ವಿಜಯಪುರ | ಅರವಿಂದ್ ಕೇಜ್ರಿವಾಲ್ ಪ್ರಕರಣ ಪ್ರಾಮಾಣಿಕತೆಗೆ ಸಾಕ್ಷಿ: ಭೋಗೇಶ್ ಸೋಲಾಪುರ್

Date:

Advertisements

‘ಸತ್ಯಮೇವ ಜಯತೆ’ ಎನ್ನುವುದು ಮತ್ತೆ ಸಾಬೀತಾಗಿದ್ದು, ಅರವಿಂದ್ ಕೇಜ್ರಿವಾಲ್ ಅವರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಬಿಜೆಪಿಯ ನಿರಂಕುಶ ಆಡಳಿತ, ಸರ್ವಾಧಿಕಾರಿ ವರ್ತನೆಗೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಸಿಬಿಐ ಬಳಸಿಕೊಂಡು ಸುಳ್ಳು ಆರೋಪ ಮಾಡಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದ ಕೇಂದ್ರ ಗೃಹಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ಕೊಡಬೇಕೆಂದು ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆಗ್ರಹಿಸಿದ್ದಾರೆ.

ಆಮ್ ಆದ್ಮಿ ಪಾರ್ಟಿ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನಲೆಯಲ್ಲಿ ವಿಜಯಪುರ ನಗರದ ಎಎಪಿ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಿ ಮಾತನಾಡಿದರು.

ಭೋಗೇಶ್‌ ಸೋಲಾಪುರ್

“ಸುಪ್ರೀಂ ಕೋರ್ಟ್‌ನಲ್ಲಿ ಸತ್ಯಕ್ಕೆ ಗೆಲುವು ಸಿಕ್ಕಿದೆ. ಪ್ರಾಮಾಣಿಕತೆಗೆ ಎಂದೂ ಸೋಲಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಸಿಬಿಐ ಸಂಸ್ಥೆಯನ್ನು ಪಂಜರದ ಗಿಣಿ ಎನ್ನುವ ಮೂಲಕ ಕೇಂದ್ರ ಸರ್ಕಾರದ ಸೂಚನೆಯಂತೆ ಕೆಲಸ ಮಾಡುತ್ತಿದೆಯೆಂದು ಛೀಮಾರಿ ಹಾಕಿದೆ. ಸಿಬಿಐ ನಡೆ ಬಗ್ಗೆಯೇ ನ್ಯಾಯಮೂರ್ತಿ ಉಜ್ಜಲ್‌ ಭುಯಾನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಬಿಐ ತಾನು ಬಂಧಮುಕ್ತ ಗಿಣಿಯೆಂದು ನಿರೂಪಿಸಬೇಕು. ಸಂಶಯಾತೀತವಾಗಿ ಕೆಲಸ ಮಾಡಬೇಕೆಂದು ಹೇಳಿದೆ. ಇದು ಸಿಬಿಐ ಯಾರ ಪರ ಕೆಲಸ ಮಾಡುತ್ತಿದೆ ಎನ್ನುವುದನ್ನು ಮತ್ತೆ ಸಾಬೀತುಪಡಿಸಿದೆ” ಎಂದರು.

Advertisements

“ಅಧರ್ಮ, ದಬ್ಬಾಳಿಕೆ, ಅನ್ಯಾಯ ತಾತ್ಕಾಲಿಕವಾಗಿ ಗೆಲುವು ಸಾಧಿಸಿದರೂ, ಅಂತಿಮವಾಗಿ ಸತ್ಯವೇ ಗೆಲ್ಲುತ್ತದೆ ಎನ್ನುವುದಕ್ಕೆ ಈ ಪ್ರಕರಣವೇ ಸಾಕ್ಷಿ. ಇಂದು ಸುಪ್ರೀಂ ಕೋರ್ಟ್ ಕೊಟ್ಟಿರುವ ತೀರ್ಪು ಪ್ರಧಾನಿ ನರೇಂದ್ರ ಮೋದಿ ಸರ್ವಾಧಿಕಾರಿ ಧೋರಣೆಗೆ ಕೊಡಲಿ ಪೆಟ್ಟು ಕೊಟ್ಟಂತಾಗಿದೆ. ಇಡೀ ಪ್ರಕರಣದಲ್ಲಿ ಜಾಮೀನು ನೀಡಿದ್ದನ್ನು ವಿಫಲ ಮಾಡಲೆಂದೇ ಸಿಬಿಐ ಕೇಜ್ರಿವಾಲ್‌ ಅವರನ್ನು ಬಂಧಿಸುವ ಮೂಲಕ, ಜೈಲಿನಲ್ಲೇ ಇಡಲು ಮೋದಿ ಸರ್ಕಾರ ಸಂಚು ಮಾಡಿತ್ತು. ಆದರೆ ನ್ಯಾಯದ ದಾರಿಯಲ್ಲಿ ನಡೆಯುತ್ತಿರುವ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಸುಳ್ಳು ಆರೋಪಗಳ ಮೇಲೆ ಎಷ್ಟು ದಿನ ಜೈಲಿನಲ್ಲಿಡಲು ಸಾಧ್ಯ, ಸತ್ಯ ಗೆದ್ದೇ ಗೆಲ್ಲುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ‘ಸ್ವಚ್ಛವಾಹಿನಿ’ ಚಾಲಕಿಯರಿಗೆ ವಾಹನ ಪರವಾನಗಿ ವಿತರಿಸಿದ ಸಚಿವ ಮಹದೇವಪ್ಪ

“ಸುಪ್ರೀಂ ಕೋರ್ಟ್ ಇಂದು ನೀಡಿರುವ ತೀರ್ಪು ಸತ್ಯ, ನ್ಯಾಯದ ಪರವಾಗಿ ಹೋರಾಟ ಮಾಡುವವರಿಗೆ ಭರವಸೆ ನೀಡಿದೆ. ದೇಶದ ನ್ಯಾಯಾಂಗ ವ್ಯವಸ್ಥೆ ಬಗ್ಗೆ ನಂಬಿಕೆ ಹೆಚ್ಚಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಇನ್ನಾದರೂ ದ್ವೇಷ ರಾಜಕಾರಣ ಬಿಟ್ಟು, ಜನ ಕೊಟ್ಟಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಕೆಲಸ ಮಾಡಲಿ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X