ವಿಜಯನಗರ | ನಂದಿನಿ ಉಳಿಸುವಂತೆ ರಾಜ್ಯ ರೈತ ಸಂಘ ಆಗ್ರಹ

Date:

  • ನಂದಿನಿ ಬ್ರ್ಯಾಂಡ್ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿ
  • ಹೈನುಗಾರಿಕೆ ಕ್ಷೇತ್ರದಲ್ಲಿ ಲಕ್ಷಾಂತರ ಉದ್ಯೋಗಗಳು ಸೃಷ್ಟಿ

ರಾಜ್ಯದ ನಂದಿನಿ ಹಾಲು ಮತ್ತು ಉತ್ಪನ್ನಗಳನ್ನು ನಾಶ ಮಾಡಲು ಗುಜರಾತ್ ಮೂಲದ ಅಮುಲ್ ಉತ್ಪನ್ನಗಳನ್ನು ರಾಜ್ಯದಲ್ಲಿ ಮುಕ್ತ ಮಾರುಕಟ್ಟೆಗೆ ಬಿಟ್ಟಿರುವ ಬಿಜೆಪಿ ಸರ್ಕಾರದ ಹುನ್ನಾರವನ್ನು ಖಂಡಿಸುತ್ತೇವೆ ಎಂದು ರಾಜ್ಯ ರೈತ ಸಂಘ ಆಕ್ರೋಶ ವ್ಯಕ್ತಪಡಿಸಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ʼನಂದಿನಿ ಉಳಿಸಿʼ ಎಂಬ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಿದ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

“ಸಹಕಾರಿ ಕ್ಷೇತ್ರದಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನವನ್ನು ಮಾರಾಟ ಮಾಡುತ್ತಿದ್ದು, ನಂದಿನಿ ಬ್ರ್ಯಾಂಡ್ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ರಾಜ್ಯದ ರೈತಾಪಿ ಅದರಲ್ಲೂ ಸಣ್ಣ, ಅತಿ ಸಣ್ಣ ಮತ್ತು ಕೃಷಿ ಕಾರ್ಮಿಕರು, ಹೈನುಗಾರಿಕೆಯನ್ನು ಅವಲಂಬಿಸಿ ಜೀವನವನ್ನು ಕಟ್ಟಿಕೊಳ್ಳುತ್ತಿದ್ದಾರೆ. ಇದರಿಂದ ಈ ಕ್ಷೇತ್ರದಲ್ಲಿ ಲಕ್ಷಾಂತರ ಉದ್ಯೋಗಗಳೂ ಕೂಡ ಸೃಷ್ಟಿಯಾಗಿದೆ” ಎಂದರು.

“ಕೇಂದ್ರ ಮತ್ತು ರಾಜ್ಯ ಸರ್ಕಾರ ಗುಜರಾತ್ ಮೂಲದ ಅಮುಲ್ ಹಾಲು ಮತ್ತು ಹಾಲಿನ ಉತ್ಪನ್ನವನ್ನು ರಾಜ್ಯದ ಮಾರುಕಟ್ಟೆಗೆ ತಂದು, ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ನಾಶ ಮಾಡಲು ಹೊರಟಿದೆ. ಹಾಗಾಗಿ ಈ ನಡೆಯನ್ನು ತೀರ್ವವಾಗಿ ಖಂಡಿಸುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಮುಲ್‌ ಹಾಲು ಮತ್ತು ಅಮುಲ್‌ ಉತ್ಪನ್ನಗಳ ಮಾರಾಟವನ್ನು ಕೂಡಲೇ ಸ್ಥಗಿತಗೊಳಿಸುವಂತೆ ಆದೇಶಿಸಬೇಕು. ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳಿಗೆ ಒತ್ತುನೀಡಿ ರಾಜ್ಯದ ಹಿತಾಶಕ್ತಿಯನ್ನು ಕಾಪಾಡಿಕೊಳ್ಳಲು ಅನುವು ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರೇಯಸಿಯ ಹುಟ್ಟುಹಬ್ಬ ಆಚರಿಸಿ ಕೊಲೆ ಮಾಡಿದ ಪ್ರಿಯಕರ

“ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಯನ್ನು ಹಿಂಪಡೆದಿದ್ದು, ರಾಜ್ಯ ಸರ್ಕಾರ ಈವರೆಗೂ ಹಿಂಪಡೆದಿಲ್ಲ. ಆದ್ದರಿಂದ ಈ ಸಂಬಂಧ ಮುಂದೆ ಬರುವ ಸರ್ಕಾರಗಳ ಮಧ್ಯೆ ಪ್ರವೇಶಿಸಿ ರೈತರ ಹಿತ ಕಾಪಾಡಬೇಕು. ಜೊತೆಗೆ ರಾಜ್ಯದ ಹೈನುಗಾರಿಕೆ ಉಳಿಸಬೇಕು” ಎಂದು ಆಗ್ರಹಿಸಿದರು.

ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಬಿ ಗೋಣಿಬಸಪ್ಪ, ಅಧ್ಯಕ್ಷ ಜಿ ಸೋಮಶೇಖರ, ಮಮತ, ಜಯಮ್ಮ, ಯಶೋಧ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಗ್ರಾಮ ವಾಸ್ತವ್ಯ

ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್‌ ಗ್ರಾಮ ವಾಸ್ತವ್ಯ...

ಕಲಬುರಗಿ | ಹೈ-ಕ ಭಾಗದ ಸಾಹಿತಿಗಳೆಂಬ ಹಣೆಪಟ್ಟಿ ಏಕೆ: ಡಾ. ಚಿದಾನಂದ ಸಾಲಿ

ದಲಿತ ಸಾಹಿತಿಗಳು ಅಂತ ಇರುವ ಹಾಗೆ, ಬ್ರಾಹ್ಮಣ ಕತೆಗಾರರು ಎಂಬ ಹೆಸರು...

ಮದ್ಯದಂಗಡಿ ಬೇಡ – ನೀರು, ಆರೋಗ್ಯ, ಆಹಾರ ಕೊಡಿ; ಸ್ಲಂ ಜನಾಂದೋಲನ ಒತ್ತಾಯ

ನಾಗರೀಕ ಸಮಾಜಕ್ಕೆ ಬೇಕಿರುವುದು ನೀರು, ನೈರ್ಮಲ್ಯ, ಆರೋಗ್ಯ ಮತ್ತು ಆಹಾರವೇ ಹೊರತು,...

ರಾಯಚೂರು | 9 ವರ್ಷಗಳಿಂದ ಅಂಗನವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ರೋಡಲ ಬಂಡಾ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ...