ವಿಜಯಪುರ | ಬುದ್ಧ ದೇವರಲ್ಲ: ಜ್ಞಾನದ ಬೆಳಕು: ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ

Date:

Advertisements

ಬುದ್ಧ ಎಂದರೆ ದೇವರಲ್ಲ, ಬುದ್ಧ ಎಂದರೆ ಅರಿವಿನ, ಜ್ಞಾನದ ಬೆಳಕು. ಮೂಢ ನಂಬಿಕೆಗಳಿಂದ ಹೊರಬಂದು ಅರಿವಿನ ಭಾರತ ನಿರ್ಮಾಣ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ವಿಜಯಪುರದ ಸಾರಿಪುತ್ರ-ಬೋಧಿಧಮ್ಮ ಬುದ್ಧವಿಹಾರದಲ್ಲಿ ನಡೆದ 68ನೇ ಧಮ್ಮಚಕ್ರ ಪರಿವರ್ತನ ದಿನಾಚರಣೆ ಹಾಗೂ ವರ್ಷಾವಾಸ ಸಮಾರೋಪ ಕಾರ್ಯಕ್ರಮವನ್ನು ಉದ್ಘಾಟಿಸಿದ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.

2500 ವರ್ಷಗಳ ಹಿಂದೆ ಜೂಜಾಟ, ಸುರಾಪಾನ, ಪ್ರಾಣಿಬಲಿ ಮುಂತಾದ ಅನಿಷ್ಟಗಳ ಮೂಲಕ ಸಮಾಜವು ನೈತಿಕವಾಗಿ ಅಧಃಪತನಗೊಂಡಿದ್ದ ಸಮಯದಲ್ಲಿ ಬುದ್ಧನೆಂಬ ಹೊಸಬೆಳಕು ಮೂಡಿಬಂತು. ಭಗವಾನ ಬುದ್ಧರು ಕರ್ಮಸಿದ್ಧಾಂತವನ್ನು ಒಪ್ಪದೆ, ದೇವರು, ಆತ್ಮ, ಪುನರ್ಜನ್ಮಗಳನ್ನು ನಿರಾಕರಿಸಿದರು. ಬುದ್ಧನ ಧಮ್ಮದಲ್ಲಿ ದೇವರಿಗೆ ಸ್ಥಾನವಿಲ್ಲ, ನೈತಿಕತೆಗೆ ಸ್ಥಾನವಿದೆ ಎಂದರು.

ಬುದ್ಧ ವಿಹಾರಗಳು ಕೇವಲ ಪೂಜೆ, ಪ್ರಾರ್ಥನೆಯ ತಾಣಗಳಾಗದೆ ಶೈಕ್ಷಣಿಕ ಕೇಂದ್ರಗಳಾಗಿ, ಸಮಾಜಕ್ಕೆ ಜ್ಞಾನವನ್ನು ಹಂಚಬೇಕು. ಮಹಿಳೆಯರ ಹಕ್ಕುಗಳಿಗಾಗಿ ಮಂತ್ರಿಪದವಿಯನ್ನು ಧಿಕ್ಕರಿಸಿದ ಅಂಬೇಡ್ಕರ್ ಬೌದ್ಧ ಧಮ್ಮವನ್ನು ಸ್ವೀಕರಿಸುವ ಮೂಲಕ ಪ್ರಬುದ್ಧ ಭಾರತ ನಿರ್ಮಾಣದ ಕನಸು ಕಂಡಿದ್ದರು. ಬುದ್ಧ-ಅಂಬೇಡ್ಕರ್ ಕನಸಿನ ಪ್ರಬುದ್ಧ ಭಾರತವನ್ನು ನಿರ್ಮಿಸಬೇಕಿದೆ ಎಂದರು.

Advertisements

ಬಂತೇ ಡಾ. ಶಾಕು ಬೋಧಿಧಮ್ಮ ಮಾತನಾಡಿ, ಜಾತಿ ಧರ್ಮಗಳ ಹೆಸರಿನಲ್ಲಿ ಮನುಷ್ಯ ಮನುಷ್ಯರ ನಡುವೆ ನಡೆಯುತ್ತಿರುವ ಸಂಘರ್ಷ ನಿಲ್ಲಬೇಕು. ಯುದ್ಧದ ಹೆಸರಿನಲ್ಲಿ ಮಾನವ ಕುಲವೇ ತಲ್ಲಣಿಸುತ್ತಿದೆ. ಇಡೀ ವಿಶ್ವವೇ ಇಂದು ಶಾಂತಿಯನ್ನು ಬಯಸುತ್ತಿದೆ. ಭಗವಾನ ಬುದ್ಧರ ಬೋಧನೆಗಳು ಮಾತ್ರ ಎಲ್ಲ ಸಂಕಟಗಳಿಗೆ ಪರಿಹಾರ ನೀಡಬಹುದಾಗಿದೆ ಎಂದರು.

ಇದನ್ನು ಓದಿದ್ದೀರಾ? ಹೊಸ ಪುಸ್ತಕ | ಮಾನವೀಯತೆಯ ಉಳಿವಿಗೆ ಪ್ರತಿರೋಧದ ದನಿ ʼಸ್ವಾಭಿಮಾನದ ಗತ್ತಿನ್ಯಾಗʼ

ಈ ಸಂದರ್ಭದಲ್ಲಿ ಬಂತೇ ಬೋಧಿ ಆನಂದ, ಭಂತೆ ಬೋಧಿಚಕ್ಷು, ಭಂತೆ ಬೋಧಿದರ್ಪಣ, ಪ್ರಭುಗೌಡ ಪಾಟೀಲ, ಆರ್.ಡಿ. ಸೂಳಿಕೇರಿ, ವಿ.ಎ. ಪಾಟೀಲ, ಸುಧಾಕರ ಕನಮಡಿ, ಭೀಮಶಿ ಹಿಪ್ಪರಗಿ, ಅನಿಲ ಹೊಸಮನಿ, ಎಂ.ಬಿ. ಹಳ್ಳದಮನಿ, ರಮೇಶ ಹಳ್ಳಿ, ಕೆ.ಎಂ. ಶಿವಶರಣ, ಬಿ.ಎಸ್. ಬ್ಯಾಳಿ, ಚಿದಾನಂದ ಹೊನವಾಡಕರ, ಸಿ.ಆರ್. ತೊರವಿ, ಎಸ್.ಎಲ್. ಇಂಗಳೇಶ್ವರ, ಮಡಿವಾಳ ಯಾಳವಾರ, ಸಂಜು ಕಂಬಾಗಿ, ಚೆನ್ನು ಕಟ್ಟಿಮನಿ, ಸೋಮು ರಣದೇವಿ, ಮತಿನಕುಮಾರ ದೇವಧರ, ಸಂತೋಷ ಕಾಂಬಳೆ, ಲೋಹಿತ ಪಾರಣ್ಣವರ, ಉಮೇಶ ಹೆಂಡೆಗಾರ, ಮಣಿಕಂಠ ಸಾಗರ, ಸುಭಾಸ ಜುಮನಾಳ, ನಾಗರಾಜ ಲಿಂಗದಳ್ಳಿ, ದಯಾನಂದ ಹಾಲ್ಯಾಳ, ಶ್ರೀಧರ ಹಾಲ್ಯಾಳ, ಗಣೇಶ ಘಟಕಾಂಬಳೆ, ಸುರೇಶ ಬಬಲೇಶ್ವರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X