ವಿಜಯಪುರ | ಸೇತುವೆ ಹಾಗೂ ಕಾಲುವೆ ಕಾಮಗಾರಿ ಪ್ರಾರಂಭಕ್ಕೆ ಆಗ್ರಹ; ಅಧಿಕಾರಿಗಳ ಲಿಖಿತ ಭರವಸೆ

Date:

Advertisements

ಚಿಮ್ಮಲಗಿ ಏತ ನೀರಾವರಿ ಯೋಜನೆಯ ಅಮರೇಶ್ವರ ದೇವಸ್ಥಾನದ ಬಳಿ ಮುಖ್ಯರಸ್ತೆ ತಿರುವಿನಲ್ಲಿ ಸೇತುವೆ ಹಾಗೂ ಕಾಲುವೆ ಕಾಮಗಾರಿ ಪ್ರಾರಂಭಿಸಬೇಕೆಂದು ಆಗ್ರಹಿಸಿ ಯುವಜನ ಸೇನೆಯ ರಾಜ್ಯ ಘಟಕದಿಂದ ನಡೆಸುತ್ತಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಮಣಿದ ಅಧಿಕಾರಿಗಳು ಲಿಖಿತ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಹೋರಾಟ ಕೈಬಿಟ್ಟಿದ್ದಾರೆ.

ಶಿವಾನಂದ್ ವಾಲಿ ನೇತತ್ವದಲ್ಲಿ ಕಳೆದ ಮೂರು ದಿನಗಳಿಂದ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ನಲತಾವಾಡದಲ್ಲಿ ರೈತರು ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದರು.

ಕೆಬಿಜೆಎನ್ಎಲ್ ಅಧಿಕಾರಿಗಳು ನಿರಂತರವಾಗಿ ಹೋರಾಟಗಾರರ ಮನವೊಲಿಸಲು ಪ್ರಯತ್ನಿಸಿದರು. ಆದರೂ ಸಫಲರಾಗಿರಲಿಲ್ಲ. ಸೋಮವಾರ ಬೆಳಿಗ್ಗೆ ಭೂಸ್ವಾಧೀನಾಧಿಕಾರಿಗಳು ಹಾಗೂ ಕೆಬಿಜೆಎನ್ಎಲ್ ಅಧಿಕಾರಿಗಳು ಜಂಟಿಯಾಗಿ ರೈತರ ಸಮಸ್ಯೆಗಳನ್ನು ಆಲಿಸಿದರು.

Advertisements

ಅಮರೇಶ್ವರ ದೇವಸ್ಥಾನದ ಹತ್ತಿರ ಬಾಕಿ ಉಳಿದಿರುವ ಕಾಮಗಾರಿ ಪ್ರಾರಂಭಿಸಲು ಎಷ್ಟು ಕಾಲಾವಕಾಶ ಬೇಕು ಮತ್ತು ಜಮೀನು ಕಳೆದುಕೊಂಡ ರೈತರಿಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಕೂಡಲೇ ಪರಿಹಾರದ ಹಣ ಬಿಡುಗಡೆ ಮಾಡಲು ಅಧಿಕಾರಿಗಳು ಪ್ರಥಮ ಆದ್ಯತೆ ನೀಡಬೇಕು. ಒಂದು ತಿಂಗಳೊಳಗೆ ಭೂಸ್ವಾಧೀನ ಪ್ರಕ್ರಿಯೆಯಿಂದ ಉಳಿದ ರೈತರಿಗೆ ಕೂಡಲೇ ಆರ್ಡರ್‌ ಕಾಪಿ ನೀಡಬೇಕೆಂದು ರೈತರು ಬಿಗಿಪಟ್ಟು ಹಿಡಿದ ಕಾರಣ ಅಧಿಕಾರಿಗಳು ಎಲ್ಲ ಶರತ್ತುಗಳನ್ನು ಒಪ್ಪಿ ಲಿಖಿತವಾಗಿ ಭರವಸೆ ನೀಡಿದ್ದಾರೆ.

ಅಧಿಕಾರಿಗಳು ಲಿಖಿತವಾಗಿ ಭರವಸೆ ನೀಡಿದಾಗ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಕೆಂಚಪ್ಪ ಬಿರಾದಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗಂಗಾಧರ್ ನಾಡಗೌಡ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಸದಸ್ಯ ಪೃಥ್ವಿರಾಜ್ ನಾಡಗೌಡ, ಗುರುಪ್ರಸಾದ್ ದೇಶಮುಖ್, ಸಿ ಬಿ ಅಸ್ಕಿ, ವೈ ಎಚ್ ವಿಜಯಕರ, ಅಪ್ಪು ದಣಿ ದೇಶಮುಖ, ಚಂದ್ರಶೇಖರ್ ಗಂಗನಗೌಡರ, ಸಿದ್ದಣ್ಣ ಆಲಕೊಪ್ಪರ, ಮಲ್ಲು ತಳವಾರ, ಹನುಮಂತ ಕುರಿ ನೇತೃತ್ವದಲ್ಲಿ ಹೋರಾಟ ಅಂತ್ಯಗೊಳಿಸಲಾಯಿತು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಪರಿಸರ ಕಾಳಜಿಯ ಜತೆಗೆ ಸುಸ್ಥಿರ ಅಭಿವೃದ್ಧಿಯೂ ಸಮಾಜಕ್ಕೆ ಮುಖ್ಯ: ಡಾ ಬಾಬು ಸಜ್ಜನ

ಮುಖಂಡರಾದ ಜಿ ಮಹಾಂತಗೌಡ ಗಂಗನಗೌಡರ, ಬಾಬು ಆದಿಮನಿ, ರಫೀಕ್ ತಗ್ಗಿನಮನಿ, ಮಹಾಂತಯ್ಯ ಮನೆದಾಳಮಠ, ಸಂಗು ಗಂಗನಗೌಡರ, ಮಲ್ಲು ಗಂಗನವಿಜಯಗೌಡರ, ಶರಣಪ್ಪ ಗಂಗನಗೌಡರ, ಚೆನ್ನಪ್ಪ ಗೌಡ ಹಂಪನಗೌಡರ, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಗಣ್ಣ ಬಾಗೇವಾಡಿ ಸೇರಿದಂತೆ ಬಹುತೇಕರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

Download Eedina App Android / iOS

X