ವಿಜಯಪುರ | ದೇಶಕ್ಕೆ ಅಂಬೇಡ್ಕರ್, ರಾಜ್ಯಕ್ಕೆ ಪ್ರೊ. ಕೃಷ್ಣಪ್ಪ ಅವರ ಕೊಡುಗೆ ಅಪಾರ: ಸತೀಶ ಜಾರಕಿಹೊಳಿ

Date:

Advertisements

ದೇಶಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ರಾಜ್ಯಕ್ಕೆ ಪ್ರೊ. ಬಿ ಕೃಷ್ಣಪ್ಪ ಅವರ ಕೊಡುಗೆ ಅಪಾರವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ದಲಿತ ಸಂಘರ್ಷ ಸಮಿತಿ (ಪ್ರೊ. ಬಿ ಕೃಷ್ಣಪ್ಪ ಬಣ) ವಿಜಯಪುರ ಜಿಲ್ಲಾ ಸಮಿತಿಯಿಂದ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಸಾಮಾಜಿಕ ಸಮಾನತೆಗಾಗಿ ಸಂವಿಧಾನ ಮತ್ತು ಅಂಬೇಡ್ಕರ ಎಂಬ ಜನಾಂದೋಲನ ಸಮಾವೇಶ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಸಾಮಾಜಿಕ ನ್ಯಾಯ ಸಿಗಬೇಕು ಅಂದರೆ ಸಂಘಟಿತರಾರಗಿ ಹೋರಾಟ ಮಾಡಬೇಕು. ಅಂತ ಹೋರಾಟ ಪ್ರೊ. ಬಿ ಕೃಷ್ಣಪ್ಪ ನವರು ರಾಜ್ಯದ ಮೂಲೆ ಮೂಲೆಗೆ ಹೋಗಿ ಕಟ್ಟಿದ್ದಾರೆ. ಅಂಬೇಡ್ಕರ್ ಅವರ ವಿಚಾರ ಮೈಗೂಡಿಸಿಕೊಂಡು ಹಗಲಿರುಳು ಎನ್ನದೆ ಹೋರಾಟ ಮಾಡಿದ್ದಾರೆ. ಸಂವಿಧಾನ ವಿರೋಧಿ ಹೇಳಿಕೆಗಳು ಹಾಗೂ ಸಂವಿಧಾನ ತಿರಸ್ಕಾರ ಮಾಡುವವರ ವಿರುದ್ಧ ನಾವು ಸದಾ ಎಚ್ಚರಿಕೆ ವಹಿಸಬೇಕು. ನಮ್ಮ ದೇಶಕ್ಕೆ ಸ್ವತಂತ್ರ ಬಂದು 78 ವರ್ಷ ಕಳೆದರೂ ಸಮಾನತೆ ದೊರಕಿಲ್ಲ. ಈಗಲೂ ದೇವಸ್ಥಾನಗಳಿಗೆ ದಲಿತರಿಗೆ, ಅಸ್ಪೃಶ್ಯರಿಗೆ ಪ್ರವೇಶವಿಲ್ಲ. ಒಂದು ವೇಳೆ ಪ್ರವೇಶ ಮಾಡಿದರೆ ದಂಡ ವಿಧಿಸಿವುದು ಜಾರಿಯಲ್ಲಿದೆ. ಇದು ಬದಲಾಗಬೇಕು. ಸಮಾನತೆಗಾಗಿ ಹೋರಾಟ ಮಾಡುವ ಅಗತ್ಯವಿದೆ. ಸಂವಿಧಾನ ರಕ್ಷೆಣೆ ಮಾಡುವುದು ನಮ್ಮಲ್ಲರ ಜವಾಬ್ದಾರಿಯಾಗಿದೆ” ಎಂದರು.

Advertisements

ಇದನ್ನೂ ಓದಿ: ವಿಜಯಪುರ | ಗಣಿಹಾರ ತಾಂಡಾದ ದೇವಿಬಾಯಿ ಕೊಲೆ ಪ್ರಕರಣ:‌ ಆರೋಪಿಗಳ ಜಾಮೀನು ವಿರೋಧಿಸಿ ಸ್ಥಳೀಯರ ಮನವಿ

ಕಾರ್ಯಕ್ರಮದಲ್ಲಿ ಅಶೋಕ ಛಲವಾದಿ, ಶರಣು ಶಿಂಧೆ, ಪ್ರಕಾಶ ಗುಡಿಮನಿ, ಪರಸು ದಿಂಡಿವಾರ, ಲಕ್ಕಪ್ಪ ಬಡಿಗೇರ, ಮಾಜಿ ಶಾಸಕ ಪ್ರೊ. ರಾಜು ಆಲಗೂರ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬ್ಲೆಶ್ವೇರ, ರಾಜ್ಯ ಸಂಚಾಲಕ ಶ್ರೀನಿವಾಸ ಹೆಣ್ಣುರೂ, ಸಿಂದಗಿ ಮಾಜಿ ಶಾಸಕ ಶರಣಪ್ಪ ಸುಣಗಾರ ಹಾಗೂ ಸಂಘಟನೆಯ ರಾಜ್ಯ ಪದಾಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X