ವಿಜಯಪುರ | ಅಂಬೇಡ್ಕರ್‌ ನೆನಪು, ಆಶಯ, ಮಾರ್ಗದರ್ಶನದ ಹಾದಿ ನಮ್ಮೆಲ್ಲರಲ್ಲಿ ಜೀವಂತವಾಗಿರಬೇಕು: ಶಾಸಕ ವಿಠ್ಠಲ ಕಟಕದೊಂಡ

Date:

Advertisements

ವಿಶ್ವರತ್ನ ಡಾ. ಬಿ ಆರ್ ಅಂಬೇಡ್ಕರ್ ಅವರ ವರ್ಷದ ಒಂದು ದಿನ ಅಷ್ಟೇ ಜಯಂತ್ಯೋತ್ಸವ ಕಾರ್ಯಕ್ರಮಕ್ಕೆ ಮಾತ್ರ ಅವರ ನೆನಪು ಆಶಯಗಳು ಸೀಮಿತವಾಗಬಾರದು. ಅವರ ನೆನಪು ಆಶಯಗಳು ಮತ್ತು ಮಾರ್ಗದರ್ಶನದ ಹಾದಿ ನಮ್ಮೆಲ್ಲರಲ್ಲಿ ಜೀವಂತವಾಗಿರಬೇಕು ಎಂದು ವಿಜಯಪುರ ಜಿಲ್ಲೆಯ ನಾಗಠಾಣ ಮತಕ್ಷೇತ್ರದ ಶಾಸಕ ವಿಠ್ಠಲ ಕಟಕದೊಂಡ ಹೇಳಿದರು.

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಿಶ್ವರತ್ನ ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಡಾ. ಬಿ ಆರ್ ಅಂಬೇಡ್ಕರ್ ಅವರ ಇತಿಹಾಸ ದೇಶದ ಪ್ರತಿಯೊಬ್ಬ ಪ್ರಜೆಗೂ ಸಂವಿಧಾನ ಮೂಲಕ ಬದುಕುವ ಹಕ್ಕನ್ನು ನೀಡಿದ ಮಹಾತ್ಮ. ಅವರ ಮುಂದಿನ 135ನೇ ಜಯಂತ್ಯೋತ್ಸವ ಕಾರ್ಯಕ್ರಮದಷ್ಟರಲ್ಲಿ ದೇವರನೆಂಬರಿಗಿ ಗ್ರಾಮದಲ್ಲಿ ಅಂಬೇಡ್ಕರ್ ಅವರ ಭವ್ಯ ಪುತ್ಥಳಿ ನಿರ್ಮಾಣ ಮಾಡುತ್ತೇನೆ” ಎಂದು ಭರವಸೆ ನೀಡಿದರು.

Advertisements

“ದೇವರನಿಂಬರಗಿ ಗ್ರಾಮ ಪಂಚಾಯತ್ ಅಧ್ಯಕ್ಷ ಭೀಮನಗೌಡ ಕಲ್ಲನಗೌಡ ಬಿರಾದಾರ ಮಾತನಾಡಿ, “ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ಆದರ್ಶದ ಮಾರ್ಗದ ಆದಿಯಲ್ಲಿ ನಾವೆಲ್ಲರೂ ನಡೆಯೋಣ, ಸಂವಿಧಾನದ ಮಹತ್ವದ ಸದುದ್ದೇಶವನ್ನು ಇವತ್ತಿನ ಪೀಳಿಗೆಗೆ ಹೇಳಿಕೊಡುವ ಕೆಲಸವಾಗಬೇಕು. ಅಂಬೇಡ್ಕರ್ ಅವರ ವಿಚಾರಗಳನ್ನು ಮೂಲೆ ಮೂಲೆಗೆ ಕೊಂಡೊಯ್ಯುವ ಕೆಲಸವನ್ನು ನಿರಂತರವಾಗಿ ಇಂಥ ಜಯಂತಿಗಳ ಮೂಲಕ ಮಾಡೋಣ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಜಾತಿಗಣತಿ ವಿರುದ್ಧ ವೀರಶೈವ, ಲಿಂಗಾಯತ ಸಮಾಜದಿಂದ ಬೃಹತ್‌ ರ್‍ಯಾಲಿ

ಈ ವೇಳೆ ಸುರೇಶ ಗುಮಸ್ತೆ, ಪಿಂಟು ಮುತ್ತಿನ, ಡಿ. ಬಿ ಧರ್ಮವೀರ, ಮುತ್ತುಗೌಡ ಬಿರಾದಾರ, ಚಂದ್ರ ಬಾಬಾ ಸಿಂಗೆ, ದೇವಾನಂದ ಸಿಂಗೆ, ವಿಜಯಕುಮಾರ ಆವಲ್ದಾರ, ಬಸವರಾಜ ಲವಾಗಿ, ತಾನಾಜಿ ಶಿಂಗೆ, ಅಜಿತ ಸಿಂಗೆ, ಭೀಮ ಶಂಕರ ಕನ್ನೂರ, ಏಗಪ್ಪಗೌಡ ಬಿರಾದಾರ, ಅಲ್ಲಿಸಾಬ ಬೋರಾಗಿ, ಬೀರಪ್ಪ ಸಲಗರ, ಚನ್ನು ಗಾಡಿ ವಡ್ಡರ, ರಾಜಕುಮಾರ ಸಿಂಗೆ ಸೇರಿದಂತೆ ಡಾ. ಬಿ ಆರ್ ಅಂಬೇಡ್ಕರ್ ಯುವಕ ಮಂಡಳಿ ಸರ್ವ ಸದಸ್ಯರು ಮತ್ತು ಸುತ್ತಮುತ್ತಲನ ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X