ವಿಜಯಪುರ | ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಘೋಷಣೆಗೆ ದವಿಪ ಮನವಿ

Date:

Advertisements

ವಿಜಯಪುರ ನಗರದಲ್ಲಿರುವ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಕುಲಪತಿಗಳಿಂದ ರಾಜ್ಯಪಾಲರಿಗೆ ಆರ್ಥಿಕವಾಗಿ ಹಿಂದುಳಿದ ಎಸ್‌ಸಿ, ಎಸ್‌ಟಿ, ಒಬಿಸಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಘೋಷಣೆ ಮಾಡಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಮನವಿ ಮಾಡಿತು.

ದವಿಪ ಮುಖಂಡ ಅಕ್ಷಯ ಕುಮಾರ ಅಜಮನಿ ಮಾತನಾಡಿ, “ಸ್ಪರ್ಧಾತ್ಮಕ ಯುಗದಲ್ಲಿ ತಂತ್ರಜ್ಞಾನದ ಅರಿವು ಬಹುದೊಡ್ಡದಾಗಿದೆ. ತಂತ್ರಜ್ಞಾನವಿಲ್ಲದ ಕ್ಷೇತ್ರ ಜಗತ್ತಿನಲ್ಲಿಯೇ ಯಾವುದೂ ಇಲ್ಲದಂತಾಗಿದೆ. ಹತ್ತು ಜನ ಕೆಲಸ ನಿರ್ವಹಿಸುವ ಕೆಲಸವನ್ನು ತಂತ್ರಜ್ಞಾನದ ಮೂಲಕ ಒಬ್ಬರೇ ಮಾಡುವಂತಹ ಪರಸ್ಥಿತಿ ನಿರ್ಮಾಣವಾಗಿದೆ. ಪದವಿ ಮತ್ತು ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯವಾಗಿ ತಂತ್ರಜ್ಞಾನದ ಕಲಿಕೆ ಬಹಳ ಅವಶ್ಯಕವಾಗಿದೆ. ಎಸ್‌ಸಿ, ಎಸ್‌ಟಿ, ಒಬಿಸಿ ಸೇರಿ ಶೋಷಿತ ಸಮುದಾಯದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡುವುದರಿಂದ ಹೆಚ್ಚಿನ ಕಲಿಕೆಗೆ ಅನುಕೂಲ ವಾಗುತ್ತದೆ. ಸರ್ಕಾರಿ ನೌಕರಿ ಕ್ಷೀಣಿಸುತ್ತಿರುವ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಸ್ವತಂತ್ರ ಜೀವನ ಕಟ್ಟಿಕೊಳ್ಳಲು ಲ್ಯಾಪ್ ಟಾಪ್ ತುಂಬಾ ಅವಶ್ಯಕವಾಗಿದೆ” ಎಂದರು.

“ತಮ್ಮ ತಮ್ಮ ವಯಕ್ತಿಕ ಜೀವನವನ್ನು ರೂಪಿಸಿಕೊಳ್ಳಲು, ತಮ್ಮದೇ ಉದ್ಯೋಗ ಪ್ರಾರಂಭಿಸಲು ಅನುಕೂಲವಾಗುವ ಯೋಜನೆ ಇದಾಗಿದೆ. ತಾವು ಹಿಂದೆ ನೀಡಿದ ಇದೇ ಯೋಜನೆಯಿಂದ ಎಷ್ಟೋ ಯುವಕರು ತಮ್ಮ ಬದುಕನ್ನ ಸಾಗಿಸುತ್ತಿದ್ದಾರೆ. ಆದ್ದರಿಂದ ಮತ್ತೆ ಶೋಷಿತ ಸಮುದಾಯದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡುವುದರಿಂದ ಮುಂದಿನ ಯುವಪೀಳಿಗೆಗೆ ಉತ್ತೇಜನವಾಗುತ್ತದೆ. ಈ ಯೋಜನೆಯನ್ನ ಸದುಪಯೋಗ ಪಡೆದುಕೊಂಡ ಯುವ ಪೀಳಿಗೆ ನಿಮ್ಮನ್ನ ಸ್ಮರಿಸುತ್ತಾರೆ” ಎಂದು ಮನವಿ ಮಾಡಿದರು.

ಇದನ್ನೂ ಓದಿ: ವಿಜಯಪುರ | ಬಸವ ವೃತ್ತದಲ್ಲಿ ದವಿಪ ವತಿಯಿಂದ ʼಬಸವ ಜಯಂತಿʼ ಆಚರಣೆ

ಈ ವೇಳೆ ದಾವುದ ನಯ್ಕೊಡಿ, ಪ್ರಶಾಂತ್ ದಾಂಡೇಕರ್, ಮಾದೇಶ ಚಾಲವಾದಿ, ಶಂಕರ ಬಸರಗಿ, ಯುವರಾಜ ಓಲೇಕಾರ, ಪಂಡಿತ್ ಯಲಗೋಡ, ಮಾಂತೇಶ ಚಲವಾದಿ, ತಲಾ ರಾಠೋಡ, ವಿವಿಯ ವಿದ್ಯಾರ್ಥಿನಿಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

Download Eedina App Android / iOS

X