ವಿಜಯಪುರ | ʼಡೇರ್ ಡೆವಿಲ್ ಮುಸ್ತಾಫಾʼ ಸಿನಿಮಾ ನಮ್ಮ ದೈನಂದಿನ ಬದುಕಿನ ನಿಜವಾಸ್ತವ ತೋರಿಸುತ್ತದೆ: ಶಶಾಂಕ ಸೋಗಲ್

Date:

Advertisements

ವೈವಿಧ್ಯತೆಯ ಮಧ್ಯೆ ಸಾಮರಸ್ಯದ ಬದುಕಿನ ಮುನ್ನೋಟವನ್ನು ಪ್ರತಿನಿಧಿಸುವ ಪೂರ್ಣಚಂದ್ರ ತೇಜಸ್ವಿಯವರ ಡೇರ್ ಡೆವಿಲ್ ಮುಸ್ತಾಫಾ ಸಿನಿಮಾ ನಮ್ಮಯ ದೈನಂದಿನ ಬದುಕಿನ ನಿಜವಾಸ್ತವವನ್ನು ತೋರಿಸುತ್ತದೆ ಎಂದು ಸಿನೆಮಾದ ನಿರ್ದೇಶಕ ಶಶಾಂಕ ಸೋಗಲ್ ಅಭಿಪ್ರಾಯಪಟ್ಟರು.

ಆವಿಷ್ಕಾರ, ಎಐಡಿಎಸ್‌ಒ, ಎಐಡಿವೈಒ ಹಾಗೂ ಎಐಎಂಎಸ್‌ಎಸ್ ಸಂಘಟನೆಗಳ ನೇತೃತ್ವದಲ್ಲಿ ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ ‘ವಿಜಯಪುರದ 13ನೇ ಸಾಂಸ್ಕೃತಿಕ ಜನೋತ್ಸವ’ದ ಎರಡನೇ ದಿನ ಡೇರ್ ಡೆವಿಲ್ ಮುಸ್ತಾಫಾ ಸಿನೆಮಾ ಪ್ರದರ್ಶನದ ನಂತರದ ಸಂವಾದದಲ್ಲಿ ಮಾತನಾಡಿದರು.

“ಪೂರ್ಣಚಂದ್ರ ತೇಜಸ್ವಿಯವರ ಆಶಯ ಈಗಲೂ ಪ್ರಸ್ತುತವಾಗಿದೆ. ನಮ್ಮ ಸಿನಿಮಾ ಕೇವಲ ಮನರಂಜನೆಗಲ್ಲದೆ ಜನರಿಗೆ ಒಂದು ಸಂದೇಶ ತಲುಪಿಸುವ ಉದ್ದೇಶ ಹೊಂದಿದೆ. ಡೇರ್‌ಡೆವಿಲ್ ಮುಸ್ತಫಾ ಕಥೆ ನನ್ನಲ್ಲಿರುವ ಪೂರ್ವಾಗ್ರಹ ಪೀಡಿತವನ್ನು ಹೊಡೆದು ಹಾಕಿತು. ಹಾಗೆಯೇ ಜನರಲ್ಲಿರುವ ಪೂವಾಗ್ರಹ ಪೀಡಿತವನ್ನು ಹೊಡೆದೋಡಿಸಿ ಜನರು ಪರಸ್ಪರ ಸಾಮರಸ್ಯದಿಂದ ಬದುಕುವ ಸಂದೇಶ ನೀಡಲು ಈ ಸಿನಿಮಾ ತೆಗೆಲಾಯಿತು. ನನ್ನ ಸಿನೆಮಾಗಳಲ್ಲಿ ಹೀರೋ, ವಿಲನ್‌ಗಳು ಇರುವುದಿಲ್ಲ. ಜನರಿಗೆ ವಿಚಾರಗಳು ತಲುಪಿಸುವ ನಿಟ್ಟಿನಲ್ಲಿ ನನ್ನ ಸಿನಿಮಾಗಳು ಇರುತ್ತವೆ” ಎಂದರು.

Advertisements

“ಸಿನಿಮಾಗಳು ಜನತೆಯ ನೈಜ ಸಮಸ್ಯೆಗಳನ್ನು ಚಿತ್ರಿಸುವುದರ ಜತೆಗೆ ಸಮಾಜದಲ್ಲಿ ಹೊಸ ಬದಲಾವಣೆಯನ್ನು ನಿರೀಕ್ಷಿಸುವಂತಿರಬೇಕು. ಈ ಸಿನೆಮಾ ಅಂತಹ ಸೌಹಾರ್ದತೆಯನ್ನು ಜಾಗೃತಗೊಳಿಸುವ ಕೆಲಸ ಮಾಡಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಕೇಂದ್ರಕ್ಕೆ ಇಚ್ಛಾಶಕ್ತಿ ಇದ್ದಿದ್ದರೆ ಶ್ರೀಗಳಿಗೆ ʼಭಾರತ ರತ್ನʼ ದೊರಕುತಿತ್ತು: ಗೃಹ ಸಚಿವ ಪರಮೇಶ್ವರ್

ಡೇರ್ ಡೆವಿಲ್ ಮುಸ್ತಾಫಾ ಸಿನಿಮಾದ ಕೇಂದ್ರ ಬಿಂದುವಾದ ನಾಯಕ ನಟ ಶಿಶಿರ ಬೈಕಾಡಿ ಮಾತನಾಡಿ, “ನಮ್ಮೆಲ್ಲ ಪೂರ್ವಗ್ರಹಗಳನ್ನು ಒಂದೆಡೆ ಇಟ್ಟು ಮುಕ್ತ ಮನಸ್ಸಿನಿಂದ ಸಿನಿಮಾವನ್ನು ವೀಕ್ಷಿಸಬೇಕು. ಸಿನಿಮಾಗಳು ಕೇವಲ ಮನರಂಜನೆಯ ಸಾಧನಗಳಾಗದೇ ನಮ್ಮನ್ನು ಚಿಂತನೆಗೆ ಹಚ್ಚುವಂತಿರಬೇಕು. ಜತೆಗೆ ಹೊಸ ಹೊಸ ಪ್ರಶ್ನೆಗಳನ್ನು ಹುಟ್ಟು ಹಾಕುವಂತಿರಬೇಕು” ಎಂದರು.

ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ, ಎಐಎಂಎಸ್‌ಎಸ್ ಜಿಲ್ಲಾ ಚಾಲಕಿ ಶಿವಬಾಳಮ್ಮ ಕೊಂಡಗೂಳಿ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X