ವಿಜಯಪುರ | ಸರ್ಕಾರಿ ಪದವಿ ಕಾಲೇಜು ಮಂಜೂರಿಗೆ ದಲಿತ ವಿದ್ಯಾರ್ಥಿ ಪರಿಷತ್ತು ಆಗ್ರಹ

Date:

Advertisements

ಜಿಲ್ಲೆಯಲ್ಲಿ ಸರ್ಕಾರಿ ಬಿಎಡ್ ಪದವಿ ಕಾಲೇಜುಗಳಲ್ಲಿ ಪ್ರಸ್ತುತ ಖಾಸಗಿ ಪದವಿ ಶಿಕ್ಷಣ ಸಂಸ್ಥೆಗಳು ಮನಬಂದಂತೆ ಹಣ ವಸೂಲಿಗೆ ಇಳಿದಿದ್ದು, ಸರ್ಕಾರಿ ಪದವಿ ಕಾಲೇಜು ಮಂಜೂರು ಮಾಡಲು ಒತ್ತಾಯಿಸಿ ವಿಜಯಪುರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಮನವಿ ಸಲ್ಲಿಸಿದರು.

ಈ ವೇಳೆ ಪರಿಷತ್ ಮುಖಂಡರು ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಪ್ರತಿ ವರ್ಷ 20 ರಿಂದ 30 ಸಾವಿರ ವಿದ್ಯಾರ್ಥಿಗಳು ಪದವಿ ಮುಗಿಸಿ ತೇರ್ಗಡೆ ಹೊಂದುತ್ತಾರೆ. ಅದರಲ್ಲಿ ಅರ್ಧ ಭಾಗದಷ್ಟು ಜನ ಬಿಎಡ್ ದಾಖಲಾತಿಗೆ 2 ರಿಂದ 3 ಲಕ್ಷ ರೂಪಾಯಿ ವಸೂಲಿ ಮಾಡುತ್ತಿದ್ದು, ಇದರಿಂದ ಬಡ ಕುಟುಂಬ ಹಾಗೂ ಗ್ರಾಮೀಣ ಭಾಗದ ಮಕ್ಕಳು ತಮ್ಮ ಶಿಕ್ಷಣವನ್ನೇ ಕುಂಟಿತಗೊಳಿಸಿಕೊಂಡು ಕೂಲಿ ಮಾಡುವಂತಹ ಪರಿಸ್ಥಿತಿ ಎದುರಾಗಿದೆ. ವಿದ್ಯಾಭ್ಯಾಸ ಮಾಡಲೇಬೇಕು ಅನ್ನುವ ಅದೆಷ್ಟೋ ವಿದ್ಯಾರ್ಥಿಗಳು ಸಾಲಮಾಡಿ, ಮನೆಯಲ್ಲಿಯ ಒಡವೆ ಮಾರಿ ಓದುವ ವಾತಾವರಣ ಸೃಷ್ಟಿಯಾಗಿದೆ.

ತಾವು ಮನಸ್ಸು ಮಾಡಿ ಸರ್ಕಾರಿ ಬಿಎಡ್ ಕಾಲೇಜು ಮಂಜೂರು ಮಾಡಿದರೆ, ಹಣ ವಸೂಲಿ ಮಾಡುತ್ತಿರುವ ಕಾಲೇಜುಗಳ ಹಾವಳಿ ಕಡಿಮೆಯಾಗುತ್ತದೆ. ನಾನೂ ಶಿಕ್ಷಕನಾಗಿ ಸೇವೆ ಸಲ್ಲಿಸಬೇಕೆನ್ನುವ ಕನಸು ಹೊತ್ತಿರುವ‌ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.

Advertisements

ಈ ವರದಿ ಓದಿದ್ದೀರಾ? ಬೆಳಗಾವಿ | ಸುಳ್ಳು ಹೆಸರು ದಾಖಲಿಸಿ, ಶಿಶುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪರಾರಿಯಾದ ತಾಯಿ

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಅಕ್ಷಯ ಅಜಮನಿ, ಮಾದೇಶ ಚಲವಾದಿ, ಕಾರ್ಯಕರ್ತ ಸಂದೇಶ್ ಕುಮುಟಗಿ, ಯಾಸೀನ್ ಇನಾಮಧಾರ, ಆಶೀಪ್, ಲೂಲ್ಲು ಮುಲ್ಲಾ, ಮುಂತಾದವರು ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X