ವಿಜಯಪುರ | ಡಿವಿಪಿ ವತಿಯಿಂದ ‘ವಿದ್ಯಾರ್ಥಿ ದಿವಸ’ ಆಚರಣೆ

Date:

Advertisements

ಅಂಬೇಡ್ಕರ್ 1900 ನವೆಂಬರ್ 7ರಂದು ಶಾಲೆಗೆ ಸೇರಿದ್ದರು. ಅವರು ಶಾಲೆಗೆ ಸೇರಿದ ದಿನವನ್ನು ‘ವಿದ್ಯಾರ್ಥಿ ದಿನ’ವೆಂದು ಆಚರಿಸಲು ಮಹರಾಷ್ಟ್ರ ಸರ್ಕಾರ ಆದೇಶಿಸಿದೆ. ಅಂತೆಯೇ ನಾವೂ ಕೂಡ ‘ವಿದ್ಯಾರ್ಥಿ ದಿನ’ ಆಚರಿಸುತ್ತಿದ್ದೇವೆ ಎಂದು ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಮುಖಂಡ ವಿನೋದ ಕಾಳೆ ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಡಿವಿಪಿ ಆಯೋಜಿಸಿದ್ದ ‘ವಿದ್ಯಾರ್ಥಿ ದಿವಸ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಅಂಬೇಡ್ಕರ್ ಶಾಲೆ ಸೇರಿ, ವಿದ್ಯೆಯಲ್ಲಿ ಮಹಾ ಸಾಧಕರಾಗಿ, ವಿಶ್ವ ಅರ್ಥಶಾಸ್ತ್ರಜ್ಞಾನರಾಗಿ, ಸಮಾಜ ವಿಜ್ಞಾನಿಯಾಗಿ, ಉತ್ತಮ ಇತಿಹಾಸತಜ್ಞರಾಗಿ, ಭಾರತ ಸಂವಿಧಾನ ಶಿಲ್ಪಿಯಾಗಿ ಭಾರತದ ಪ್ರಜಾಪ್ರಭುತ್ವ ಪಿತಾಮಹರಾಗಿ, ಸಾಮಾಜಿಕ ನ್ಯಾಯದ ಪ್ರತೀಕವಾಗಿ ಸಮಾನತೆಯ ಪ್ರಜಾತಂತ್ರ ವ್ಯವಸ್ಥೆಗೆ ಕಾರಣರಾಗಿದ್ದಾರೆ. ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಕಲಿತು ಅವರಂತೆ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಇಂಡಿ ಪುರಸಭೆ ಮುಖ್ಯಧಿಕಾರಿಗಳು ಮಾಂತೇಶ ಹಂಗರಗಿ ಹಾಗೂ ಭೀಮಾಶಂಕರ ಮುರಮಾನ, ಭೀಮನಗೌಡ್ರು, ಕಲ್ಲಪ್ಪ ಅಂಜುಟಗಿ, ಮಿಲಿಂದ ಹೊಸಮನಿ, ವಿನೋದ ಕಾಳೆ, ರವಿಕುಮಾರ್ ಶಿಂಗೆ, ಆಕಾಶ ಹಾದಿಮನಿ, ಗಂಗಾಧರ್ ಕಾಳೆ, ಆಕಾಶ ಹೊಸಮನಿ, ಸುನಿಲ ಕಾಲೇಬಾಗ, ರಾಹುಲ ಮನಗೂಳಿ, ರಾಮ ಪೋತೆ, ರಾಹುಲ ಮಡ್ಡಿಮನಿ, ವಿಕಾಸ, ಶ್ರವಣ್, ಸೋನು, ರಾಜು ಹಾಗೂ ವಿದ್ಯಾರ್ಥಿಗಳು ಇದ್ದರು.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X