ವಿಜಯಪುರ | ಏ.26ರಂದು ಸಂವಿಧಾನ ಸಂರಕ್ಷಕರ ಸಮಾವೇಶ

Date:

Advertisements

ಸಂವಿಧಾನದ ಮೂಲ ಆಶಯಗಳನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಇದೇ ಏ.26ರಂದು ಸಂವಿಧಾನ ಸಂರಕ್ಷಕರ ಸಮಾವೇಶ ನಡೆಯುತ್ತಿದೆ ಎಂದು ಎದ್ದೇಳು ಕರ್ನಾಟಕದ ರಾಜ್ಯ ಮುಖಂಡರಾದ ಮಲ್ಲಿಗೆ ಸಿರಿಮನೆ ಹೇಳಿದರು.

ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಭಾರತ ದೇಶ ಪ್ರತಿಯೊಬ್ಬ ಪ್ರಜೆಯುನ್ನು ಸಮಾನವಾಗಿ ಕಾಣುತ್ತದೆ. ಈ ದೇಶ ಬಹುತ್ವವನ್ನು ಪ್ರತಿಪಾದಿಸುವಂಥ ದೇಶ. ಇದರ ಮಹತ್ವವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಈ ಸಮಾವೇಶ ನಡೆಯುತ್ತಿದೆ. ಸಂವಿಧಾನದ ಆಶಯಗಳನ್ನು ದೇಶದ ಯುವ ಜನರಿಗೆ, ವಿದ್ಯಾರ್ಥಿಗಳಿಗೆ ತಿಳಿಸುವ ನಿಟ್ಟಿನಲ್ಲಿ ಕರ್ನಾಟಕದಾದ್ಯಂತ ಹಳ್ಳಿ ಪಟ್ಟಣಗಳಲ್ಲಿ ಪ್ರಚಾರ ಮಾಡಿ ಈ ಸಮಾವೇಶವನ್ನು ಯಶಸ್ವಿಗೊಳಿಸಬೇಕು” ಎಂದರು.

ಸಾಹಿತಿ ಪ್ರೊ.ಬರಗೂರ ರಾಮಚಂದ್ರಪ್ಪ ಸಮಾವೇಶದ ಉದ್ಘಾಟನೆ ಮಾಡಲಿದ್ದಾರೆ. ಸಮಾವೇಶದಲ್ಲಿ ಯುವಜನರ ಪ್ರತಿನಿಧಿ ಗುಜರಾತಿನ ಶಾಸಕ ಜಿಗ್ನೇಶ್ ಮೇವಾನಿ, ಸಾಮಾಜಿಕ ಚಿಂತಕ ಪರಕಾಲ ಪ್ರಭಾಕರ, ಸಾಮಾಜಿಕ ಚಳವಳಿಯ ನೇತಾರರಾದ ಮೇಧಾ ಪಾಟ್ಕರ್, ಬಹುಭಾಷಾ ನಟ ಪ್ರಕಾಶ್ ರೈ, ಸಾಹಿತಿಗಳಾದ ಪ್ರೊ. ಪುರುಷೋತ್ತಮ ಬಿಳಿಮಲೆ ಹಾಗೂ ರಾಜ್ಯದ ವಿವಿಧ ಸಮುದಾಯಿಕ ಸಂಘಟನೆಗಳು, ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ಮುಂಚೂಣಿ ನಾಯಕರು ಭಾಗವಹಿಸಲಿದ್ದಾರೆ” ಎಂದು ತಿಳಿಸಿದರು.

Advertisements

ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಫಾ. ಟಿಯೋಲ್ ಮಾಚಾದೊ ಮಾತನಾಡಿ, “ಸಂವಿಧಾನವನ್ನು ದುರ್ಬಲಗೊಳಿಸುವ ಶಕ್ತಿಗಳ ಮುಷ್ಟಿಯಿಂದ ಸಂವಿಧಾನವನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಈ ಸಮಾವೇಶ ಜರುಗಲಿದೆ ಎಂದರು. ಪ್ರತಿಯೊಬ್ಬ ಜಾಗೃತ ನಾಗರಿಕ ಕೂಡ ಈ ಸಮಾವೇಶದಲ್ಲಿ ಭಾಗವಹಿಸಬೇಕು” ಎಂದು ಮನವಿ ಮಾಡಿದರು.

ಇದನ್ನೂ ಓದಿ: ವಿಜಯಪುರ | ಐತಿಹಾಸಿಕ ಸ್ಮಾರಕಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯ: ವಿಜಯ್ ಕುಮಾರ್

ಈ ವೇಳೆ ಎದ್ದೇಳು ಕರ್ನಾಟಕದ ಜಿಲ್ಲಾ ಮುಖಂಡ ಅಬ್ದುಲ್ ಖಧೀರ್, ಜಮಾತ್ ಇಸ್ಲಾಮಿಕ್ ಮುಖಂಡ ಎಂ ಡಿ ಬಳಗಾನೂರ, ಶ್ರೀನಾಥ ಪೂಜಾರಿ, ಅಕ್ರಮ್ ಮಾಶಳಕರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X