ವಿಜಯಪುರ | ಭೀಮಾನದಿ ಪ್ರವಾಹ: ಗರ್ಭಿಣಿಯರು ಸೇರಿ 10 ಮಂದಿ ರಕ್ಷಣೆ; 600ಕ್ಕೂ ಹೆಚ್ಚು ಮಂದಿಗೆ ಆಶ್ರಯ

Date:

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಭೀಮಾ ನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಕಳೆದ ಎರಡು ದಿನಗಳಿಂದ ತಾರಾಪುರ ಗ್ರಾಮ ಸಂಪೂರ್ಣವಾಗಿ ನಡುಗಡ್ಡೆಯಾಗಿ ಮಾರ್ಪಟ್ಟಿದೆ. ಭೀಮಾನದಿ ಪ್ರವಾಹಕ್ಕೆ ಸಿಲುಕಿದ್ದ ಮೂವರು ಗರ್ಭಿಣಿಯರು, ಇಬ್ಬರು ಬಾಲಕರು, 1 ಮಗು ಸೇರಿದಂತೆ ಒಟ್ಟು 10 ಮಂದಿಯನ್ನು ರಕ್ಷಿಸಲಾಗಿದೆ. ನದಿ ತೀರದ ಹಲವಾರು ಗ್ರಾಮಗಳಲ್ಲಿ ನೀರು ನುಗ್ಗಿ ಮನೆಗಳು ಸುತ್ತುವರಿದ ಹಿನ್ನೆಲೆಯಲ್ಲಿ ಸಂತ್ರಸ್ತರನ್ನು ಸ್ಥಳಾಂತರಿಸಲು ಮೂರು ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, 600ಕ್ಕೂ ಹೆಚ್ಚು ಮಂದಿಗೆ ಆಶ್ರಯ ಕಲ್ಪಿಸಲಾಗಿದೆ.

- Advertisement -

ದೇವಣಗಾಂವ, ತವರಾಖೆಡ, ಬ್ಯಾಡಗಿಹಾಳ, ಕುಮಸಗಿ, ಶೇಂಬವಾಡ, ಕಡ್ಲೆವಾಡ, ಶಿರಸಗಿ ಸೇರಿದಂತೆ ನದಿ ತೀರದ ಅನೇಕ ಗ್ರಾಮಗಳಲ್ಲಿ ಪ್ರವಾಹದ ನೀರು ನುಗ್ಗಿ ಜನರಲ್ಲಿ ಆತಂಕ ಉಂಟುಮಾಡಿದೆ. ಬಸವನಬಾಗೇವಾಡಿ ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 47 ಮನೆಗಳು ನೀರಿನೊಳಗೆ ಮುಳುಗಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ತಾರಾಪುರ, ತಾವರಖೆಡ ಮತ್ತು ಕುಮಸಗಿ ಗ್ರಾಮಗಳಲ್ಲಿ ಕಾಳಜಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಶುಕ್ರವಾರ ಆಲಮೇಲ ತಹಶೀಲ್ದಾರ್ ಧನಪಾಲ ಶೆಟ್ಟಿ ದೇವುರಾ ಅವರು ನದಿ ತೀರದ ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹದಿಂದ ಉಂಟಾದ ಹಾನಿ ಪರಿಶೀಲಿಸಿದರು. ಕುಮಸಗಿ ಗ್ರಾಮದಲ್ಲಿ ಸಂಚರಿಸಿ, ಹಾನಿಗೊಳಗಾದ ಮನೆಗಳು ಮತ್ತು ಬೆಳೆಗಳ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳದಲ್ಲೇ ತಂಗಿ ಯಾವುದೇ ತುರ್ತು ಪರಿಸ್ಥಿತಿ ಉಂಟಾಗದಂತೆ ಕ್ರಮ ಕೈಗೊಂಡಿದ್ದಾರೆ.

ಭೀಮಾ ನದಿಯ ನೀರು ಸುತ್ತುವರಿದ ಪರಿಣಾಮ ಹಳೆ ತಾರಾಪುರ ಗ್ರಾಮ ಸಂಪೂರ್ಣವಾಗಿ ನಡುಗಡ್ಡೆಯಾಗಿ ಮಾರ್ಪಟ್ಟಿದೆ. ಹೊಸ ತಾರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾಳಜಿ ಕೇಂದ್ರವನ್ನು ತೆರೆಯಲಾಗಿದೆ. ತಹಶೀಲ್ದಾರ ಧನಪಾಲ ಶೆಟ್ಟಿ, ಕಡಣಿ ಗ್ರಾಮ ಪಂಚಾಯಿತಿ ಪಿಡಿಓ ಶರಣಗೌಡ ಕಡ್ಲೆವಾಡ ಮತ್ತು ತಾರಾಪುರ ಗ್ರಾಮಸಾಯಕ ಮಡಿವಾಳಪ್ಪ ಬಿರಾದಾರ ಸ್ಥಳ ಪರಿಶೀಲನೆ ನಡೆಸಿದರು. ದೇವಣಗಾಂವ ಮತ್ತು ಕುಮಸಗಿ ಗ್ರಾಮಗಳಲ್ಲಿಯೂ ಕಾಳಜಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ.

