ವಿಜಯಪುರ | ಕಾಂತರಾಜ ಜಾತಿಗಣತಿ ವರದಿ ಬಿಡುಗಡೆಗೆ ಅಹಿಂದ ಮುಖಂಡರ ಆಗ್ರಹ

Date:

Advertisements

ಕಾಂತರಾಜ ಜಾತಿಗಣತಿ ವರದಿ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಅಹಿಂದ ಮುಖಂಡರು ವಿಜಯಪುರ ನಗರದ ಸಾರಿಪುತ್ರ ಬೌದ್ಧ ವಿಹಾರದಲ್ಲಿ ಸಭೆ ಸೇರಿ ಚರ್ಚಿಸಿದರು.

ಸಭೆಯಲ್ಲಿ ಕಾಂತರಾಜ ಅವರ ಜಾತಿಗಣತಿ ವರದಿಯ ಮಹತ್ವ ಮತ್ತು ಅದರ ಅವಶ್ಯಕತೆ ಬಗ್ಗೆ ಚರ್ಚೆ ಮಾಡಿದ ಮುಖಂಡರು, “ಜಾತಿ ಜನಗಣತಿ ಬಹಿರಂಗ ಮಾಡದಂತೆ ಸಿದ್ದರಾಮಯ್ಯ ಮತ್ತು ಸರ್ಕಾರದ ಮೇಲೆ ಕೆಲವರು ಒತ್ತಡ ಹೇರುತ್ತಿದ್ದಾರೆ. ವರದಿ ಬಹಿರಂಗ ಮಾಡುವುದನ್ನು ತಡೆಯುವ ಷಡ್ಯಂತ್ರ ಮಾಡುತ್ತಿರುವ ಶಕ್ತಿಗಳನ್ನು ತಡೆಯಬೇಕಾದರೆ ಅಹಿಂದ ವರ್ಗದ ಶೇ.80ರಷ್ಟು ಜನ ಒಂದಾಗಬೇಕು ಮತ್ತು ಅವರನ್ನು ಜಾಗೃತಿ ಮಾಡಬೇಕು” ಎಂದರು.

ಅಹಿಂದ ಮುಖಂಡರು

ಮಲ್ಲಿಕಾರ್ಜುನ ಬಟಗಿ ಮಾತನಾಡಿ, “ಅಹಿಂದ ವರ್ಗದ ಮೇಲೆ ನಿಜವಾದ ಕಾಳಜಿ ಇದ್ದರೆ ಸಿದ್ದರಾಮಯ್ಯನವರು ಕೂಡಲೇ ಮೀಸಲಾತಿ ಜಾರಿಗೆ ತಂದು ಸರ್ಕಾರದ ಶಾಲೆಯಲ್ಲಿ ಕಲಿತವರಿಗೆ ಉದ್ಯೋಗದಲ್ಲಿ ಶೇ.50ರಷ್ಟು ಮೀಸಲು ತರಬೇಕು” ಎಂದರು.

Advertisements

ಕಾಂತರಾಜ ಜಾತಿಗಣತಿ ವರದಿ ಬಿಡುಗಡೆಯಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಮುಖಂಡರು ಸಂಚರಿಸಿ ಜನರನ್ನು ಜಾಗೃತಿ ಮಾಡಿ ದೂಡ್ಡ ಹೋರಾಟ ಮಾಡವುದು ಅನಿವಾರ್ಯವಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಗೃಹಸಚಿವ ಪರಮೇಶ್ವರ್ ಸ್ವಕ್ಷೇತ್ರದಲ್ಲೇ ಅಮಾನವೀಯ ಘಟನೆ; ಮಲ ಹೊರುವ ಪದ್ದತಿ ಇನ್ನೂ ಜೀವಂತ

ಸಭೆಯಲ್ಲಿ ರಾಜಶೇಖರ ಯಡಹಳ್ಳಿ, ಪ್ರಭುಗೌಡ ಪಾಟೀಲ, ಚೆನ್ನು ಕಟ್ಟಿಮನಿ, ಮಹಾದೇವ ಬನಸೂಡೆ, ಮಂಜುಳಾ ಪೂಜಾರಿ, ಬಸವರಾಜ ಸೂಳೆಬಾವಿ, ಬಿ ಎಸ್ ಗಸ್ತಿ, ದೇವಾನಂದ ಲಚ್ಯಾಣ, ದಸ್ತಗಿರಿ ಮುಲ್ಲಾ ಸೇರಿದಂತೆ ಬಹುತೇಕ ಅಹಿಂದ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X