ವಿಜಯಪುರ | 2024-25ರ ಬಜೆಟ್ ಅತ್ಯಂತ ಜನಪ್ರಿಯ ಬಜೆಟ್:‌ ರವಿಕುಮಾರ ಬಿರಾದಾರ

Date:

Advertisements

3 ಲಕ್ಷದ 71 ಸಾವಿರ ಕೋಟಿ ದಾಖಲೆಯ ಬಜೆಟ್ ಮಂಡಿಸಿದ ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ, ಭಾಗ್ಯಗಳ ಸರದಾರ ಸಿದ್ದರಾಮಯ್ಯನವರ ಬಜೆಟ್ ಅತ್ಯಂತ ಜನಪ್ರಿಯವಾಗಿದೆ. ಬಡವರ, ದೀನದಲಿತರ, ಕಾರ್ಮಿಕರ, ಮಹಿಳೆಯರ ಪರವಾದ ಬಜೆಟ್ ಇದಾಗಿದೆ ಎಂದು ಕೆಪಿಸಿಸಿ ವೈದ್ಯ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ ರವಿಕುಮಾರ ಬಿರಾದಾರ ಬಣ್ಣಿಸಿದರು.

ವಿಜಯಪುರ ನಗರದಲ್ಲಿ ಪತ್ರಿಕಾ ಪ್ರಕಟಣೆಗೆ ತಿಳಿಸಿರುವ ಅವರು, “ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳಾದ ಶಕ್ತಿ ಯೋಜನೆ, ಗ್ರಹಜ್ಯೋತಿ, ಗ್ರಹಲಕ್ಷ್ಮಿ, ಅನ್ನಭಾಗ್ಯ ಹಾಗೂ ಯುವನಿಧಿಗಳಿಗೆ ಹಣ ಒದಗಿಸಿ ನುಡಿದಂತೆ ನಡೆದಿದ್ದಾರೆ. ಅಲ್ಲದೇ ನವಕರ್ನಾಟಕ ನಿರ್ಮಾಣ ಮಾಡುವ ಹತ್ತು ಹಲವು ಘೋಷನೆಗಳನ್ನು ಮಾಡಿದ್ದು, ಇಡೀ ನಾಡಿನ ಜನತೆಯ ಬಾಳು ಬಂಗಾರವಾಗುವ ಕಾಲ ಸನ್ನಿಹಿತವಾಗಿದೆ” ಎಂದು ಹೇಳಿದರು.

“ವಿಜಯಪುರದ ಇಟ್ಟಂಗಿಹಾಳದಲ್ಲಿ ಫುಡ್ ಪಾರ್ಕ್, ಆಲಮೇಲದಲ್ಲಿ ತೋಟಗಾರಿಕಾ ಕಾಲೇಜು, ಬಸವನ ಬಾಗೇವಾಡಿ ಅಭಿವೃದ್ಧಿ ಮಂಡಳಿ ರಚನೆ ಹಾಗೂ ವಿಮಾನ ನಿಲ್ದಾಣ ಶೀಘ್ರ ಕಾರ್ಯ ನಿರ್ವಹಿಸುವಂತೆ ಘೋಷಿಸಿದ್ದು, ವಿಜಯಪುರ ಜಿಲ್ಲೆಯ ನೀರಾವರಿ ಯೋಜನೆಗಳನ್ನು ಶೀಘ್ರದಲ್ಲೇ ಪೂರ್ಣ ಮಾಡುವಲ್ಲಿ ಕ್ರಮ ಕೈಗೊಂಡಿರುವುದು ಜಿಲ್ಲೆ ಜನರಿಗೆ ಬಂಪರ್ ಸಿಕ್ಕಂತಾಗಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಉಡುಪಿ | ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ನೀಡುವ ಗುರಿ ಹೊಂದಿರುವ ಬಜೆಟ್: ರಮೇಶ್ ಕಾಂಚನ್

“ಆಶಾ ಕಾರ್ಯಕರ್ತೆಯರ, ಅಂಗನವಾಡಿ ಕಾರ್ಯಕರ್ತೆಯರ ಮಾಸಾಶನ ಹೆಚ್ಚು ಮಾಡಿದ್ದು, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೂ ಹೆಚ್ಚಿನ ಹಣ ಮಿಸಲಿಟ್ಟಿರುವುದು ಅತೀವ ಸಂತಸ ತಂದಿದೆ. ಜನಸಾಮಾನ್ಯರಿಗೆ ಯಾವುದೇ ಹೆಚ್ಚಿನ ತೆರಿಗೆ ಹೇರದೆ ಆರ್ಥಿಕ ಶಿಸ್ತು ಕಾಪಾಡಿರುವ ಬಜೆಟ್ ಇದಾಗಿದೆ” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X