ವಿಜಯಪುರ | ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ‌ ಬಿದ್ದು ಯುವತಿ ಮೃತ್ಯು: ಐವರ ಬಂಧನ

Date:

ವಿಜಯಪುರ ನಗರದಲ್ಲಿ ಎರಡು ದಿನಗಳ ಹಿಂದೆ ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಕೆಳಗಡೆ ಬಿದ್ದು ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಈ ಘಟನೆಯ ಕೊನೆ ಕ್ಷಣಗಳು ಮೊಬೈಲ್‌ ನಲ್ಲಿ ಸೆರೆಯಾಗಿದೆ. ಇದರ ದೃಶ್ಯಗಳು ನೋಡುಗರನ್ನು ಬೆಚ್ಚಿ ಬೀಳಿಸುವಂತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ವಿಜಯಪುರದ ನವಭಾಗ್ ರಸ್ತೆಯಲ್ಲಿರುವ ಫಿಶ್ ಟನಲ್ ಎಕ್ಸ್ ‌ಪೋದಲ್ಲಿ ಅಕ್ಟೋಬರ್ 20ರ ಸಂಜೆ ಸಂಭವಿಸಿದ ಈ ಅವಘಡದಲ್ಲಿ ನಿಖಿತಾ ಅರವಿಂದ ಬಿರಾದಾರ (21) ಎಂಬ ಯುವತಿ ಮೃತಪಟ್ಟಿದ್ದರು.

ನಿಖಿತಾ ಹಾಗೂ ಮತ್ತಿಬ್ಬರು ಗೆಳೆಯತಿಯರು ಸೇರಿ ತಲೆ ಕೆಳಗಾಗಿ ತೂಗಾಡಿಸುವ ರೇಂಜರ್ ಸ್ವಿಂಗ್ ತೊಟ್ಟಿಲಿನಲ್ಲಿ ಕುಳಿತು ಆಟವಾಡುತ್ತಿದ್ದರು. ಇದೀಗ ಯುವತಿಯ ಪೋಷಕರ ಮೊಬೈಲ್‌ ನಲ್ಲಿ ಅಂದಿನ ಘಟನೆಯ ಕೊನೆ ಕ್ಷಣಗಳು ಸೆರೆಯಾಗಿರುವುದು ಬೆಳಕಿಗೆ ಬಂದಿದೆ.

Advertisements
1002120311

ತೊಟ್ಟಿಲಿನಲ್ಲಿ ಕುಳಿತಿದ್ದಾಗ ನಿಖಿತಾ ಅವರಿಗೆ ಹಾಕಿದ್ದ ಸೇಫ್ಟಿ ಬೆಲ್ಟ್ ಸಡಿಲಗೊಂಡಿದೆ. ಆಗ ತೊಟ್ಟಿಲು ತಲೆ ಕೆಳಗೆ, ಮೇಲೆ ಮಾಡಿ ತೂಗುತ್ತಿರುವವಾಗಲೇ ಭಯದಿಂದ ಚೀರಾಟ ಮಾಡಿದ್ದಾರೆ. ಈ ವೇಳೆ, ನಿಖಿತಾ ತಾಯಿ ಗೀತಾ ಕೂಡ ರೇಂಜರ್ ಸ್ವಿಂಗ್ ಯಂತ್ರ ನಿಲ್ಲಿಸುವಂತೆ ಆಪರೇಟರ್ ಬಳಿ ಪದೇ ಪದೇ ಕೇಳಿಕೊಂಡಿದ್ದಾರೆ. ಆದರೂ, ಯಂತ್ರವನ್ನು ಆಪರೇಟರ್ ನಿಲ್ಲಿಸಿಲ್ಲ. ಇದರಿಂದ ನಿಖಿತಾ ಕೆಳಗೆ ಬಿದ್ದಿದ್ದಾರೆ. ಇದನ್ನು ಗಮನಿಸಿದ ಫಿಶ್ ಟನಲ್ ಎಕ್ಸ್ಪೋಗೆ ಬಂದಿದ್ದ ಜನರು ಸಹ ಓಡಿ ಬಂದಿರುವ ದೃಶ್ಯಗಳು ಮೊಬೈಲ್‌ನಲ್ಲಿ ದಾಖಲಾಗಿವೆ.

ಆದರೆ, ಕೆಳಗಡೆ ಬಿದ್ದ ರಭಸಕ್ಕೆ ನಿಖಿತಾ ಅವರ ತಲೆ ಮತ್ತು ಕಾಲುಗಳಿಗೆ ತೀವ್ರವಾಗಿ ಪೆಟ್ಟಾಗಿತ್ತು. ನಂತರದಲ್ಲಿ ಪೋಷಕರೇ ಆಟೋದಲ್ಲಿ ಆಕೆಯನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅದೇ ದಿನ ಚಿಕಿತ್ಸೆ ಫಲಕಾರಿಯಾಗದೆ ನಿಖಿತಾ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಕಳಪೆ ಸೇಫ್ಟಿ ಬೆಲ್ಟ್ ಕಾರಣದಿಂದಲೇ ಈ ದುರಂತ ನಡೆದಿದೆ ಎಂದು ಆರೋಪಿಸಲಾಗಿದೆ.

ಈ ಘಟನೆಯ ಸಂಬಂಧ ಫಿಶ್ ಟನಲ್ ಎಕ್ಸ್ಪೋ ಮ್ಯಾನೇಜರ್, ಆಪರೇಟರ್ಸ್ ಹಾಗೂ ಇತರರ ವಿರುದ್ಧ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ, ಆಪರೇಟರ್ ಮತ್ತು ಕ್ಯಾಶಿಯರ್ ಸೇರಿದಂತೆ ಈವರೆಗೆ ಒಟ್ಟು ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...