ವಿಜಯನಗರ | ಕ್ರೀಡಾ ಅಕಾಡೆಮಿ ಆರಂಭವಾಗಲಿ: ಪ್ರೊ ಎಸ್ ಎಸ್ ಪಾಟೀಲ್

Date:

Advertisements

ಕ್ರೀಡೆಗಳಿಗೆ ಆದ್ಯತೆ ನೀಡುವ ಸಲುವಾಗಿ ಕ್ರೀಡಾ ಅಕಾಡೆಮಿ ಆರಂಭವಾಗಬೇಕು ಎಂದು ಪ್ರೊ ಎಸ್ ಎಸ್ ಪಾಟೀಲ್ ಅಭಿಮತ ವ್ಯಕ್ತಪಡಿಸಿದರು.

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ಜಿಬಿಆರ್ ಮಹಾವಿದ್ಯಾಲಯದ ಹಾನಗಲ್ ಕುಮಾರಸ್ವಾಮಿ ಸಭಾಭವನದಲ್ಲಿ ಆಯೋಜಿಸಿದ್ದ ತಾಲೂಕು ದೈಹಿಕ ಶಿಕ್ಷಕರ ಸಂಘದ ವಾರ್ಷಿಕ ಕಾರ್ಯನಿರ್ವಹಣಾ ಸಭೆ ಹಾಗೂ ಕ್ರೀಡಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಗ್ರಾಮೀಣ ಪ್ರದೇಶ ಸೇರಿದಂತೆ ಪಟ್ಟಣದ ಶಾಲೆ ಮಕ್ಕಳು, ಕಾಲೇಜು ಯುವಜನರ ಕ್ರೀಡೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸಂಘ ಸಂಸ್ಥೆಗಳ ಸಹಕಾರ ಅಗತ್ಯ” ಎಂದರು.

Advertisements

ಅಯ್ಯನಗೌಡರ ಕೊಟ್ರಗೌಡ ಮಾತನಾಡಿ “ದೈಹಿಕ ಶಿಕ್ಷಕರು ಸವಲತ್ತು ಪಡೆಯಲು ಅನೇಕ ಹೋರಾಟ ನಡೆಸಿದರೂ ಫಲಪ್ರದವಾಗಿಲ್ಲ. ಎಲ್ ವೈದ್ಯನಾಥನ್ ವರದಿ ಈವರೆಗೂ ಜಾರಿಯಾಗದಿರುವುದರಿಂದ ದೈಹಿಕ ಶಿಕ್ಷಕರಿಗೆ ಹಿನ್ನಡೆ ಉಂಟಾಗಿದೆ. ಶಾಲೆಯ ಪರಿಸರ, ಶಿಸ್ತು ಕಾಪಾಡುವಲ್ಲಿ ದೈಹಿಕ ಶಿಕ್ಷಕರ ಪಾತ್ರ ಮಹತ್ವದ್ದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಜಿಲ್ಲಾ ದೈಹಿಕ ಅಧೀಕ್ಷಕ ಮಂಜುನಾಥ ಮಾತನಾಡಿ, “ಜಿಲ್ಲೆಯಲ್ಲಿ ಪ್ರತಿಭಾವಂತರಿಗೆ ಕೊರತೆಯಿಲ್ಲ. ಆದರೆ ದೈಹಿಕ ಶಿಕ್ಷಕರ ಸಂಖ್ಯೆ ಕಡಿಮೆಯಾಗುತ್ತಿದೆ. ಇದರಿಂದ ಕ್ರೀಡೆಯಲ್ಲಿ ಸಾಧನೆಗೆ ಹಿನ್ನಡೆ ಉಂಟಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ವಿ ಬಿ ಜಗದೀಶ್, ಗಡ್ಡಿ ಶಿವಕುಮಾರ್, ಜಂಬಣ್ಣ, ಆರ್ ಪುರುಷೋತ್ತಮ, ಎಸ್ ಮುಸ್ತಫಾ, ಮಂಜುನಾಥ, ವಿ ಹನುಮಂತಪ್ಪ, ಜಿ ಎಂ ಕಾಂತೇಶ್, ಎಂ ಶಿವಲಿಂಗಪ್ಪ, ಎಂ ಶೇಖ್ ಅಹಮದ್, ದ್ವಾರಕೀಶ್ ರೆಡ್ಡಿ ಎಸ್, ಭರತ್ ಲಾಲ್ ಚೌವ್ಹಾಣ್‌ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X