ವಿಜಯಪುರ | ಕಾಂಗ್ರೆಸ್ ಅಭ್ಯರ್ಥಿಗೆ ವಿಶ್ವಕರ್ಮ ಸಮಾಜದ ಬೆಂಬಲ

Date:

Advertisements

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ವಿಶ್ವಕರ್ಮ ಸಮಾಜವು ಕಾಂಗ್ರೆಸ್ ಪಕ್ಷದ ಲೋಕಸಭೆ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರಿಗೆ ಬೆಂಬಲ ನೀಡಿದೆ.

ಇಂಡಿ ನಗರದ ವಿಶ್ವಕರ್ಮ ವಿಕಾಸ ಸಂಸ್ಥೆಯ ಕಚೇರಿಯಲ್ಲಿ ಸೇರಿದ್ದ ಸಮಾಜದ ಮುಖಂಡರ ಸಭೆಯಲ್ಲಿ, ಈ ಸಲ ಬದಲಾವಣೆ ಮಾಡಬೇಕಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಲಾಗುವುದು. ಅಭಿವೃದ್ಧಿ ದೃಷ್ಟಿಯಿಂದ ಈ ಬಾರಿ ಕಾಂಗ್ರೆಸ್ ಕೈಹಿಡಿಯುವುದು ಅನಿವಾರ್ಯವಾಗಿದೆ ಎಂದು ಮುಖಂಡರು ಹೇಳಿದ್ದಾರೆ.

ಸದ್ಯದ ಸಂಸದರು ದಶಕಗಳಿಂದ ಜಿಲ್ಲೆಗೆ ಆಗಲಿ ಅಥವಾ ಸಣ್ಣ ಸಣ್ಣ ಸಮಾಜಗಳಿಗೇ ಆಗಲಿ ಏನನ್ನೂ ಮಾಡಿಲ್ಲ. ವಿಶ್ವಕರ್ಮ ಸಮಾಜದವರು ತಾವೇ ಸಂಘಟಿತಗೊಂಡು ಏಳ್ಗೆಗೆ ಪ್ರಯತ್ನ ಮಾಡಿದ್ದಾರೆ. ಸರ್ಕಾರದಿಂದ ಯಾವುದೇ ಪ್ರಯೋಜನ ಸಿಕ್ಕಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಸಭ್ಯ, ಅಭಿವೃದ್ಧಿ ಪರ ಚಿಂರಕರಾಗಿದ್ದು, ಅವರಿಂದ ಸಮಾಜಕ್ಕೆ ಅನುಕೂಲ ಆಗಬಹುದು ಎಂದು ಮತಕ್ಷೇತ್ರದ ಸಮಾಜದ ಎಲ್ಲರಲ್ಲಿ ಮನವರಿಕೆ ಮಾಡಿಕೊಡಲಾಗುವುದು ಎಂದು ಮುಖಂಡರು ಹೇಳಿದರು.

Advertisements

ಇದೇ ಸಂದರ್ಭ ಸನ್ಮಾನ ಸ್ವೀಕರಿಸಿ ಮಾತನಾಡಿದ ಅಭ್ಯರ್ಥಿ ರಾಜು ಆಲಗೂರ ಅವರು, ಕಾಯಕ ವರ್ಗದ ಚಿಕ್ಕ ಚಿಕ್ಕ ಸಮುದಾಯದ ಆರ್ಥಿಕ ಸ್ಥಿತಿ ಸುಧಾರಿಸಬೇಕು. ಜನಪ್ರತಿನಿಧಿಗಳು ಇವರಿಗೆ ಸಹಾಯ, ಸಹಕಾರ ನೀಡಬೇಕಿತ್ತು. ಆದರೆ, ಅದಾಗಿಲ್ಲ. ಕಾಂಗ್ರೆಸ್ ಯಾವತ್ತೂ ಎಲ್ಲ ಸಮುದಾಯಗಳ ಜತೆಗೆ ಇದೆ. ಈ ಸಲ ಅವಕಾಶ ಸಿಕ್ಕರೆ ನಿಮ್ಮೆಲ್ಲರ ಅಭಿವೃದ್ಧಿಗೆ ಬದ್ಧನಾಗಿರುವೆ. ನಿಮ್ಮ ಋಣ ತೀರಿಸುವೆ ಎಂದು ಹೇಳಿದರು.

ಸಂಸ್ಥೆಯ ಅಧ್ಯಕ್ಷ ಭೀಮರಾವ ಬಡಿಗೇರ, ಶಿವು ಬಡಿಗೇರ, ಶಿವಶರಣ ಬಡಿಗೇರ, ಶಿವಾನಂದ ಬಡಿಗೇರ, ಅರ್ಚಕರಾದ ವಿಠ್ಠಲಾಚಾರ್ಯ, ಸಂತೋಷ ಪಾಟೀಲ ಅನೇಕರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X