ವಿಜಯಪುರ | ಬಿಜೆಪಿ ಭಯದ ವಾತಾವರಣ ಸೃಷ್ಟಿ ಮಾಡುತ್ತಿದೆ: ಸಚಿವ ಶಿವಾನಂದ ಪಾಟೀಲ್‌

Date:

ಒಬ್ಬ ಮುಖ್ಯಮಂತ್ರಿಯನ್ನು ಅಧಿಕಾರದಲ್ಲಿದ್ದಾಗಲೇ ಬಂಧನ ಮಾಡಿ ಬಿಜೆಪಿ ಭಯದ ವಾತಾವರಣ ಸೃಷ್ಟಿ ಮಾಡುತ್ತಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ಆಕ್ರೋಶ ವ್ಯಕ್ತಪಡಿಸಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿ ಬುಧವಾರ (ಮಾ.27) ಸಂಜೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ವಿಧಾನಸಭೆ ಮತಕ್ಷೇತ್ರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಚುನಾವಣೆ ಬಾಂಡ್ ಹೆಸರಲ್ಲಿ ಬಿಜೆಪಿ ಪಕ್ಷ ಆರು ಸಾವಿರ ಕೋಟಿ ರೂ.ಸಂಗ್ರಹಿಸಿದ್ದು ಯಾವ ಲೆಕ್ಕವೂ ಇಲ್ಲ, ಒಬ್ಬರ ಬಂಧನವೂ ಇಲ್ಲ. ಆದರೆ, ಅಬಕಾರಿ ಹಗರಣದ ನೆವದಲ್ಲಿ ಕೇವಲ ನಾನೂರು ಕೋಟಿ ಅವ್ಯವಹಾರದ ಮೇಲೆ ಇಡಿ ಮುಖಾಂತರ ಕೇಜ್ರಿವಾಲರನ್ನು ಬಂಧಿಸಲಾಗಿದೆ. ಇದೆಲ್ಲ ಜನ ತಿಳಿದುಕೊಳ್ಳಬೇಕು ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಭಿವೃದ್ಧಿ ಕೆಲಸಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಪಕ್ಷ ಮತ ಕೇಳುತ್ತಿದೆ. ಆದರೆ ಬಿಜೆಪಿ ಬರೀ ಅನಗತ್ಯ ವಿಷಯಗಳ ಬೆನ್ನು ಬಿದ್ದಿದೆ. ಬಾಗಲಕೋಟ ಹಾಗೂ ವಿಜಯಪುರ ಲೋಕಸಭೆಗೆ ಕಾಂಗ್ರೆಸ್ ಪಕ್ಷದವರು ಆರಿಸಿ ಬಂದರೆ ಆಲಮಟ್ಟಿ ಅಣೆಕಟ್ಟು ಎತ್ತರಿಸಿ ಎರಡೂ ಜಿಲ್ಲೆಗೆ ಸಂಪೂರ್ಣ ನೀರಾವರಿ ಮಾಡಲಾಗುತ್ತದೆ. ಈ ಸಲ ಬದಲಾವಣೆ ಮಾಡಿ, ರಾಜು ಆಲಗೂರರನ್ನು ಗೆಲ್ಲಿಸಿ ಎಂದು ಕೇಳಿಕೊಂಡರು.

ವಿಜಯಪುರ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಮಾತನಾಡಿ, ಬಿಜೆಪಿಗೆ ಮತ ಕೇಳುವ ನೈತಿಕತೆಯೇ ಇಲ್ಲ. ಒಂದೇ ಒಂದು ಪ್ರಶ್ನೆ ಕೇಳದೆ, ಯಾವ ಅಭಿವೃದ್ಧಿಯೂ ಮಾಡದೇ ಇರುವ ಬಿಜೆಪಿ ಅಭ್ಯರ್ಥಿಗೆ ಮತ ಕೇಳುವ ಹಕ್ಕಿಲ್ಲ. ಕಾಂಗ್ರೆಸ್ ಪಕ್ಷ ಎಲ್ಲ ಬಗೆಯಿಂದಲೂ ಅಭಿವೃದ್ಧಿ ಕೆಲಸ ಮಾಡಿದೆ. ಕೇಂದ್ರದಲ್ಲೂ ಅಧಿಕಾರ ನೀಡಿದರೆ, ಎರಡೂ ಕಡೆ ನಮ್ಮದೇ ಸರಕಾರವಾಗಿ ಇನ್ನಷ್ಟು ಕೆಲಸಗಳು ಸಾಧ್ಯವಾಗಲಿವೆ. ಬಿಜೆಪಿಯ ಸುಳ್ಳಿನ ಕಾಯಕ ಬಹಳ ದಿನ ನಡೆಯುವುದಿಲ್ಲ. ಜಿಲ್ಲೆ ಇವರ ಅಧಿಕಾರಾವಧಿಯಲ್ಲಿ ಯಾವ ಅಭಿವೃದ್ಧಿ ಕಂಡಿಲ್ಲ. ಈ ಸಲ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿದರು.

