ವಿಜಯಪುರ | ಬಸವಣ್ಣನ ವಚನಗಳೇ ಕಾನೂನು: ಹಿರಿಯ ನ್ಯಾ. ವಿದ್ಯಾವತಿ ಅಂಕಲಗಿ

Date:

Advertisements

12ನೇ ಶತಮಾನದ ಬಸವಾದಿ ಶರಣರ ವಚನಗಳಲ್ಲಿ ಧರ್ಮ ಮತ್ತು ಕಾನೂನು ಬೇರೆಯಲ್ಲ. ಬಸವಣ್ಣನವರ ವಚನಗಳೇ ಕಾನೂನು. ಎಲ್ಲರಿಗೂ ಸಮಾನತೆ ತಂದು ಕೊಟ್ಟಿವೆ ಎಂದು ಹಿರಿಯ ನ್ಯಾಯವಾದಿ ವಿದ್ಯಾವತಿ ಅಂಕಲಗಿ ಹೇಳಿದರು.

ವಿಜಯಪುರ ನಗರದ ವೀರಶೈವ ಸಭಾಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದಿಂದ ಹಮ್ಮಿಕೊಂಡಿದ್ದ ಗೋಷ್ಠಿಯಲ್ಲಿ ʼಶರಣರ ವಚನಗಳಲ್ಲಿ ಕಾನೂನುʼ ಎಂಬ ವಿಷಯದ ಕುರಿತು ಅವರು ಮಾತನಾಡಿದರು.

“ವಚನಗಳು ದೇಶದ ನ್ಯಾಯ ಸಂಹಿತೆಯಲ್ಲಿ ಕಾನೂನುಗಳ ಕಲಂಗಳಲ್ಲಿ ಅಡಕವಾಗಿವೆ. ಅವೆಲ್ಲವೂ ಮಹಿಳೆಯರಿಗೆ ಸಮಾನತೆ ತರುವಂತಹವು, ಸಮಾಜದ ಒಳತಿಗಾಗಿ ರಚಿಸಿದಂತಹವು. ಧರ್ಮ ಮತ್ತು ಕಾನೂನು ಬೇರೆಯಲ್ಲ, ಅವುಗಳನ್ನು ಸತ್ಯ, ನಿಷ್ಠೆ, ಪ್ರಾಮಾಣಿಕತೆಯಿಂದ ಪಾಲಿಸಬೇಕು” ಎಂದರು.

Advertisements

ನ್ಯಾಯವಾದಿ ಶ್ರೀಕಾಂತ ಎಸ್ ಶಿರಡೋಣ ಮಾತನಾಡಿ, “ದೇಶದಲ್ಲಿ ಒಟ್ಟು 1860 ಕಾನೂನುಗಳು ಜಾರಿಯಲ್ಲಿದ್ದು, ಅವು ಎಲ್ಲವೂ ಶರಣರ ವಚನದಿಂದ ಬಂದದ್ದು. ವಚನಗಳು ಎಲ್ಲ ಕಾನೂನಿನ ಮೇಲೆ ಪ್ರಭಾವ ಬೀರಿವೆ” ಎಂದರು.

ಇದನ್ನೂ ಓದಿ: ವಿಜಯಪುರ | ಕೃಷಿ ಉಪಕರಣಗಳ ಸಮರ್ಪಕ ಪೂರೈಕೆಗೆ ರೈತ ಸಂಘ ಆಗ್ರಹ

ಕಾರ್ಯಕ್ರಮದಲ್ಲಿ ವೀರಶೈವ ಮಹಾಸಭಾದ ಲಿಂಗಾಯತ ಜಿಲ್ಲಾಧ್ಯಕ್ಷ ವಿ ಸಿ ನಾಗಠಾಣ, ಬಿ ಟಿ ಈಶ್ವರಗೊಂಡ, ಉಪಾಧ್ಯಕ್ಷ ನಾಡಗೌಡರ, ಸಾಹಿತಿ ಸಂಗಮೇಶ ಬಾದಾಮಿ, ನ್ಯಾಯವಾದಿ ಕೆ ಎಫ್ ಅಂಕಲಗಿ, ದ ಕಣಬೂರ, ದೊಡ್ಡಣ್ಣ ಭಜಂತ್ರಿ, ಎಂ ಜಿ ಯಾದವಾಡ, ಮಹಾದೇವ ಹಾಲಳ್ಳಿ, ಜಗದೀಶ ಮೋಟಗಿ, ಎಸ್ ಎನ್ ಶಿವಣಗಿ, ಜಂಬುನಾಥ ಕಂಚ್ಯಾಣಿ, ಡಾ. ಸಂಗಮೇಶ ಮೇತ್ರಿ, ಡಾ. ರಮೇಶ ತೇಲಿ, ಶರಣಗೌಡ ಪಾಟೀಲ, ಮಲ್ಲಿಕಾರ್ಜುನ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X