ಇಂಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕೆಂದು ಆಗ್ರಹಿಸಿ ಕ್ಷೇಮಾಭಿವೃದ್ದಿ ಸಂಘ ಹಾಗೂ ವಿಜಯಪುರ ಜಿಲ್ಲಾ ಹೋರಾಟ ಸಮಿತಿ ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ಮಾಡಿದರು. ಬಳಿಕ ಉಪ ಕಂದಾಯ ವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಸಮಗ್ರ ಇಂಡಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಂಜುನಾಥ ಕಾಮಗೊಂಡ ಮಾತನಾಡಿ, “ಜಿಲ್ಲಾ ಕೇಂದ್ರಕ್ಕೆ ಯೋಗ್ಯವಾದ ಭೌಗೋಳಿಕ ಪ್ರದೇಶ ಮತ್ತು ಸರ್ಕಾರಿ ಕಚೇರಿಗಳನ್ನು ಹೊಂದಿರುವ ಇಂಡಿಯನ್ನು ಜಿಲ್ಲೆಯಾಗಿಸಬೇಕು. ಇಂಡಿ ತಾಲೂಕನ್ನು ಆರ್ಟಿಕಲ್ 371 (ಜೆ) ಅಡಿಯಲ್ಲಿ ಸೇರ್ಪಡೆ ಮಾಡಬೇಕು. ಈ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿಯೇ ಚರ್ಚೆಯಾಗಬೇಕು” ಎಂದು ಒತ್ತಾಯಿಸಿದರು.
ರಾಜಕೀಯ ಮುಖಂಡ ಪಾಪು ಕಿತ್ತಳಿ ಮಾತನಾಡಿ, “ಸರ್ಕಾರ ನಮ್ಮ ಮನವಿ ಪರಿಗಣಿಸಿ ಇಂಡಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಪವಾಸ ಸತ್ಯಾಗ್ರಹ ಸೇರಿದಂತೆ ಇತರ ಹಂತದ ಹೋರಾಟಗಳನ್ನೂ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.
ಪುರಸಭೆಯ ಸದಸ್ಯ ಸತೀಶ ಕುಂಬಾರ ಮಾತನಾಡಿ, “ಸರ್ಕಾರದ ಆಡಳಿತ ಯಂತ್ರವೇ ಬೆಳಗಾವಿಯಲ್ಲಿದ್ದು, ಅಭಿವೃದ್ಧಿ ದೃಷ್ಟಿಯಿಂದ ಇಂಡಿಗೆ ಪ್ರತ್ಯೇಕ ಜಿಲ್ಲೆ ಸ್ಥಾನಮಾನ ನೀಡಬೇಕು. ಈ ಭಾಗದ ಬಹುದಿನದ ಜಿಲ್ಲಾ ಬೇಡಿಕೆಗೆ ಸರ್ಕಾರ ಸ್ಪಂದಿಸಬೇಕು” ಎಂದರು.
ನಿವೃತ್ತ ಶಿಕ್ಷಕ ಜಿ ವಿ ಬಿರಾದಾರ ಮಾತನಾಡಿ, “ಶಾಸಕ ಯಶವಂತರಾಯ ಗೌಡರಿಗೆ ಬೆಳಗಾವಿ ಸದನದಲ್ಲಿ ಧ್ವನಿ ಎತ್ತಲು ವಿನಂತಿಸಿಕೊಂಡಿದ್ದೇವೆ. ಶಾಸಕರು ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರವಾಗಿ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ಭರವಸೆ ನೀಡಿದ್ದಾರೆ” ಎಂದರು.
ಈ ಸುದ್ದಿ ಓದಿದ್ದೀರಾ? ಬೀದರ್ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಚೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ
ಪ್ರತಿಭಟನೆಯಲ್ಲಿ ಡಾ. ರಮೇಶ ಪೂಜಾರಿ, ನಿವೃತ್ತ ಪ್ರಾಚಾರ್ಯ ಎ ಸಿ ಪಾಟೀಲ, ರಾಜಕೀಯ ಮುಖಂಡ ಜಗದೀಶ ಕ್ಷತ್ರಿ, ಕಿರಣಕುಮಾರ ಜೋಶಿ, ಪುರಸಭೆ ಸದಸ್ಯ ಅಯೂಬ ಬಾಗವಾನ, ತಾ.ಪಂ ಮಾಜಿ ಅಧ್ಯಕ್ಷ ಶೇಖರ ನಾಯಕ, ಅವಿನಾಶ ಬಗಲಿ, ಚನ್ನು ದೇವರ, ಮಹೇಶ ಮೈದರಗಿ, ರುಕ್ಮುದ್ದೀನ ಪಟೇಲ, ಸಂತೋಷ ಪರೆಶೇನ್ನವರ, ಮೇಘು ರಾಠೋಡ, ಬಾಲಾಜಿ ರಜಪೂತ, ರಮೇಶ ಅಡಗಲ್ಲ, ಉದ್ದಿಮೆದಾರ ಅನಂತ ಜೈನ, ನಿವೃತ್ತ ಪ್ರಾಚಾರ್ಯ ಎ ಎಸ್ ಗಾಣಿಗೇರ ಇದ್ದರು.