ಈರಣ್ಣ ಪಟ್ಟಣಶೆಟ್ಟ ಪ್ರಾಸ್ತಾವಿಕ ಮಾತನಾಡಿದರು. ಶೇಖರಗೌಡ ಪಾಟೀಲ ಸ್ವಾಗತಿಸಿದರು. ಭಾಗ್ಯರಾಜ ಸೊನ್ನದ ನಿರೂಪಿಸಿದರು. ಶರಣಪ್ಪ ಬಳ್ಳಾ, ಬಸವರಾಜ ಜಾಲಗೇರಿ, ಕಲ್ಲು ದೇಸಾಯಿ ಕೊಲ್ಹಾರ, ತಾನಾಜಿ ನಾಗರಾಳ, ಶಿವನಗೌಡ ಗುಜಗೊಂಡ, ರಾಜಣ್ಣ ಪಾಟೀಲ, ಆರ್.ಎನ್. ಸೂಳಿಬಾವಿ, ಎಮ್.ಜಿ. ಪಡಗಾನೂರ, ಶೇಖರ ಗೊಳಸಂಗಿ, ಸಿ.ಎಚ್. ಗಿಡ್ಡಪ್ಪಗೊಳ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರುಕ್ಮಿಣಿ, ಮುಸ್ಕಾನ್, ಬಸವರಾಜ ಸೋಮಪುರ, ಮಲ್ಲನಗೌಡ ಪಾಟೀಲ, ಚಂದ್ರಶೇಖರಗೌಡ ಪಾಟೀಲ, ಎಸ್.ಬಿ. ಪತಂಗಿ, ಬಿಎಸ್ ಕಲ್ಲೂರ, ಮಲ್ಲಪ್ಪ ಬಾಗೇವಾಡಿ, ಅಣ್ಣಾರಾಯ ಪಾಟೀಲ, ಮಹ್ಮದ ಹನೀಫ್ ಪತಂಗಿ, ರಾಜುಗೌಡ ಪಾಟೀಲ, ಭರತ್ ಅಗರವಾಲ್, ನಾಗನಗೌಡ ಹಂಗರಗಿ, ಸುಭಾಶ ಉಕ್ಕಲಿ, ವಿಶ್ವನಾಥಗೌಡ ಪಾಟೀಲ, ಸಾಹೇಬಗೌಡ ಪಾಟೀಲ, ಸಲೀಂ ನಾಗಠಾಣ, ಚನ್ನಪ್ಪಗೌಡ ಬಿರಾದಾರ ಅನೇಕರಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಲೋಕಸಭಾ ಚುನಾವಣೆ ಹಿನ್ನೆಲೆ, ಏ.26 ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...

ಚಿಕ್ಕಮಗಳೂರು | ಹಿಂದು ಕಾರ್ಯಕರ್ತನ ಮೇಲೆ ಬಿಜೆಪಿಗರ ಹಲ್ಲೆ

ಹಿಂದುತ್ವವಾದಿ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿ, ಥಳಿಸಿರುವ ಘಟನೆ...

ಮಂಡ್ಯ | 8,000 ಕಿ.ಮೀ ದೂರದಿಂದ ಬಂದು ಮತದಾನ ಮಾಡಿದ ಯುವತಿ!

ಯುವತಿಯೊಬ್ಬರು ಬರೋಬರಿ 8,000 ಕಿ.ಮೀ ದೂರದ ಲಂಡನ್‌ನಿಂದ ಮಂಡ್ಯಕ್ಕೆ ಬಂದು ಮತದಾನ...

ದಕ್ಷಿಣ ಕನ್ನಡ | 100% ಮತದಾನ ದಾಖಲಿಸಿದ ಕುಗ್ರಾಮ

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ನಡೆದಿದೆ. ದಕ್ಷಿಣ...