ಜಿಲ್ಲೆಗೆ ಹೊಂದಿಕೊಂಡಿರುವ ನೆರೆಯ ಸೋಲಾಪುರ ಜಿಲ್ಲೆಯಲ್ಲಿ ಸೀನಾ, ಕೊಳೆಗಾವ್‌, ಭೀಮಾ ಬೋರಿ ನದಿಗಳು ಉಕ್ಕಿ ಹರಿಯುತ್ತಿದ್ದು, ಜಿಲ್ಲೆಯ 431 ಶಾಲೆಗಳು ಜಲಾವೃತಗೊಂಡಿವೆ ಎಂದು ವರದಿಯಾಗಿದೆ.

ದೇವಣಗಾಂವ ಸಮೀಪದ ಸೊನ್ನ ಬ್ಯಾರೇಜ್‌ನಿಂದ ಗುರುವಾರ 28 ಗೇಟ್‌ಗಳನ್ನು ತೆರೆಯಲಾಗಿದ್ದು, ಸುಮಾರು 3.55 ಲಕ್ಷ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ. ಸೀನಾ ನದಿಯಿಂದ 2.15 ಲಕ್ಷ ಕ್ಯೂಸೆಕ್, ಉಜನಿ ಮತ್ತು ವೀರ ಜಲಾಶಯಗಳಿಂದ 80 ಸಾವಿರ ಕ್ಯೂಸೆಕ್ ನೀರು ಸೇರಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ಭೀಮಾ ನದಿ ಪಾತ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಸುಮಾರು 60 ಸಾವಿರ ಕ್ಯೂಸೆಕ್ ನೀರು ಹೆಚ್ಚುವರಿಯಾಗಿ ಹರಿದುಬರುತ್ತಿದೆ. ಆದರೆ, ಸೀನಾ ನದಿ ಪಾತ್ರದಲ್ಲಿ ಮಳೆ ಪ್ರಮಾಣ ಕಡಿಮೆಯಾಗುತ್ತಿರುವುದರಿಂದ ಮುಂದಿನ ಎರಡು ದಿನಗಳಲ್ಲಿ ಪ್ರವಾಹ ಪ್ರಮಾಣ ಸ್ವಲ್ಪ ಮಟ್ಟಿಗೆ ಇಳಿಯುವ ಸಾಧ್ಯತೆಯಿದೆ ಎಂದು ಅಜ್ಜಲಪುರ ಕೆಎನ್ಎನ್ಎಲ್ಎ ಕಾರ್ಯನಿರ್ವಾಹಕ ಇಂಜಿನಿಯರ್ ಸಂತೋಷ್ ಕುಮಾರ್ ಸಜ್ಜನ್ ತಿಳಿಸಿದ್ದಾರೆ.

ಇದನ್ನೂ ಓದಿ: ವಿಜಯಪುರ | ಭೀಮಾ ನದಿಯ ರೌದ್ರ ರೂಪ; ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

ಪ್ರವಾಹದ ಪರಿಣಾಮ ಇಂಡಿ ಪಟ್ಟಣದ ಅಗರಖೇಡಾ ರಸ್ತೆಯಲ್ಲಿರುವ ಶಾಂತು ಧನಶೆಟ್ಟಿ ಅವರ ನೆಲಮಹಡಿಗೆ ನೀರು ನುಗ್ಗಿ ಅಂದಾಜು 1 ಕೋಟಿ ಮೌಲ್ಯದ ರಾಸಾಯನಿಕ ಗೊಬ್ಬರ ಮತ್ತು ಔಷಧಿ ನೀರು ಪಾಲಾಗಿದೆ. ಸುತ್ತ ಮುತ್ತಲ ಕೃಷಿ ಜಮೀನುಗಳು ಹಾಗೂ ಮನೆಗಳು ಹಾನಿಗೊಳಗಾಗಿದ್ದು, ಸ್ಥಳೀಯ ಆಡಳಿತ ಸಂತ್ರಸ್ತರಿಗೆ ನೆರವು ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಕ್ರಮಕ್ಕೆ ಮುಂದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು,...

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...