ವಿಜಯಪುರ | ಹಾಲು, ವಿದ್ಯುತ್‌ ದರ ಏರಿಕೆಗೆ ಎಐಯುಟಿಯುಸಿ ಖಂಡನೆ

Date:

Advertisements

ಏ.1 ರಿಂದ ಅನ್ವಯವಾಗುವಂತೆ ಹಾಲಿನ ದರ ಹಾಗೂ ವಿದ್ಯುತ್ ದರ ಹೆಚ್ಚಿಸಿರುವ ರಾಜ್ಯ ಸರ್ಕಾರದ ನಿರ್ಧಾರವು ಅತ್ಯಂತ ಜನವಿರೋಧಿ ನಡೆಯಾಗಿದೆ ಎಂದು ಎಐಯುಟಿಯುಸಿ ವಿಜಯಪುರ ಜಿಲ್ಲಾ ಸಮಿತಿ ಅಭಿಪ್ರಾಯಸಿದೆ.

ಒಂದು ಲೀಟರ್‌ ಹಾಲಿಕೆ 4 ರೂಪಾಯಿಯಂತೆ ಹಾಲಿನ ದರ ಹೆಚ್ಚಿಸಿರುವುದು, ವಿದ್ಯುತ್ ನೌಕರರಿಗೆ ಗ್ರಾಚ್ಯೂಟಿ ಹಾಗೂ ಪಿಂಚಣಿ ನೀಡಲು ಪ್ರತಿ ಯೂನಿಟ್‌ಗೆ 0.36 ಪೈಸೆ ಹೆಚ್ಚಿಸಿರುವುದು, ಈಗಾಗಲೇ ನೀರಿನ ದರ, ಬಸ್‌ ಟಿಕೆಟ್ ದರ ಏರಿಕೆ ಮಾಡಿ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನಸಾಮಾನ್ಯರು ಹಾಗೂ ದುಡಿಯುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಸರ್ಕಾರವು ಕಾರ್ಮಿಕರ ಅಸಂಘಟಿತ ವಲಯದ ಕಾರ್ಮಿಕರಿಗೆ, ಗುತ್ತಿಗೆ ಕಾರ್ಮಿಕರಿಗೆ ಸ್ಕೀಮ್, ಕಾರ್ಯಕರ್ತೆಯರಿಗೆ ವೇತನ ಹೆಚ್ಚಳ ಮಾಡದಿರುವುದರಿಂದ ಅವರ ಕೊಳ್ಳುವ ಸಾಮರ್ಥ್ಯವು ಹೆಚ್ಚಳವಾಗದೇ ಇರುವುದರಿಂದ ಈ ದರ ಏರಿಕೆಯು ಅವರ ಜೀವನವನ್ನು ಮತ್ತಷ್ಟು ದುರ್ಬರಗೊಳಿಸುತ್ತದೆ. ಆದ್ದರಿಂದ ಈ ಜನವಿರೋಧಿ ಹಾಲಿನ ದರ ಏರಿಕೆಯನ್ನು ಕೂಡಲೇ ಹಿಂಪಡೆಯಬೇಕೆಂದು ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಎಚ್. ಟಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Advertisements

ಇದನ್ನೂ ಓದಿ: ವಿಜಯಪುರ | ಹರನಾಳ ಗ್ರಾಪಂ ಅವ್ಯವಹಾರ ಖಂಡಿಸಿ ದಸಂಸ ಪ್ರತಿಭಟನೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X