ವಿಜಯನಗರ | ಶಿಕ್ಷಕರ ಕೂಗಾಟ, ಚೀರಾಟ ಮನಬಂದಂತೆ ಕುಣಿತ; ಸಾರ್ವಜನಿಕರಿಂದ ಆಕ್ರೋಶ

Date:

Advertisements

ಶಿಕ್ಷಕರ ಕೂಗಾಟ, ಚೀರಾಟ ಮನಬಂದಂತೆ ಕುಣಿದಿರುವ ದೃಶ್ಯ ಕಂಡು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ನಡೆದಿದೆ.

ಹರಪನಹಳ್ಳಿ ಪಟ್ಟಣದ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶನಿವಾರ ನಡೆದ ಪ್ರಾಥಮಿಕ ಶಿಕ್ಷಕರ ಪತ್ತಿನ ಸಹಕಾರ ಸಂಘದ ಚುನಾವಣೆ ಫಲಿತಾಂಶದ ಹೆಸರಲ್ಲಿ ಶಿಕ್ಷಕರು ಗುಂಪುಗೂಡಿದ್ದು, ಯಾವುದೇ ಪರವಾನಗಿಯನ್ನು ಪಡೆಯದೆ ಡೋಲು ತಮಟೆಗಳನ್ನು ಬಳಸಿ ಪಟಾಕಿ ಸಿಡಿಸಿ ಅರಾಜಕತೆ ಮೆರವಣಿಗೆ ಮಾಡಿದ್ದಾರೆ. ಶಿಷ್ಟಾಚಾರವನ್ನು ಮರೆತು ಕೂಗುತ್ತ, ಚೀರುತ್ತ ಮನಬಂದಂತೆ ಕುಣಿದು ಕುಪ್ಪಳಿಸಿರುವ ವರ್ತನೆಗೆ ಸಾರ್ವಜನಿಕರು, ಪಟ್ಟಣದ ನಾಗರಿಕರು ಶಿಕ್ಷಕರನ್ನು ನೋಡಿ ತಲೆಬಗ್ಗಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಲ್ಲದೇ ಆಕ್ರೋಶ ವ್ಯಕ್ತವಾಗಿರುವುದು ಕಂಡುಬಂದಿತು.

ಈ ಘಟನೆಯು ಶನಿವಾರ ರಾತ್ರಿ 9:30ರ ಸುಮಾರಿಗೆ ಚುನಾಯಿತ ಶಿಕ್ಷಕರು ಮತ್ತು ಬೆಂಬಲಿತ ಶಿಕ್ಷಕರು ಭಾರೀ ಮೆರವಣಿಗೆಯನ್ನು ಮಾಡಿದ್ದರು. ಸಮಾಜದಲ್ಲಿ ಮಕ್ಕಳಿಗೆ ಉತ್ತಮ ಪಾಠ ಬೋಧನೆ ಮಾಡಿ ಉತ್ತಮ ಸಮಾಜ ಕಟ್ಟಿ, ಸಮಾಜವನ್ನು ಉತ್ತಮದ ಕಡೆಗೆ ನಡೆಸಬೇಕಾದಂಥ ಶಿಕ್ಷಕರೇ ಹೀಗೆ ನೈತಿಕ ಶಿಷ್ಟಾಚಾರವನ್ನು ಉಲ್ಲಂಘಿಸಿ ಮನಬಂದಂತೆ ಕುಣಿಯುತ್ತ ಕೂಗುತ್ತ ಪಟ್ಟಣದ ಪ್ರಮುಖ ಬೀದಿಗಳ ಉದ್ದಕ್ಕೂ ಮೆರವಣಿಗೆ ಮಾಡಿದ್ದು ತೀರಾ ಮುಜುಗರದ ಸಂಗತಿಯಾಗಿದೆ. ಶಿಕ್ಷಕರ ವರ್ತನೆ ಇವತ್ತಿನ ರಾಜಕೀಯ ನಾಯಕರ ವರ್ತನೆಗೂ ಕೆಟ್ಟದಾಗಿದೆ ಎಂದು ಸಾರ್ವಜನಿಕರು ಛೀಮಾರಿ ಹಾಕಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ವಿಪ್‌ ಉಲ್ಲಂಘನೆ; ಮಟಮಪ್ಪ, ವೀಣಾ ರಾಮು ಜೆಡಿಎಸ್‌ನಿಂದ ಉಚ್ಚಾಟನೆ

ಪೊಲೀಸ್ ಇಲಾಖೆಯ ಯಾವುದೇ ಪೂರ್ವ ಅನುಮತಿಯಿಲ್ಲದೆ ಈ ರೀತಿ ಮೆರವಣಿಗೆ ಮಾಡಿರುವುದು ಕಾನೂನನ್ನು ಉಲ್ಲಂಘಿಸಿದಂತೆ ಹಾಗೂ ಇವರ ಮರೆವಣಿಗೆಯಿಂದ ವಾಹನ ಸವಾರರಿಗೂ ಸಾಕಷ್ಟು ಕಿರಿಕಿರಿ ಉಂಟಾಗಿ ಅರ್ಧಗಂಟೆಗೂ ಹೆಚ್ಚುಕಾಲ ವಾಹನಗಳು ರಸ್ತೆಯಲ್ಲೇ ನಿಂತಿದ್ದರೂ ಕೂಡಾ ಪೊಲೀಸರು ಮಾತ್ರ ಇತ್ತಕಡೆ ತಿರುಗಿಯೂ ನೋಡಿಲ್ಲ. ಆದುದರಿಂದ ಸಂಬಂಧಪಟ್ಟ ವಿಜಯನಗರ ಜಿಲ್ಲಾಧಿಕಾರಿ, ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶಿಕ್ಷಣ ಇಲಾಖೆಯ ಆಯುಕ್ತರು, ಇತ್ತ ಕಡೆ ಗಮನಹರಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಮೌಖಿಕವಾಗಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X