ವಿಜಯಪುರ | ಬಸ್‌ ಪಲ್ಟಿ; ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುತ್ತಿದ್ದ 15 ಮಂದಿಗೆ ಗಾಯ

Date:

ಚುನಾವಣಾ ಕರ್ತವ್ಯದ ತರಬೇತಿಗೆ ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದ ಸರ್ಕಾರಿ ಬಸ್ ಪಲ್ಟಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡವಳಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, 12 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಪಘಾತದಲ್ಲಿ 17 ವರ್ಷದ ಯುವತಿ ಸಾವು

50 ಮಂದಿ ಚುನಾವಣಾ ಅಧಿಕಾರಿಗಳಿದ್ದ, ಕೆಎಸ್​ಆರ್​ಟಿಸಿ ಬಸ್ ಸಿಂದಗಿ ಪಟ್ಟಣದತ್ತ ತೆರಳುತ್ತಿತ್ತು. ಈ ವೇಳೆ ಆಕ್ಸೆಲ್ ತುಂಡಾಗಿದ್ದರಿಂದ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಗ್ರಾಮ ವಾಸ್ತವ್ಯ

ನಂಜನಗೂಡು ತಾಲೂಕಿನ ಕಾಡಂಚಿನ ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್‌ ಗ್ರಾಮ ವಾಸ್ತವ್ಯ...

ಕಲಬುರಗಿ | ಹೈ-ಕ ಭಾಗದ ಸಾಹಿತಿಗಳೆಂಬ ಹಣೆಪಟ್ಟಿ ಏಕೆ: ಡಾ. ಚಿದಾನಂದ ಸಾಲಿ

ದಲಿತ ಸಾಹಿತಿಗಳು ಅಂತ ಇರುವ ಹಾಗೆ, ಬ್ರಾಹ್ಮಣ ಕತೆಗಾರರು ಎಂಬ ಹೆಸರು...

ಮದ್ಯದಂಗಡಿ ಬೇಡ – ನೀರು, ಆರೋಗ್ಯ, ಆಹಾರ ಕೊಡಿ; ಸ್ಲಂ ಜನಾಂದೋಲನ ಒತ್ತಾಯ

ನಾಗರೀಕ ಸಮಾಜಕ್ಕೆ ಬೇಕಿರುವುದು ನೀರು, ನೈರ್ಮಲ್ಯ, ಆರೋಗ್ಯ ಮತ್ತು ಆಹಾರವೇ ಹೊರತು,...

ರಾಯಚೂರು | 9 ವರ್ಷಗಳಿಂದ ಅಂಗನವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ರೋಡಲ ಬಂಡಾ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ...