ವಿಜಯಪುರ | ಚಿಕ್ಕ ಚಿಕ್ಕ ಸೇವೆಗಳೂ ದೇಶದ ಪ್ರಗತಿಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ: ಡಾ. ಜಾವೀದ್ ಜಮಾದಾರ

Date:

Advertisements

ಭಯೋತ್ಪಾದನೆ ಚಟುವಟಿಕೆ, ಕೋಮು ಮತ್ತು ಜಾತಿ ಭೇದದ ಸಮಸ್ಯೆಗಳಿಂದ ದೇಶದ ಪ್ರಗತಿ ಕುಂಠಿತವಾಗುತ್ತಿರುವ ಪ್ರಸ್ತುತ ಕಾಲಘಟ್ಟದಲ್ಲಿ, ಎನ್‌ಎಸ್ಎಸ್ ತರಬೇತಿ ಕೇವಲ ಒಂದು ಕಾರ್ಯಕ್ರಮವಾಗಿರದೆ ಯುವಜನತೆಯ ಜೀವನದ ಪ್ರಮುಖ ಅಂಗವಾಗಬೇಕು ಎಂದು ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತ ಸಂಘದ ಅಧ್ಯಕ್ಷ ಡಾ. ಜಾವೀದ್ ಜಮಾದಾರ ಹೇಳಿದರು.

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಎನ್.ಎಸ್.ಎಸ್ ಸ್ನಾತಕ ‘ಬ’ ಹಾಗೂ ಮುಕ್ತ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಷ್ಟ್ರೀಯ ಸೇವಾ ಯೋಜನೆ ಬೆಂಗಳೂರು, ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಕೋಶದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

“ಚಿಕ್ಕ ಚಿಕ್ಕ ಸೇವೆಗಳೂ ದೇಶದ ಪ್ರಗತಿಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ ಎಂಬ ಆರಿವು ಮೂಡಿಸುತ್ತವೆ. ಯುವಕರು ಸಾಮಾಜಿಕ ಜಾಲತಾಣಗಳಲ್ಲಿ ಸಮಯ ವ್ಯರ್ಥ ಮಾಡುವ ಬದಲು ಸ್ವಚ್ಛತೆ, ಸಹಬಾಳ್ವೆ, ಸಮಾನತೆ ಮತ್ತು ಸಾಮಾಜಿಕ ಪ್ರಗತಿಗೆ ತೊಡಗಿಸಿಕೊಳ್ಳಬೇಕು. ಮಹಾತ್ಮ ಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್, ಬಸವೇಶ್ವರ, ಏಸು ಕ್ರಿಸ್ತ, ಪೈಗಂಬರ್, ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಪಾಲಿಸುವ ಮೂಲಕ ಸಮಾಜದ ಒಗ್ಗಟ್ಟಿಗೆ ಶ್ರಮಿಸಬೇಕು” ಎಂದರು.

Advertisements

ಈ ಏಳು ದಿನಗಳ ಶಿಬಿರದ ಉದ್ದೇಶಗಳು ಸೇವಾ ಮನೋಭಾವನೆ ಬೆಳೆಸುವುದು, ಪರಿಸರ ಸಂರಕ್ಷಣೆಯ ಅರಿವು ಮೂಡಿಸುವುದು. ನೈರ್ಮಲ್ಯ ಮತ್ತು ರಸ್ತೆ ಸ್ವಚ್ಛತೆಯನ್ನು ಉತ್ತೇಜಿಸುವುದು, ಮಹಿಳಾ ಮತ್ತು ಮಕ್ಕಳ ಜಾಗೃತಿ, ಸ್ತ್ರೀ ಸಬಲೀಕರಣ, ಮತದಾರರ ಜಾಗೃತಿ ಮತ್ತು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಮಾರ್ಗದರ್ಶನ ನೀಡುವುದಾಗಿದೆ. ಇದರ ಮೂಲಕ ವಿದ್ಯಾರ್ಥಿಗಳು ಪರಿಪೂರ್ಣ ವ್ಯಕ್ತಿಗಳಾಗಿ ಸಮಾಜದ ಉಜ್ವಲ ಭವಿಷ್ಯ ಕಟ್ಟುವತ್ತ ಶ್ರಮಿಸಬೇಕಾಗಿದೆ ಎಂದು ಹೇಳಿ. ಮಹಿಳಾ ವಿವಿಗೆ 500 ಗಿಡಗಳನ್ನು ಕೊಡುವ ಭರವಸೆ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಎನ್.ಎಸ್.ಎಸ್. ಕೋಶದ ಸಂಯೋಜನಾಧಿಕಾರಿ ಪ್ರೊ. ಅಶೋಕ್ ಕುಮಾರ ಸುರಪುರ ಮಾತನಾಡಿ, ಏಳು ದಿನಗಳ ಶಿಬಿರ ಕೇವಲ ತಾತ್ಕಾಲಿಕವಾಗಿರದೇ ಜೀವನದುದ್ದಕ್ಕೂ ಶಿಸ್ತು, ಮಾತುಗಾರಿಕೆ, ಬೆಳವಣಿಗೆ, ಸೇವಾ ಮನೋಭಾವನೆಯನ್ನು ಆಳವಡಿಸಿಕೊಳ್ಳಬೇಕು. ಹಾಗೆಯೇ ಓದುವುದು ಅಷ್ಟೇ ಅಲ್ಲ ಸಾಮಾಜಿಕ ಕಾರ್ಯಗಳಲ್ಲಿ ಬೆಳೆಯಬೇಕು. ಮೊದಲು ನಿಮ್ಮ ಮನದಿಂದ ನಂತರ ಮನೆಯಿಂದ ಸೇವೆ ಪ್ರಾರಂಭವಾಗಬೇಕು. ಕೇವಲ ಸುಂದರ ಮಹತ್ವವಲ್ಲ ಆನಂದವಾಗಿರುವುದು ಮುಖ್ಯ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಬಾಸಾಹೇಬರು ಮನುಸ್ಮೃತಿಯನ್ನು ಸುಟ್ಟ ದಿನ

ಸಮಾರಂಭದಲ್ಲಿ ಮಹಿಳಾ ವಿವಿಯ ಡಾ. ಕಲಾವತಿ ಕಾಂಬಳೆ, ಡಾ ಅಶ್ವಿನಿ ಕೆ. ಎನ್. ಡಾ. ಅಮರನಾಥ ಪ್ರಜಾಪತಿ, ವಿವಿಧ ವಿಭಾಗದ ಪ್ರಾಧ್ಯಾಪಕರು, ಮತ್ತು ಎನ್.ಎಸ್.ಎಸ್ ಸ್ನಾತಕ ಹಾಗೂ ಮುಕ್ತ ಘಟಕಗಳ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ಸಮಾರೋಪ ಸಮಾರಂಭದಲ್ಲಿ ಋತುಚಾ ಏಳು ದಿನದ ವಾರ್ಷಿಕ ವಿಶೇಷ ಶಿಬಿರದ ವರದಿ ವಾಚಿಸಿದರು. ಲಕ್ಷ್ಮೀ ಮ್ಯಾಗೇರಿ ಸ್ವಾಗತಿಸಿದರು. ಮಂಜುಳಾ ಚವ್ಹಾಣ ನಿರೂಪಿಸಿದರು. ಮಾಯಾವತಿ ವಂದಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X