ವಿಜಯಪುರ | ಡಿ.15ರಿಂದ 17ರವರೆಗೆ ಒಡಿಶಾದಲ್ಲಿ ಎಐಯುಟಿಯುಸಿ 22ನೇ ಅಖಿಲ ಭಾರತ ಸಮ್ಮೇಳನ

Date:

Advertisements

ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ತನ್ನ 22ನೇ ಅಖಿಲ ಭಾರತ ಸಮ್ಮೇಳನವನ್ನು ಇದೇ ಡಿಸೆಂಬರ್ 15 ರಿಂದ 17ರವರೆಗೆ ಒರಿಸ್ಸಾದ ಭುವನೇಶ್ವರದಲ್ಲಿ ಹಮ್ಮಿಕೊಂಡಿದೆ.

ಈ ಸಮ್ಮೇಳನದಲ್ಲಿ ದೇಶದ ವಿವಿಧ ರಾಜ್ಯಗಳ ಸ್ಕೀಮ್ ಕಾರ್ಯಕರ್ತೆಯರು ಸೇರಿದಂತೆ ಸಂಘಟಿತ ಹಾಗೂ ಅಸಂಘಟಿತ ವಲಯಗಳ ಸಾವಿರಾರು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಅಮೆರಿಕ ಮತ್ತಿತರ ಸಾಮ್ರಾಜ್ಯಶಾಹಿ ದೇಶಗಳ ಕುಮ್ಮಕ್ಕಿನಿಂದ ಇಸ್ರೇಲ್, ಉಕ್ರೇನ್, ಲೆಬನಾನ್ ಇತ್ಯಾದಿ ದೇಶಗಳ ಮೇಲೆ ಅಮಾನುಷ ಯುದ್ಧ ಜರುಗುತ್ತಿರುವ ಸಂದರ್ಭದಲ್ಲಿ ಹಾಗೂ ಜಾಗತಿಕವಾಗಿ ಮಾರುಕಟ್ಟೆ ಹಂಚಿಕೆಗಾಗಿ ಸಾಮ್ರಾಜ್ಯಶಾಹಿ ದೇಶಗಳ ನಡುವೆ ತಿಕ್ಕಾಟ ಪೈಪೋಟಿ ತೀವ್ರವಾಗುತ್ತಿರುವಾಗ, ದೇಶದಲ್ಲಿ ದುಡಿಯುವ ಜನರ ಜೀವನ ಹಾಗೂ ಜೀವನೋಪಾಯಗಳ ಮೇಲೆ ಆಳುವ ಬಂಡವಾಳಶಾಹಿ ವರ್ಗ ಮತ್ತದರ ಸರ್ಕಾರಗಳಾದ ಕೇಂದ್ರದ ಬಿಜೆಪಿ ಹಾಗೂ ವಿವಿಧ ರಾಜ್ಯ ಸರ್ಕಾರಗಳು ತೀವ್ರ ದಾಳಿಗಳನ್ನು ಎಸಗುತ್ತಿರುವ ಸಂದರ್ಭದಲ್ಲಿ ಈ ಅಖಿಲ ಭಾರತ ಸಮ್ಮೇಳನ ಜರುಗುತ್ತಿದೆ.

Advertisements
ai 2

ಈ ಸಮ್ಮೇಳನದಲ್ಲಿ ಜಗತ್ತಿನ ಹಾಗೂ ವಿಶೇಷವಾಗಿ ದೇಶದ ಸಮಸ್ತ ದುಡಿಯುವ ಜನರ ಶೋಚನೀಯ ಪರಿಸ್ಥಿತಿಯ ಬಗ್ಗೆ ಕೂಲಂಕಷವಾಗಿ ಚರ್ಚಿಸಿ ಬಲಿಷ್ಟ ಕಾರ್ಮಿಕ ಚಳುವಳಿಯನ್ನು ಕಟ್ಟಲು ನಿರ್ದಿಷ್ಟ ಸಂಘಟನಾತ್ಮಕ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಎಐಯುಟಿಯುಸಿ 22 ನೇ ಅಖಿಲ ಭಾರತ ಸಮ್ಮೇಳನದ ಅಂಗವಾಗಿ ಡಿಸೆಂಬರ್ 15 ರಂದು ಬೆಳಿಗ್ಗೆ ಒರಿಸ್ಸಾದ ರಾಜಧಾನಿ ಭುವನೇಶ್ವರದಲ್ಲಿ ಪಿಎಂಜಿ ಸ್ಕೆಟರ್ ಹತ್ತಿರ ಬಹಿರಂಗ ಅಧಿವೇಶನವು ಜರುಗಲಿದೆ, ಇದರ ಅಧ್ಯಕ್ಷತೆಯನ್ನು ಎಐಯುಟಿಯುಸಿ ಅಖಿಲ ಭಾರತ ಅಧ್ಯಕ್ಷರಾದ ಕೆ ರಾಧಾಕೃಷ್ಣ ಅವರು ವಹಿಸಲಿದ್ದಾರೆ. ಇತರ ರಾಷ್ಟಿಯ ನಾಯಕರಾದ ಸತ್ಯವಾನ್, ಸ್ವಪನ್ ಘೋಷ್, ಅರುಣ್ ಕುಮಾರ್ ಸಿಂಗ್ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಶಂಕರ್ ದಾಸ್ ಗುಪ್ತ ಅವರು ಭಾಷಣಕಾರರಾಗಿ ಮಾತನಾಡಲಿದ್ದಾರೆ ಪತ್ರಿಕಾ ಪ್ರಕಟಣೆಯಲ್ಲಿ ಜಿಲ್ಲಾ ಮುಖಂಡ ಮಲ್ಲಿಕಾರ್ಜುನ ಎಚ್. ಟಿ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

Download Eedina App Android / iOS

X