ವಿಜಯನಗರ | ಪೊಲೀಸರು ವ್ಯಕ್ತಿಗೆ ಮನಸೋ ಇಚ್ಛೆ ಹೊಡೆದು ಕೊಂದ ಆರೋಪ: ಲಾಕಪ್‌ ಡೆತ್‌ ಪ್ರಕರಣ ದಾಖಲು

Date:

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಆಗಿರುವ ಆರೋಪ ಕೇಳಿ ಬಂದಿದೆ. ಪೊಲೀಸ್‌ ವಶದಲ್ಲಿದ್ದ ವ್ಯಕ್ತಿಗೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದು, ಮೃತ ಖಲೀಲ್ ಬೆನ್ನು ಹಾಗೂ ತಲೆಗೆ ಬಲವಾದ ಏಟು ಬಿದ್ದು ಮೃತಪಟ್ಟಿದ್ದಾರೆಂದು ಹೇಳಲಾಗುತ್ತಿದೆ.

- Advertisement -

ಮೃತ ಖಲೀಲ್ ಪತ್ನಿ ಶೈನಾಜ್ ದೂರಿನ ಅನ್ವಯ ಹೆಡ್ ಕಾನ್‌ಸ್ಟೆಬಲ್‌ ಸೇರಿ ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ. ಹಗರಿಬೊಮ್ಮನಹಳ್ಳಿ ಠಾಣಾ ಹೆಡ್ ಕಾನ್‌ಸ್ಟೆಬಲ್‌ ಇಟಗಿ ರಾಘವೇಂದ್ರ ಎಐ ಹಾಗೂ ಕಾನ್‌ಸ್ಟೆಬಲ್ ವೆಂಕಟೇಶ್ ವಿರುದ್ಧ ಎಫ್‌ಐಆರ್ ರೆಜಿಸ್ಟರ್ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಶನಿವಾರ ರಾತ್ರಿ ಮೃತ ಖಲೀಲ್ ಹಾಗೂ ಶೈನಾಜ್ ಮಧ್ಯೆ ಜಗಳ ಆಗಿತ್ತು. ಸ್ಥಳೀಯರ ಮಾಹಿತಿ ಮೇರೆಗೆ ಖಲೀಲ್‌ನನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದರು. ರಾತ್ರಿ ವೇಳೆ ವಿಚಾರಣೆಗೆಂದು ಕರೆದಾಗ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಬಲವಾದ ಏಟು ಬಿದ್ದ ಹಿನ್ನೆಲೆಯಲ್ಲಿ ಖಲೀಲ್ ತಲೆ, ಕಿವಿಯಲ್ಲಿ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಪೊಲೀಸರೇ ಹೊಡೆದು ಕೊಂದಿದ್ದಾರೆ ಎಂದು ಆರೋಪಿಸಿ ಪತ್ನಿ ಶೈನಾಜ್ ದೂರು ನೀಡಿದ್ದಾರೆ. ಆದರೆ ಪೊಲೀಸರು, ಖಲೀಲ್ ಪಿಟ್ಸ್ ಬಂದು ಮೃತಪಟ್ಟಿದ್ದಾರೆಂದು ಸಬೂಬು ಹೇಳಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿದ್ದೀರಾ? ತುಮಕೂರು | ಜನ ಚಳುವಳಿಗಳ ಅನ್ನದಾತೆ ಉಮಕ್ಕಾ ನಿಧನ

ಲಾಕಪ್‌ಡೆತ್ ಹಿನ್ನೆಲೆಯಲ್ಲಿ ಎಸ್‌ಪಿ ಜಾಹ್ನವಿ ಅವರು ನಿನ್ನೆ ಇಡೀ ದಿನ ಹಗರಿಬೊಮ್ಮನಹಳ್ಳಿ ಠಾಣೆಯಲ್ಲೇ ಮೊಕ್ಕಾಂ ಹೂಡಿದ್ದರು. ಸ್ಟೇಷನ್ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ಜನರು ಜಮಾವಣೆ ಆಗಿದ್ದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದರು.

ಮೃತ ವ್ಯಕ್ತಿ ಪತ್ನಿ ನೀಡಿದ ದೂರಿನ ಮೇರೆಗೆ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಲಾಕಪ್‌ ಡೆತ್ ಅಡಿ ಪ್ರಕರಣ ದಾಖಲಾಗಿದೆ. ಲಾಕಪ್ ಡೆತ್ ಹಿನ್ನೆಲೆ ನ್ಯಾಯಾಧೀಶರ ಸಮ್ಮುಖದಲ್ಲಿ ತನಿಖೆ ಮುಂದುವರೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರಿನಲ್ಲಿ ಸಚಿವ ಸಂಪುಟ; ಕರಾವಳಿ–ಮಲೆನಾಡಿಗೆ ಹೊಸ ರೂಪ: ಸಿಎಂ ಡಿಕೆಶಿ

ಕರಾವಳಿ ಮತ್ತು ಮಲೆನಾಡು ಭಾಗಗಳಿಗೆ ಹೊಸ ರೂಪ ನೀಡುವ ಮೂಲಕ ಇಲ್ಲಿನ...

ಯುಪಿಐ ಪಾವತಿಗೆ ಶುಲ್ಕ; ಕೇಂದ್ರ ಸಚಿವರು ಪಿಕ್ ಪಾಕೆಟ್‌ನಲ್ಲಿ ಪಿಎಚ್‌ಡಿ: ಸಿಎಂ ಡಿ ಕೆ ಶಿವಕುಮಾರ್

"ಯುಪಿಐ ಪಾವತಿಗೆ ವರ್ತಕರ ಮೇಲೆ ಶುಲ್ಕ ವಿಧಿಸಿರುವ ಕೇಂದ್ರ ಸರ್ಕಾರ ಪಿಕ್...

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...