ವಿಜಯಪುರ | ಮೋರಟಗಿ ಗ್ರಾಮವನ್ನು ಹೋಬಳಿ ಕೇಂದ್ರವನ್ನಾಗಿಸಲು ಆಗ್ರಹ

Date:

Advertisements

ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ಮೋರಟಗಿ ಗ್ರಾಮವನ್ನು ಹೋಬಳಿ ಕೇಂದ್ರವಾಗಿ ಮಾಡಿ ಆದೇಶಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ಮೈಬೂಬಸಾಬ್ ಕಣ್ಣಿ ಮತ್ತು ಗ್ರಾಮಸ್ಥರು ಸ್ಥಳೀಯ ಶಾಸಕ ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಕಾಂಗ್ರೆಸ್ ಮುಖಂಡ ಮೈಬೂಬಸಾಬ್ ಪತ್ರಿಕಾ ಹೇಳಿಕೆ ನೀಡಿದ್ದು, “ತಾಲೂಕಿನ ಗ್ರಾಮಗಳಾದ ಕುಳೇಕುಮಟಗಿ, ಬಗಲೂರ, ಹಾವಳಗಿ, ಕಕ್ಕಳಮೇಲಿ, ಹಂಚಿನಾಳ, ಜಾಟ್ನಳ, ಬಿಸಾನಾಳ, ಕೆರೂರ ಸೇರಿದಂತೆ ಹತ್ತು ಹಲವಾರು ಹಳ್ಳಿಗಳ ವ್ಯವಹಾರ ವಹಿವಾಟಿಗೆ, ವ್ಯಾಪಾರಕ್ಕೆ ಮೋರಟಗಿ ಗ್ರಾಮವು ಕೇಂದ್ರ ಬಿಂದುವಾಗಿದೆ. ಸ್ಥಳೀಯವಾಗಿ 14 ಸಾವಿರಕ್ಕಿಂತಲೂ ಅಧಿಕ ಜನಸಂಖ್ಯೆ ಹೊಂದಿರುವ ಮೋರಟಗಿ ಗ್ರಾಮವನ್ನು ಹೋಬಳಿ ಕೇಂದ್ರವನ್ನಾಗಿ ಮಾಡಿ ಆದೇಶಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಸಿಂಧಗಿ ತಾಲೂಕಿಗೆ ಮೋರಟಗಿ ಗ್ರಾಮ 22 ಕಿ ಮೀ ಸಮೀಪದಲ್ಲಿತ್ತು. ಇದೀಗ 45 ಕಿ ಮೀ ದೂರದ ಆಲಮೇಲ ತಾಲೂಕಿಗೆ ಸೇರ್ಪಡೆಗೊಂಡಿದ್ದರಿಂದ ಸರ್ಕಾರಿ ಸೌಲಭ್ಯಕ್ಕೆ ಕಚೇರಿಗಳಿಗೆ ತೆರಳಲು ವೃದ್ಧರು, ಅಂಗವಿಕಲರು ಬಹಳಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

Advertisements

“ರೈತರಿಗೆ, ವೃದ್ಧರಿಗೆ, ಅಂಗವಿಕಲರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮೋರಟಗಿ ಗ್ರಾಮವನ್ನು ಹೋಬಳಿ ಗ್ರಾಮವನ್ನಾಗಿ ಆದೇಶಿಸಲು ಹಿಂದಿನ ಶಾಸಕರಿಗೂ, ಸಚಿವರಿಗೂ ಹತ್ತು ಹಲವು ಬಾರಿ ಮನವಿ ಮಾಡಿದ್ದೇವೆ. ಆದರೆ, ಆಶ್ವಾಸನೆಗಳ ಸುರಿಮಳೆಗಳು ಬಂದಿವೆಯೇ ವಿನಃ ಕಾರ್ಯರೂಪಕ್ಕೆ ಬಂದಿಲ್ಲ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಮಹಿಳೆಯ ವಿವಸ್ತ್ರ ಪ್ರಕರಣ, ಹೆಣ್ಣು ಭ್ರೂಣ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

“ನೂತನ ಶಾಸಕರಾಗಿ ಆಯ್ಕೆಯಾದ ಅಶೋಕ ಮನಗೂಳಿ ಅವರಿಗೂ ಕೂಡಾ ಈಗಾಗಲೇ ಈ ಕುರಿತು ಮನವಿ ಮಾಡಿದ್ದೇವೆ. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕರು ಮೋರಟಗಿ ಗ್ರಾಮವನ್ನು ಹೋಬಳಿ ಕೇಂದ್ರವನ್ನಾಗಿಸುವುದಾಗಿ ಭರವಸೆ ನೀಡಿದ್ದಾರೆ. ಆದಷ್ಟು ಬೇಗನೆ ಸರ್ಕಾರಕ್ಕೆ ಒತ್ತಾಯಿಸಿ ಶೀಘ್ರದಲ್ಲೇ ಕಾರ್ಯರೂಪಕ್ಕೆ ತರಬೇಕು” ಎಂದು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರುಗಳಾದ ಸತ್ಯನಾರಾಯಣ ತಿವಾರಿ, ವೀರನಗೌಡ ಪಾಟೀಲ, ಮುತ್ತಪ್ಪ ಸಿಂಗೆ, ಸಲೀಮ್ ಕಣ್ಣಿ ಸೇರಿದಂತೆ ಪ್ರಗತಿಪರ ರೈತರು, ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X