಿಗೆ ಸಲ್ಲಿಸಿದ ಸೇವೆಯನ್ನು ಗುರುತಿಸುವ ಉದ್ದೇಶವನ್ನು ಈ ಕಾರ್ಯಕ್ರಮವು ಪೂರೈಸುತ್ತದೆ. ಮಾನವೀಯ ಮೌಲ್ಯಗಳನ್ನು ಪ್ರಶ್ನಿಸುತ್ತಾ ಹುಟ್ಟಿದುದೆ ಅಸ್ತಿತ್ವವಾದ” ಎಂದು ಹೇಳಿದರು.

“ನಮ್ಮದೇ ವ್ಯವಸ್ಥೆ ನಮ್ಮನ್ನೇ ನಾಶಮಾಡುವಾಗಲೂ ಅದನ್ನು ಒಪ್ಪಿಕೊಳ್ಳುವ ದೀರ್ಘಾವಧಿಯ ಅಭ್ಯಾಸವೊಂದಿದ್ದು, ನಮ್ಮನ್ನು ಸದಾ ಅದಕ್ಕೆ ಸಿದ್ಧವಾಗಿರುವಂತೆ ಮಾಡುತ್ತದೆ. ಈ ಕಾದಂಬರಿಯು ಈಗಾಗಲೇ ಇರುವ ವ್ಯವಸ್ಥೆಯನ್ನು ಪ್ರಶ್ನಿಸುವಂತೆ ಮಾಡುತ್ತದೆ. ಸಮಾಜದ ಭಾವನಾತ್ಮಕ ಲೋಕವನ್ನು ಮುಂದಿಟ್ಟು ಮಾಡಿದ ಅಪರಾಧಗಳಿಗಿಂತ ವ್ಯಕ್ತಿಯ ವ್ಯಕ್ತಿತ್ವವನ್ನೇ ಪ್ರಶ್ನಿಸುತ್ತಿರುತ್ತದೆ. ಸಮಾಜದ ಮಿತ್‌ಗಳನ್ನು ಒಪ್ಪಿಕೊಳ್ಳದವನಿಗೆ ಆ ಸಮಾಜದಲ್ಲಿ ಬದುಕುವ ಅರ್ಹತೆಯಿಲ್ಲ. ಅವನು ಕೇವಲ ಶಿಕ್ಷೆಗೆ ಮಾತ್ರ ಅರ್ಹ ಎಂದು ಕಾದಂಬರಿಯಲ್ಲಿ ನಿರೂಪಿಸಲಾಗಿದೆ” ಎಂದು ಹೇಳಿದರು.

Advertisements

ಇದನ್ನೂ ಓದಿ: ವಿಜಯನಗರ | ಮುಕ್ತ ಚಿಂತನೆಗೆ ಅಪಾಯವಿದೆ: ಎಸ್. ಸಿರಾಜ್ ಅಹಮದ್

ಕಾರ್ಯಕ್ರಮದಲ್ಲಿ ವಿಭಾಗದ ವಿದ್ಯಾರ್ಥಿನಿ ಶ್ವೇತಾ ಬಾಳಿ, ಭಾಷಾಂತರ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಮಾಧವ, ರೆಬೆಕ್ಕ, ಬರ‍್ಗಿ ಜಯಶ್ರೀ, ವಿನೀತ, ವಿಭಾಗದ ವಿದಾರ್ಥಿಗಳು ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ...

ರಸ್ತೆ ತುಂಬಾ ತಗ್ಗು ಗುಂಡಿಗಳದ್ದೇ ಕಾರುಬಾರು; ಸವಾರರ ಜೀವಕ್ಕೆ ‘ಗ್ಯಾರಂಟಿ’ಯೇ ಇಲ್ಲ!

ರಾಯಚೂರಿನ ಅನ್ವರಿ - ಹಟ್ಟಿ ಚಿನ್ನದ ಗಣಿ ಪಟ್ಟಣಕ್ಕೆ ಹೋಗುವ ಮುಖ್ಯ...

Download Eedina App Android / iOS

X