ವಿಜಯನಗರ | ತಗಡಿನ ಶೆಡ್‌ನಲ್ಲಿ ಮಕ್ಕಳಿಗೆ ಪಾಠ; ಹೊಸ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ

Date:

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ವಿಜಯನಗರ ಜಿಲ್ಲೆ ಹರಪನಹಳ್ಳಿ ಪಟ್ಟಣದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ತೆರೆದಿದೆ. ಆದರೆ, ಸ್ವಂತ ಕಟ್ಟಡವಿದೆ, ಇಲಾಖೆಯ ಒಂದೇ ಕಟ್ಟಡದಲ್ಲಿ ಬಾಲಕ, ಬಾಲಕಿಯರ ವಾಸ್ತವ್ಯ ಮತ್ತು ತರಗತಿ ನಡೆಯುತ್ತಿದೆ.

- Advertisement -

ಇರುವ ಕಟ್ಟಡದಲ್ಲಿ ವಿದ್ಯಾರ್ಥಿಗಳಿಗೆ ಸ್ಥಳದ ಅಭಾವ ಉಂಟಾಗಿದ್ದು, ತಗಡಿನ ಶೆಡ್‌ನಲ್ಲಿ ಪಾಠ, ಹೊರಾಂಗಣದಲ್ಲಿ ಲಗೇಜು, ಒಂದೇ ಕೊಠಡಿಯಲ್ಲಿ 25ರಿಂದ 30 ವಿದ್ಯಾರ್ಥಿಗಳು ವಾಸಮಾಡುತ್ತಿದ್ದಾರೆ. ವಸತಿ ಶಾಲೆಗೆ ಸ್ವಂತ ಕಟ್ಟಡವಿಲ್ಲ. ಎರಡು ವರ್ಷಗಳಿಂದ ಶೃಂಗಾರತೋಟ ಗ್ರಾಮದ ಸಮೀಪ ಹೊಸ ಕಟ್ಟಡವನ್ನು ನಿರ್ಮಾಣ ಮಾಡಲಾಗುತ್ತಿದ್ದು, ಕಟ್ಟಡ ನಿರ್ಮಾಣಕಾರ್ಯ ನಿಧಾನಗತಿಯಲ್ಲಿ ಸಾಗುತ್ತಿದೆ. ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

2017-18ನೇ ಶೈಕ್ಷಣಿಕ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರಂಭವಾಗಿತ್ತು. ಆರಂಭದಲ್ಲಿ ಪಟ್ಟಣದ ಕೆಎಚ್‍ಬಿ ಬಡಾವಣೆಯಲ್ಲಿ ಬಾಡಿಗೆ ಕಟ್ಟಡದಲ್ಲಿ ನಡೆಯುತಿತ್ತು. 2022-23ನೇ ಸಾಲಿನಲ್ಲಿ ವಸತಿ ಇಲಾಖೆಯ, ವಸತಿ ನಿಲಯದ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಯಿತು.

ಇಲ್ಲಿ 6ರಿಂದ 10ನೇ ತರಗತಿವರೆಗೆ 250 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 8 ಕಾಯಂ ಶಿಕ್ಷಕರು, 3 ಅತಿಥಿ ಶಿಕ್ಷಕರು, 8 ಜನ ಡಿ ದರ್ಜೆಯ ನೌಕರರು ಸೇರಿದಂತೆ 19 ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ.

ವಸತಿ ನಿಲಯ ಎರಡು ಅಂತಸ್ತಿನ ಕಟ್ಟಡವಾಗಿದ್ದು, ನೆಲಮಹಡಿಯಲ್ಲಿರುವ 6 ಕೋಣೆಗಳಲ್ಲಿ ಬಾಲಕರು, ಮೇಲ್ಭಾಗದ ಕೋಣೆಗಳಲ್ಲಿ ಬಾಲಕಿಯರು ಉಳಿದುಕೊಂಡಿದ್ದಾರೆ. ಜಾಗ ಸಾಲದೆ ಅಡುಗೆ ಕೋಣೆ, ಊಟದ ಹಾಲ್‌ನಲ್ಲೂ ವಿದ್ಯಾರ್ಥಿಗಳು ಮಲಗುತ್ತಾರೆ.

ಶಾಲೆಯ ಸಿಬ್ಬಂದಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಟ್ಟಡದ ಹಿಂಭಾಗದಲ್ಲಿ ನಿರ್ಮಿಸಿರುವ ತಗಡಿನ ಚಪ್ಪರ, ತಗಡಿನ ಛಾವಣಿಗಳಲ್ಲಿ 8ರಿಂದ 10ನೇ ತರಗತಿಗಳಿವೆ. ವಿದ್ಯಾರ್ಥಿಗಳು ಉಳಿದುಕೊಳ್ಳುವ ಕೊಠಡಿಯಲ್ಲಿಯೇ 6ಮತ್ತು 7ನೇ ತರಗತಿ ನಡೆಸಲಾಗುತ್ತಿದೆ. ಮಕ್ಕಳ ಲಗೇಜ್‍, ಕಚೇರಿಗೆ ಸಂಬಂಧಿಸಿದ ವಸ್ತುಗಳನ್ನು ಹೊರಾಂಗಣದಲ್ಲಿ ಇರಿಸಲಾಗಿದೆ.

ಆದಷ್ಟು ಬೇಗ ಶೃಂಗಾರತೋಟ ಸಮೀಪದ ನಿರ್ಮಾಣವಾಗುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡ ಶೀಘ್ರ ಪೂರ್ಣಗೊಂಡು, ಹಸ್ತಾಂತರಿಸಿದರೆ ಮಕ್ಕಳಿಗೆ ಅನುಕೂಲವಾಗುತ್ತದೆ ಎನ್ನುತ್ತಿದ್ದಾರೆ ಪೋಷಕರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...