ವಿಜಯಪುರ | ಏ.11ರಂದು ʼಅಂಬೇಡ್ಕರ್ ಹಬ್ಬʼದ ಉದ್ಘಾಟನೆ

Date:

Advertisements

ಏಪ್ರಿಲ್ 11ರಂದು ʼಅಂಬೇಡ್ಕರ್ ಹಬ್ಬʼದ ಉದ್ಘಾಟನೆ ನಡೆಯಲಿದೆ. ಅಂದು ಫುಲೆ ದಂಪತಿಗಳು ಮತ್ತು ಫಾತಿಮಾ ಶೇಖ್ ಅವರ ಕುರಿತು ವಿಚಾರ ಸಂಕಿರಣ ಚರ್ಚೆ ನಡೆಯಲಿದೆ. ಸಂಜೆ ಹೋರಾಟದ ಹಾಡುಗಳು, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷ ಶ್ರೀನಾಥ್ ಪೂಜಾರಿ ಹೇಳಿದರು.

ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ʼಅಂಬೇಡ್ಕರ್‌ ಹಬ್ಬʼದಂದು ಬಸವಣ್ಣ, ಜ್ಯೋತಿಬಾ- ಸಾವಿತ್ರಿಬಾಯಿ ಫುಲೆ, ಫಾತಿಮಾ ಶೇಖ್‌ ಹಾಗೂ ಬಾಬಾ ಸಾಹೇಬರ ಚಿಂತನೆಗಳ ಸಮಾಗಮವಾಗಲಿದೆ. ಶೋಷಿತರಿಗೆ ವಿಮೋಚನೆಯ ದಾರಿ ತೋರಿದ ಬಾಬಾ ಸಾಹೇಬ್ ಅಂಬೇಡ್ಕ‌ರ್ ರವರನ್ನು ನೆನೆಯಲು ಮತ್ತು ಅವರ ವಿಚಾರಗಳನ್ನು ಚರ್ಚಿಸಲು ಮುಂದಾಗಿದ್ದು, ಮೊದಲ ಬಾರಿಗೆ ವಿಜಯಪುರ ನಗರದಲ್ಲಿ ನಾಲ್ಕು ದಿನಗಳ ಅಂಬೇಡ್ಕರ್ ಹಬ್ಬವನ್ನು ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.

WhatsApp Image 2025 04 09 at 5.01.26 PM

ಪ್ರತಿದಿನ ರಾಜ್ಯದ ವಿವಿಧ ಭಾಗಗಳಿಂದ ಪ್ರಕಾಶಕರು ಪುಸ್ತಕ ಮಳಿಗೆ ಹಾಕಲಿದ್ದಾರೆ. ಸಾಮಾನ್ಯ ಜನರಿಂದ ಹಿಡಿದು ರಾಜಕೀಯ ಮುಖಂಡರು, ಗಣ್ಯರವರೆಗೆ ಪ್ರತಿಯೊಬ್ಬರೂ ಭಾಗವಹಿಸಬೇಕಾದ ಅತ್ಯುತ್ತಮ ಕಾರ್ಯಕ್ರಮ ಇದಾಗಲಿದೆ. ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನೂರಾರು ಹೋರಾಟಗಾರರು, ವಿಷಯ ತಜ್ಞರು, ರಾಜಕೀಯ ಧುರೀಣರು ಅಂಬೇಡ್ಕರ್ ಹಬ್ಬದ ಭಾಗವಾಗಲಿದ್ದಾರೆ. ಇಂತಹ ವಿಶಿಷ್ಟ ಕಾರ್ಯಕ್ರಮದಲ್ಲಿ ನಾಲ್ಕು ದಿನಗಳೂ ಎಲ್ಲರೂ ಭಾಗಿಯಾಗಬೇಕು” ಎಂದು ಮನವಿ ಮಾಡಿದರು.

Advertisements

ಇದನ್ನೂ ಓದಿ: ವಿಜಯಪುರ | ʼಏತ ನೀರಾವರಿ ಪೂರ್ಣಗೊಳಿಸಿ ರೈತರ ಹಿತ ಕಾಪಾಡಿʼ

ಪತ್ರಿಕಾಗೋಷ್ಠಿಯಲ್ಲಿ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಫಾದರ್ ಟಿಯೋಲ್ ಮಾಚಾದೊ, ದಲಿತ ಸಂಘರ್ಷ ಸಮಿತಿ ನಾಗವಾರ ಬಣ ಜಿಲ್ಲಾ ಸಂಚಾಲಕ ಚೆನ್ನು ಕಟ್ಟಿಮನಿ, ಜಾಗೃತ ಕರ್ನಾಟಕದ ರಾಜ್ಯ ಮುಖಂಡ ಮಹಾಂತೇಶ್ ದೊಡ್ಡಮನಿ, ಮಹಿಳಾ ಒಕ್ಕೂಟದ ಜಿಲ್ಲಾ ಅಧ್ಯಕ್ಷೆ ವಿಶ್ವೇಶ್ವರಿ ಮಠಪತಿ, ಸುನಿತಾ ಮೋರೆ, ಅಕ್ಷಯ್ ಕುಮಾರ್ ಅಜಮುನಿ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X