ವಿಜಯಪುರ | ಸಡಗರ ಸಂಭ್ರಮದ ರಂಜಾನ ಹಬ್ಬ ಆಚರಣೆ

Date:

Advertisements

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ರಂಜಾನ ಹಬ್ಬವನ್ನು ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು.

ಸ್ಥಳೀಯ ಅಂಜುಮನ್ ಕಮಿಟಿಯ ಕಾರ್ಯದರ್ಶಿ ಲಾಲಸಾಬ್‌ ಸೈಯದ ಅವರು ಮಾತನಾಡಿ, ಮುಸ್ಲಿಮರ ಪಾಲಿಗೆ ಅತ್ಯಂತ ಪವಿತ್ರವಾಗಿರುವ ಈ ಮಾಸ ರಂಜಾನ್‌. ಚಂದ್ರನ ಚಲನೆಯನ್ನು ಆದರಿಸಿದ ಇಸ್ಲಾಮಿಕ್ ಕ್ಯಾಲೆಂಡರ ಪ್ರಕಾರ 9ನೇಯ ಈ ತಿಂಗಳಲ್ಲಿ ಹಗಲಿನ ಸುಮಾರು 14 ಗಂಟೆಗಳ ಕಾಲ ಉಪವಾಸವಿರುವ ರಂಜಾನ್ ಮಾಸದ ಆಚರಣೆ ಒಂದು ಭಾಗವಷ್ಟೇ, ಹೊರತು ಉಪವಾಸವೇ ಆಚರಣೆ ಅಲ್ಲ ಎಂದರು.

ಇಲ್ಲಿ ಮನಸ್ಸನ್ನು ಹತೋಟಿಯಲ್ಲಿಟ್ಟುಕೊಂಡು ದೇಹದ ಹಸಿವು, ಕಾಮನೆ, ಕೆಟ್ಟದ್ದನ್ನು ಆಚರಿಸುವ ಬಯಕೆಯನ್ನೇ ಮನಸ್ಸಿನಲ್ಲಿ ಮೊಳಕೆ ಒಡೆಯದಂತೆ ಮಾಡಿ ಶುದ್ಧೀಕರಿಸುವುದೇ ಪ್ರಮುಖ ಉದ್ದೇಶ. ಸೂರ್ಯೋದಯಕ್ಕೂ ಸುಮಾರು ಒಂದುವರೆ ಗಂಟೆ ಮೊದಲೇ ಶಹರಿ ಮಾಡಿ ಉಪವಾಸ ಮಾಡುವುದು ಮುಂದಿನ ಹದಿನಾಲ್ಕು ಗಂಟೆಗಳ ಕಾಲ ಮಾನಸಿಕವಾಗಿ ಮಾತ್ರವಲ್ಲ, ಯಾವುದೇ ಪ್ರಲೋಭನೆಗೆ ಒಳಗಾಗದೆ ಸೂರ್ಯಸ್ತದವರೆಗೆ ಕುರಾನ ಪಟ್ಟಣ, ಪ್ರಾರ್ಥನೆ, ದಾನ ಮತ್ತಿತರ ಕೆಲಸಗಳನ್ನು, ನಮ್ಮ ನಿತ್ಯದ ಕೆಲಸಗಳೊಂದಿಗೆ ಆಚರಿಸುವುದೇ ನಿಜವಾದ ಉಪವಾಸವಾಗಿದೆ ಎಂದರು.

Advertisements

ಈ ಉಪವಾಸದ ಉದ್ದೇಶ ಉಪವಾಸದ ಅವಧಿಯಲ್ಲಿ ಸುಳ್ಳು ಹೇಳುವುದು ಲಾಭ ಮಾಡಿಕೊಳ್ಳುವುದು ಇನ್ನೊಬ್ಬರಿಗೆ ನೋವು ನೀಡುವುದು ಮೊದಲಾದ ಬಯಕೆಗಳನ್ನು ಮೂಲದಲ್ಲಿಯೇ ಹತ್ತಿಕ್ಕುವುದೇ ರಂಜಾನ. ಬಡವರ ಹಸಿವು ಶ್ರೀಮಂತರಿಗೆ ಈ ಕಠಿಣ ಪರಿಶ್ರಮದ ಅರಿವು ಮಾಡಿಸುವುದೇ ಉಪವಾಸ ಎಂದರು.

ಈ ಸಂದರ್ಭದಲ್ಲಿ ಹಾಪಿಜ ಮೊಹಮ್ಮದಸಾದ ಅವರು, ದೇಶದ ಒಳಿತಿಗಾಗಿ ರೈತರು ಎದುರಿಸುತ್ತಿರುವ ಬರಗಾಲ ಪ್ರಯುಕ್ತ ಮಳೆಗಾಗಿ ಅಲ್ಲಾಹನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಅಂಜುಮನ್ ಕಮಿಟಿಯ ಅಧ್ಯಕ್ಷ ಹಾರನರಶೀದ  ಹತ್ತರಕಿಹಾಳ, ಸದಸ್ಯರಾದ ಲಾಲ ಸಾಬ ಭಾಗವಾನ, ಬಾಬು ಭಾಗವಾನ, ಮಹಮ್ಮದಹನಿಪ, ಮಹಿಬೂಬ ಸೈಯದ, ಮಹಿಬೂಬ ಭಗವಾನ, ಮತ್ತಿತರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X