ವಿಜಯಪುರ | ಬಜೆಟ್‌ ಕುರಿತು ಬಿಜೆಪಿ ಟೀಕೆ; ತಿರುಗೇಟು ಕೊಟ್ಟ ಕೆಪಿಸಿಸಿ ವಕ್ತಾರ ಗಣಿಹಾರ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ವರಿಗೂ ಸಮಪಾಲು ಎಂಬ ನೀತಿಯಡಿ ಬಜೆಟ್ ಮಂಡಿಸಿದ್ದಾರೆ. ಆದರೆ, ಪ್ರತಿಪಕ್ಷ ಬಿಜೆಪಿಯವರು ‘ಹಲಾಲ್’ ಪದದ ಅರ್ಥ ಗೊತ್ತಿಲ್ಲದೆಯೇ ‘ಹಲಾಲ್ ಬಜೆಟ್’ ಎಂದು ಟೀಕಿಸಿದ್ದಾರೆ. ‘ಹಲಾಲ್’ ಎಂದರೆ ಪ್ರಮಾಣೀಕೃತ, ಕಾನೂನು ಬದ್ಧ ಎಂಬ ಅರ್ಥ ಹೊಂದಿದೆ. ಹಾಗಾದರೆ, ಬಿಜೆಪಿಯುವರು ಇದೊಂದು ಉತ್ತಮ ಬಜೆಟ್ ಎಂಬುವುದಾಗಿ ಒಪ್ಪಿಕೊಂಡಂತಾಗಿದೆ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ ಗಣಿಹಾರ ಬಿಜೆಪಿಗರಿಗೆ ತಿರುಗೇಟು ನೀಡಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಿಎಂ ಬಜೆಟ್ ಭಾಷಣ ಓದಿ ಮುಗಿಸುವ ಮೊದಲೇ ಮುಸ್ಲಿಮರ ಬಗ್ಗೆ ಟೀಕೆ ಮಾಡಲು ಬಿಜೆಪಿಯವರಿಗೆ ಆತುರ ಇತ್ತು. ಹೀಗಾಗಿಯೇ ಹಲಾಲ್ ಪದದ ಅರ್ಥವನ್ನೂ ತಿಳಿದುಕೊಳ್ಳದೇ ಹಲಾಲ್ ಬಜೆಟ್ ಎಂದು ಟೀಕಿಸಿದ್ದಾರೆ. ಮತ್ತೊಂದೆಡೆ, ಪ್ರಧಾನಿಯವರು ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂದು ಹೇಳುತ್ತಾರೆ. ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಕಡಿಮೆ ಅನುದಾನ ಸಿಕ್ಕಿರುವ ಬಗ್ಗೆ ರಾಜ್ಯ ಬಿಜೆಪಿಯವರು ಧ್ವನಿ ಎತ್ತಿದ್ದರೆ, ಪ್ರಧಾನಿಯವರ ಘೋಷಣೆಯಾದರೂ ಸಾಕಾರವಾಗುತ್ತಿತ್ತು” ಎಂದರು.

ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ 4.5 ಸಾವಿರ ಕೋಟಿ ರೂ. ಮೀಸಲಿಸಲಾಗಿದೆ. ಪರಿಶಿಷ್ಟ ಜಾತಿ, ಪಂಗಡ ನಂತರ ಮುಸ್ಲಿಂ ಸಮುದಾಯವೇ ದೊಡ್ಡದಾಗಿದೆ. ವಾಸ್ತವವಾಗಿ ಅಲ್ಪಸಂಖ್ಯಾತ ಸಮಯದಾಯಕ್ಕೆ 20 ಸಾವಿರ ಕೋಟಿ ರೂ. ಅನುದಾನ ನೀಡಬೇಕಾಗಿತ್ತು. ಅಲ್ಲದೇ, ಜಮೀರ್ ಅಹ್ಮದ್ ಖಾನ್ ಬಜೆಟ್ ಮಂಡನೆ ಮಾಡಿದಂತಿದೆ ಎಂದೂ ಬಿಜೆಪಿಯವರು ಟೀಕಿಸಿದ್ದಾರೆ. ಮುಂದೊಂದು ದಿನ ಜಮೀರ್ ಸಹ ಮುಖ್ಯಮಂತ್ರಿಯಾಗಿ ಬಜೆಟ್ ಮಂಡಿಸಿದರೂ ಅಚ್ಚರಿ ಇಲ್ಲ ಇದರೊಂದಿಗೆ ಬಿಜೆಪಿ ಬಯಕೆ ಸಹ ಈಡೇರಬಹದು” ಎಂದು ತಿರುಗಿ ಟೀಕಿಸಿದರು.

Advertisements

ಮುಖಂಡ ಎಂ.ಸಿ.ಮುಲ್ಲಾ ಮಾತನಾಡಿ, “ರಾಜ್ಯದಲ್ಲಿ ವಿರೋಧ ಪಕ್ಷವೇ ಸರಿಯಿಲ್ಲ. ಈ ಸ್ಥಾನವನ್ನು ನಿಭಾಯಿಸುವಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ. ಬಿಜೆಪಿಯವರಿಗೆ ಬಜೆಟ್ ಎಂದರೆ ಗೊತ್ತಿಲ್ಲ, ಬಜೆಟ್ ಅಭ್ಯಾಸ ಮಾಡಿಲ್ಲ. ರಾಜ್ಯ ಬಿಜೆಪಿ ನಾಯಕರಿಗೆ ಕೇವಲ ಹಿಜಾಬ್, ಹಲಾಲ್, ಹಿಂದೂ, ಮುಸ್ಲಿಂ ಜಗಳವೇ ಉಸಿರಾಟವಾಗಿದೆ. ಗ್ಯಾರಂಟಿ ಅನುದಾನ ಬಳಸಿಕೊಂಡಂತೆ ಅಲ್ಪಸಂಖ್ಯಾತ ಸಮುದಾಯದ ಹಣ ಬಳಸಿಕೊಳ್ಳಲಿ ಎಂದು ಮುತ್ಸದ್ದಿ ರಾಜಕಾರಣಿಯಾಗಿರುವ ಸಂಸದ ರಮೇಶ ಜಿಗಜಿಣಗಿ ಹೇಳಿಕೆ ನೀಡಿದ್ದು ಸರಿಯಲ್ಲ. ಮುಸ್ಲಿಂ ಬೆಂಬಲದಿಂದಲೇ ರಾಜಕೀಯ ಪ್ರವೇಶ ಮಾಡಿದ್ದನ್ನು ಅವರು ಮರೆಯಬಾರದು. ಇತಿಹಾಸದಲ್ಲಿ ಇಂತಹ ವಿರೋಧ ಪಕ್ಷವನ್ನು ನೋಡಿಲ್ಲ ಕೇವಲ ಜಟಕಾ, ಹಲಾಲ್ ಎಂಬ ವಿಷಯವನ್ನೇ ಜನರ ಮುಂದೆ ತರುವ ಬಿಜೆಪಿಯುವರು ತಮ್ಮ ಪಕ್ಷವನ್ನು ಭಾರತೀಯ ಜನತಾ ಪಾರ್ಟಿ ಬದಲಿಗೆ ಭಾರತೀಯ ಜಟಕಾ ಪಾರ್ಟಿ ಎಂದು ಬದಲಾಯಿಸಿಕೊಳ್ಳಬೇಕು” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ವಿಜಯಪುರ | ಬೆಟ್ಟಿಂಗ್‌ ಆ್ಯಪ್‌ಗಳನ್ನು ನಿಷೇಧಿಸುವಂತೆ ಜಿಲ್ಲಾಧಿಕಾರಿಗೆ ಮನವಿ

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ವಸಂತ ಹೊನಮೋಡೆ, ನಾಗರಾಜ ಲಂಬು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X