ವಿಜಯಪುರ | ಲ್ಯಾಪ್‌ಟಾಪ್ ವಿತರಣೆಯಲ್ಲಿ ಸರ್ಕಾರದ ವಿಳಂಬ ನೀತಿ ಖಂಡಿಸಿ ದವಿಪ ಪ್ರತಿಭಟನೆ

Date:

Advertisements

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆಯಲ್ಲಿ ಸರ್ಕಾರದ ವಿಳಂಬ ನೀತಿ ಖಂಡಿಸಿ ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿತು.

ವಿಜಯಪುರ ನಗರದ ಗಾಂಧಿ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಅಂಬೇಡ್ಕರ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ವರೆಗೆ ನಡೆಯಿತು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಪರಿಷತ್ ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ್, “ವಿದ್ಯಾರ್ಥಿಗಳ ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಯುತ್ತಾ ಬಂದರೂ ಸರ್ಕಾರ ಇಲ್ಲಿಯವರೆಗೂ ಲ್ಯಾಪ್‌ಟಾಪ್ ವಿತರಣೆ ಮಾಡುತ್ತಿಲ್ಲ. ಈ ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ನಮ್ಮ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಜ್ಞಾನದ ಜೊತೆಗೆ ತಂತ್ರಜ್ಞಾನದ ಜ್ಞಾನವೂ ತುಂಬಾ ಅಗತ್ಯವಾಗಿದೆ. ಆಗಲೇ ವಿದ್ಯಾರ್ಥಿಗಳು ಮಾಹಿತಿ ತಂತ್ರಜ್ಞಾನದ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಆದರೆ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡದೇ ವಂಚಿಸುತ್ತಿದ್ದು ಖಂಡನೀಯವಾಗಿದೆ” ಎಂದರು.

Advertisements

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಸರ್ಕಾರ ವಿಳಂಬ ನೀತಿಯ ವಿರುದ್ಧ ಘೋಷಣೆ ಕೂಗಿದರು. ಬಳಿಕ ಅಪರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಇದನ್ನೂ ಓದಿ: ವಿಜಯಪುರ | ತೊಗರಿ ಇಳುವರಿಯಿಲ್ಲದೆ ರೈತರು ಸಂಕಷ್ಟದಲ್ಲಿ; ಪರಿಹಾರ ಕೋರಿ ಸರ್ಕಾರಕ್ಕೆ ಮನವಿ

ಪ್ರತಿಭಟನೆಯಲ್ಲಿ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಮಹಾದೇವ ಚಲವಾದಿ, ಮುಖಂಡರಾದ ಸಂದೇಶ ಕುಮುಟಗಿ, ಪ್ರಶಾಂತ್ ದಾಂಡೇಕರ್, ಯಾಷಿನ್ ಇನಾಮದಾರ್, ಯಮನೂರಿ ಮಾದರ, ಸಾಗರ್ ಕಲಕೇರಿ, ಸಿದ್ದು, ಪ್ರವೀಣ್, ಸಂತೋಷ್, ಹಣಮಂತ್, ಸೌಮ್ಯ ಜುಮದಿ, ಲಕ್ಷ್ಮಿ ಸಾತಿಹಾಳ, ಲಕ್ಷ್ಮಿ ಹಂಡಿಗಿ, ಪ್ರೇಮಾ ಚಲವಾದಿ, ಲಕ್ಷ್ಮಿ ಬನ್ನೂರ್, ಐಶ್ವರ್ಯ ಅತರ್ಗ,
ಅಕ್ಷತಾ ಭೇಣ, ಶ್ರೀನಾಥ್ ಪವಾರ, ಗಿರೀಶ್ ಇಜೀರಿ, ಸಚಿನ್ ರಾಠೋಡ ಸೇರಿದಂತೆ ಹಲವು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X