ವಿಜಯಪುರ | ಬಿಲ್ಕಿಸ್ ಬಾನೊ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು; ಪ್ರಗತಿಪರ ಸಂಘಟನೆಗಳ ಸಭೆ

Date:

Advertisements

2002ರ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಅವರ ಏಳು ಮಂದಿ ಕುಟುಂಬಸ್ಥರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸರ್ವೋಚ್ಛ ನ್ಯಾಯಾಲಯವು ನ್ಯಾಯವನ್ನು ಎತ್ತಿ ಹಿಡಿದಿರುವುದರಿಂದ ಗುಜರಾತ್ ಸರ್ಕಾರಕ್ಕೆ ಕಪಾಳಮೋಕ್ಷ ಮಾಡಿದಂತಾಗಿದೆ ಎಂದು ಪ್ರಗತಿ ಪರ ಸಂಘಟನೆಗಳು ಅಭಿಪ್ರಾಯಿಸಿದೆ.

ಗುಜರಾತ್ ಸರ್ಕಾರದ ನಡೆಯ ವಿರುದ್ಧ ವಿಜಯಪುರ ನಗರದ ಅಂಬೇಡ್ಕರ್ ಸರ್ಕಲ್‌ನಲ್ಲಿ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

“ಬಿಲ್ಕಿಸ್‌ ಬಾನೊ ಪ್ರಕರಣದ 11 ಮಂದಿ ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್ ಸರ್ಕಾರದ ತೀರ್ಮಾನವನ್ನು ಸರ್ವೋಚ್ಛ ನ್ಯಾಯಾಲಯವು ರದ್ದುಗೊಳಿಸಿ, ಅಪರಾಧಿಗಳು ಎರಡು ವಾರದೊಳಗೆ ಶರಣಾಗುವಂತೆ ಆದೇಶಿಸಿರುವುದು ಗುಜರಾತ್‌ ಸರ್ಕಾರಕ್ಕೆ ಕಪೋಳಮೋಕ್ಷ ಮಾಡಿದಂತಾಗಿದೆ” ಎಂದು ಪ್ರತಿಭಟನಾಕಾರರು ತಿಳಿಸಿದರು.

Advertisements

“ಗುಜರಾತ್ ಸರ್ಕಾರವು ಯಾವ ರೀತಿ ಮಹಾರಾಷ್ಟ್ರ ಸರ್ಕಾರದ ಅಧಿಕಾರ ವ್ಯಾಪ್ತಿಗೆ ಕೈಹಾಕಿ ಕ್ಷುಲ್ಲಕ ರಾಜಕೀಯ ಕಾರಣಕ್ಕಾಗಿ ಮಹಿಳೆಯರ ಮೇಲಿನ ಅಪರೂಪದಲ್ಲಿ ಅಪರೂಪದ ದೌರ್ಜನ್ಯ ಪ್ರಕರಣದ ಅಪರಾಧಿಗಳನ್ನು ಕಾನೂನುಬಾಹಿರವಾಗಿ ಬಿಡುಗಡೆ ಮಾಡಿದೆ ಎಂಬುದನ್ನು ಈ ತೀರ್ಪು ಎತ್ತಿ ತೋರಿಸಿದೆ. ಗುಜರಾತ್ ಬಿಜೆಪಿ ಸರ್ಕಾರದ ಈ ಕ್ರಮವನ್ನು ಖಂಡನೀಯ” ಎಂದರು.

ಈ ಸುದ್ದಿ ಓದಿದ್ದೀರಾ? ಹಾಸನ | ಮಾಜಿ ಕಾರು ಚಾಲಕ ಮತ್ತು ಆತನ ಪತ್ನಿ ಮೇಲೆ ಭವಾನಿ ರೇವಣ್ಣ ಹಲ್ಲೆ – ಆರೋಪ; ಮಹಿಳೆಯರ ಪ್ರತಿಭಟನೆ

ಈ ಸಂದರ್ಭದಲ್ಲಿ ಭೀಮಸಿ ಕಲಾದಗಿ, ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಫಾದರ್ ತಿಯೋಲ್ ಮಾಚಾದೊ, ಪ್ಲಮ್ ಸಮಿತಿಯ ಅಧ್ಯಕ್ಷ ಅಕ್ರಮ ಮಾಶಾಳಕರ್, ಗ್ರಾಮೀಣ ಬ್ಯಾಂಕ್ ಯೂನಿಯನ್ ಮುಖಂಡ ಜಿ ಜಿ ಗಾಂಧಿ, ಸಿ ಎ ಗಂಟಪ್ಪಗೋಳ, ಮಹಿಳಾ ಮುಖಂಡರುಗಳಾದ ಸುರೇಖಾ ರಜಪೂತ, ನಿರ್ಮಲ ಹೊಸಮನಿ, ಶಿವಬಾಳಮ್ಮ ಕೊಂಡಗೊಳಿ, ಸುನಿತಾ ಮೋರೆ, ವಿದ್ಯಾವತಿ ಅಂಕಲಗಿ, ಮುಖಂಡರುಗಳಾದ ಅಪ್ಪಸಾಹೇಬ ಯರನಾಳ, ಸಿದ್ದಲಿಂಗ ಬಾಗೇವಾಡಿ, ಲಕ್ಷ್ಮಣ ಹಂದ್ರಾಳ, ಎಚ್ ಟಿ ಭರತಕುಮಾರ, ದಸ್ತಗಿರಿ ಉಕ್ಕಲಿ, ಮೀನಾಕ್ಷಿ ಸಿಂಗೆ, ಭೂಮಿ ಕಾಮಿನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X