ವಿಜಯಪುರ | ಕೂಲಿಯಾಸೆಗಾಗಿ ತೆಂಗಿನಮರ ಏರಿದ್ದ ಯುವಕ ಆಯತಪ್ಪಿ ಬಿದ್ದು ಮೃತ್ಯು: ಎಫ್‌ಐಆರ್

Date:

Advertisements

ಕೂಲಿ ಸಿಗುವ ಆಸೆಗಾಗಿ ತೆಂಗಿನಮರಕ್ಕೆ ಏರಿದ್ದ ಯುವಕನೋರ್ವ ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನಲ್ಲಿ ನಡೆದಿದೆ.

ಮೃತಪಟ್ಟ ಯುವಕನನ್ನು 21 ವರ್ಷದ ಅವಿವಾಹಿತ ಯುವಕ ಸಂತೋಷ ಶರಣಪ್ಪ ವಾಲಿಕಾರ ಎಂದು ಗುರುತಿಸಲಾಗಿದೆ.

ಮುದ್ದೇಬಿಹಾಳ ತಾಲೂಕಿನ ಕವಡಿಮಟ್ಟಿ ಗ್ರಾಮದಲ್ಲಿ ಭಾಗ್ಯಾ ಮಹೇಶ ಮುರಾಳ ಎನ್ನುವವರ ಮನೆಯ ಮುಂದೆ ಇದ್ದ ಭಾರಿ ಎತ್ತರದ ತೆಂಗಿನ ಮರ ಏರಿ ತೆಂಗಿನಕಾಯಿ ಮತ್ತು ಒಣಗಿದ ಗರಿ ಕೆಳಗೆ ಇಳಿಸುವಾಗ ಮೇಲಿಂದ ಜಾರಿ ನೆಲಕ್ಕೆ ಬಿದ್ದು ಯುವಕ ಸಂತೋಷ ಮೃತಪಟ್ಟಿದ್ದಾನೆ.

Advertisements

ಸಂತೋಷ ನೆರಬೆಂಚಿ ಗ್ರಾಮದವನಾಗಿದ್ದು, ತನ್ನೂರಲ್ಲೇ ಕುರಿ ಕಾಯುತ್ತಿದ್ದ. ತೆಂಗಿನ ಮರ ಸ್ವಚ್ಛಗೊಳಿಸಿದರೆ ಕೂಲಿ ಸಿಗುತ್ತದೆ ಎನ್ನುವ ಆಸೆಗೆ ಬಿದ್ದು ತನ್ನೂರಿನಿಂದ 10 ಕಿಮಿ ದೂರದಲ್ಲಿರುವ ಕವಡಿಮಟ್ಟಿಗೆ ಬಂದಿದ್ದ. 4-5 ಮನೆಗಳ ಮುಂದಿನ ತೆಂಗಿನ ಮರ ಸ್ವಚ್ಛಗೊಳಿಸಿದ್ದ ಈತ ಮುರಾಳ ಅವರ ಮನೆಯ ಮುಂದಿದ್ದ ಬಹಳಷ್ಟು ಎತ್ತರದ ಮರ ಏರಿದ್ದ. ಎಲ್ಲರೂ ನೋಡುತ್ತಿದ್ದಂತೆಯೇ ಅಂದಾಜು 50-60 ಅಡಿ ಎತ್ತರದಿಂದ ಆಯತಪ್ಪಿ ರಸ್ತೆಯ ಮೇಲೆ ಬಿದ್ದಿದ್ದಾನೆ. ತಲೆಗೆ ಗಂಭೀರ ಪೆಟ್ಟಾಗಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನೆ ಬೆಳಗ್ಗೆ ನಡೆದಿದ್ದರೂ ರಾತ್ರಿ 8.30 ಗಂಟೆಯಾದರೂ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸುವ ಪ್ರಕ್ರಿಯೆ ನಡೆದಿತ್ತು. ಎಫ್ಐಆರ್ ದಾಖಲಾಗದೆ ಶವದ ಮರಣೋತ್ತರ ಪರೀಕ್ಷೆ ನಡೆಯುವುದಿಲ್ಲ. ಹೀಗಾಗಿ ರಾತ್ರಿಯಾದರೂ ಶವ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿಯೇ ಅನಾಥವಾಗಿ ಇತ್ತು. ಎಫ್ಐಆರ್ ಪ್ರಕ್ರಿಯೆ ಪೂರ್ಣಗೊಂಡ ನಂತರ ರಾತ್ರಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಇದನ್ನು ಓದಿದ್ದೀರಾ? ರಾಜ್ಯೋತ್ಸವ ಪ್ರಶಸ್ತಿಗೆ ‘ಮಲಹೊರುವವರ ಯೋಗ್ಯತೆ’ ಬಗ್ಗೆ ಪ್ರಶ್ನೆ: ವಿವಾದದ ಕಿಡಿ ಹೊತ್ತಿಸಿದ ನಾಗೇಶ್ ಹೆಗಡೆ ಪೋಸ್ಟ್‌

ಘಟನೆಗೆ ಸಂಬಂಧಿಸಿ ಮೃತ ಸಂತೋಷನ ತಂದೆ ಶರಣಪ್ಪ ಅಡಿವೆಪ್ಪ ವಾಲಿಕಾರ ಅವರು ಕವಡಿಮಟ್ಟಿಯ ಪ್ರಶಾಂತ ಮಹೇಶ ಮುರಾಳ, ಭಾಗ್ಯ ಮಹೇಶ ಮುರಾಳ, ಪವಿತ್ರಾ ಮಹೇಶ ಮುರಾಳ, ಉಮೇಶ ಸಿದ್ರಾಮಪ್ಪ ಮುರಾಳ, ಪರಪ್ಪ ಸಿದ್ರಾಮಪ್ಪ ಮುರಾಳ ಇವರು ಸಂತೋಷನನ್ನು ಎತ್ತರವಾದ ತೆಂಗಿನ ಮರ ಏರಲು ಒತ್ತಾಯಿಸಿ ನನ್ನ ಮಗನ ಸಾವಿಗೆ ಕಾರಣರಾಗಿದ್ದಾರೆ ಎಂದು ಲಿಖಿತ ದೂರು ನೀಡಿದ್ದಾರೆ. ಅಲ್ಲದೇ, ಕೆಲವು ಸ್ಥಳೀಯ ರಾಜಕೀಯ ವ್ಯಕ್ತಿಗಳಿಂದ ನನಗೆ ಬೆದರಿಕೆ ಇರುವುದರಿಂದ ಸೂಕ್ತ ರಕ್ಷಣೆ ನೀಡಬೇಕೆಂದು ಪೊಲೀಸರನ್ನು ಕೋರಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X