ವಿಜಯಪುರ | ಜಾನಪದ ದಿಗ್ಗಜ ಡಾ. ಸಿಂಪಿ ಲಿಂಗಣ್ಣನವರ 119ನೇ ಜನ್ಮ ದಿನಾಚರಣೆ

Date:

Advertisements

ಜಾನಪದ ದಿಗ್ಗಜ ಕರ್ನಾಟಕ ಜಾನಪದ ರತ್ನ ಡಾ. ಸಿಂಪಿ ಲಿಂಗಣ್ಣನವರ ಜನ್ಮ ದಿನಾಚರಣೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಆಚರಿಸುತ್ತಿರುವುದು ಹೆಮ್ಮೆ ಎನಿಸುತ್ತಿದೆ ಎಂದು ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂಪೀರ ವಾಲೀಕಾರ ಅಭಿಪ್ರಾಯಪಟ್ಟರು.

ವಿಜಯಪುರ ಜಿಲ್ಲೆ ಚಡಚಣ ಪಟ್ಟಣದಲ್ಲಿರುವ ಲಿಂಗಣ್ಣನವರ ಸಮಾಧಿಗೆ ಅವರ 119ನೇ ಜನ್ಮ ದಿನದ ಅಂಗವಾಗಿ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು, ನವೋದಯ ಕಾಲದ ಪ್ರಮುಖ ಸಾಹಿತಿಗಳು ಹಾಗೂ ಜಾನಪದ ತಜ್ಞರಾಗಿ ರಾಜ್ಯದ ಗಮನ ಸೆಳೆದರು. ಶ್ರೇಷ್ಠ ಶಿಕ್ಷಕರು ಮಧುರಚೆನ್ನರ ಒಡನಾಡಿಗಳು ಹಾಗೂ ಅರವಿಂದರ ಭಕ್ತರಾಗಿದ್ದರು.

ಇವರು ಸಂಗ್ರಹಿಸಿದ ಗರತಿ ಹಾಡು, ಜೀವನ ಸಂಗಾತಿ ಅಂತಹ ಜನಪದ ಹಾಡುಗಳ ಕೃತಿಗಳು ಜಾನಪದ ಸಾಹಿತ್ಯ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಅವರ ಸಾಹಿತ್ಯ ಅನೇಕ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ ಎಂದರು.

Advertisements

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಕೋಶಾಧ್ಯಕ್ಷ ಸಂಗಮೇಶ ಮೇತ್ರಿ ಮಾತನಾಡಿ, ಸಿಂಪಿ ಲಿಂಗಣ್ಣ ಜಾನಪದ ಸಂಶೋಧಕರಾಗಿ, ಕವಿಗಳಾಗಿ, ಪ್ರಬಂಧಕಾರ ಹಾಗೂ ನಾಟಕಕಾರ ರಾಜ್ಯಕ್ಕೆ ಪರಿಚಿತರಾಗಿದ್ದರು. 1993ರಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಜರುಗಿದ 62ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಾಕ್ಷರಾಗಿದ್ದರು. ಗಡಿನಾಡಿನ ಜಾನಪದ ಭೀಷ್ಮರಾಗಿದ್ದ ಅವರು ಜಾನಪದ ಸಾಹಿತ್ಯಕ್ಕೆ ಘನತೆ ತಂದು ಕೊಟ್ಟ ಮಹಾನ ಚೇತನ ಎಂದರು.

ಚಡಚಣ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸಿದ್ದಪ್ಪ ಮಾನೆ ಮಾತನಾಡಿ, ಇಂದು ಫೆಬ್ರುವರಿ 10 ಡಾ. ಸಿಂಪಿ ಲಿಂಗಣ್ಣ ನವರ ಜನ್ಮದಿನ, ಇವರು ಮಧುರಚೆನ್ನರ ಜೊತೆ ಕೂಡಿ ಸಂಗ್ರಹಿಸಿದ ಗರತಿಹಾಡುಗಳ ಗ್ರಂಥ ಜಾನಪದ ಸಾಹಿತ್ಯ ಕ್ಷೇತ್ರದಲ್ಲಿ ಆಚಾರ್ಯ ಕೃತಿಯಾಗಿ ನಿಲ್ಲುತ್ತದೆ. ಸಿಂಪಿ ಲಿಂಗಣ್ಣ ಅವರು ಜಾನಪದ ಕ್ಷೇತ್ರದಲ್ಲಿ ನೂರಾರು ಕೃತಿಗಳ ಕೊಡುಗೆ ನೀಡಿದ್ದಾರೆ ಎಂದರು.

ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಸಂಚಾಲಕ ರಾಜೇಸಾಬ ಶಿವನಗುತ್ತಿ, ಸಿಂಪಿ ಲಿಂಗಣ್ಣ ಅವರ ಜೀವನ ಚರಿತ್ರೆ ಕುರಿತು ಮಾತನಾಡಿದರು. ಚಡಚಣ ಸಾಹಿತಿಗಳಾದ ವಿದ್ಯಾ ಕಲ್ಯಾಣಶೆಟ್ಟಿ ಅವರು ಮೊದಲ ಬಾರಿಗೆ ಜಾನಪದ ಲಾವಣಿಗಳ ಕುರಿತು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಬಂಧ ಮಂಡಿಸಿ ಪ್ರಮುಖರಾದವರು ಎಂದರು.

ವೇದಿಕೆಯಲ್ಲಿ ಚಡಚಣ ಅಂಜುಮನ್ ಸಂಸ್ಥೆ ಅಧ್ಯಕ್ಷ ಮುರ್ತುಜಾ ನಧಾಫ್, ಸಂತೋಷ ಕಲ್ಯಾಣಶೆಟ್ಟಿ, ನಿಂಗಪ್ಪ ಅಗಸರ ಮುಂತಾದವರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X