ವಿಜಯಪುರ | ವಿಶೇಷಚೇತನರಿಗೆ ವೀಲ್‌ಚೇರ್, ಇತರೆ ಸಲಕರಣೆಗಳ ವಿತರಣೆ

Date:

ವಿಜಯಪುರದ ಅನೌಪಚಾರಿಕ ಶಿಕ್ಷಣ ಸಂಸ್ಥೆ ಮತ್ತು ಬೆಂಗಳೂರಿನ ಆಸ್ಟರ್ ಡಿಎಂ ಫೌಂಡೇಷನ್ ಸಹಯೋಗದೊಂದಿಗೆ ವಿಶೇಷಚೇತನರಿಗೆ ವೀಲ್‌ಚೇರ್ ಹಾಗೂ ಇತರೆ ಸಲಕರಣೆಗಳ ವಿತರಣೆ ಕಾರ್ಯಕ್ರಮ ನಡೆಯಿತು.

- Advertisement -

ವಿಜಯಪುರ ನಗರದ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನವಚೇತನ ಸಭಾಂಗಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಆಸ್ಟರ್ ಡಿಎಂ ಫೌಂಡೇಷನ್ ಮುಖ್ಯಸ್ಥ ರೋಹನ ಪ್ರಾಂಕೊ ಮಾತನಾಡಿ, “ಸಮಾಜದಲ್ಲಿರುವ ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯ ನ್ಯೂನ್ಯತೆ, ಸಮಸ್ಯೆಗಳನ್ನು ಎದುರಿಸುತ್ತಿರುತ್ತಾರೆ. ಎಲ್ಲ ಸಮಸ್ಯೆಗಳನ್ನು ಮೆಟ್ಟಿನಿಂತು ಸಮಾಜದಲ್ಲಿ ಸ್ವಾವಲಂಬಿಗಳಾಗಿ ಬದುಕಲು ಉತ್ತಮ ಬದುಕು ಕಟ್ಟಿಕೊಳ್ಳಲು ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮತ್ತು ಇತರೆ ಸಂಸ್ಥೆಗಳು ಮಾಡುತ್ತಿವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಕಾರ್ಯಕ್ರಮದ ಇನ್ನೋರ್ವ ಅಥಿತಿ, ಅಸ್ಟರ್ ಡಿಎಂ ಫೌಂಡೇಷನ್ ಮಕ್ಕಳ ವೈದ್ಯಕೀಯ ತಜ್ಞ ಡಾ. ಚೇತನ್‌ ಮಾತನಾಡಿ, “ವಿಶೇಷ ಚೇತನರು ಹಲವಾರು ರಂಗಗಳಲ್ಲಿ ಸಾಧನೆ ಮಾಡಿರುವವರನ್ನು ನಾವು ನೋಡುತ್ತಿದ್ದೇವೆ. ಕ್ರೀಡೆ, ಕಲೆ, ಸಾಂಸ್ಕೃತಿಕವಾಗಿ, ಶೈಕ್ಷಣಿಕವಾಗಿ ಸಾದನೆಗಳನ್ನು ಮಾಡಿದ್ದಾರೆ. ಸರ್ಕಾರವೂ ಕೂಡಾ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಅವುಗಳನ್ನು ಸದುಪಯೋಗ ಮಾಡಿಕೊಂಡು ಮುಂದೆ ಸಾಗಬೇಕು” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಕುಡಿದ ಮತ್ತಿನಲ್ಲಿ ವ್ಯಕ್ತಿಯ ಕೊಲೆ; 6 ತಾಸಿನಲ್ಲಿ ಆರೋಪಿಗಳ ಪತ್ತೆಹಚ್ಚುವಲ್ಲಿ ತನಿಖಾ ತಂಡ ಯಶಸ್ವಿ

ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಫಾ. ಟಿಯೋಲ್ ಮಚಾದೋ ಮಾತನಾಡಿ, “ವಿಶೇಷಚೇತನರನ್ನು ಅನುಕಂಪದ ದೃಷ್ಟಿಯಿಂದ ನೋಡುತ್ತಿಲ್ಲ. ಅವರು ಸ್ವಾವಲಂಬಿಗಳಾಗಿ ಬದುಕಲು ಅವಕಾಶಗಳನ್ನು ಮಾಡಿಕೊಡಲಾಗುತ್ತಿದೆ. ಇವತ್ತು ವಿಶೇಷವಾಗಿ ಸಲಕರಣೆಗಳನ್ನು ವಿತರಿಸಲಾಗಿದೆ. ಇನ್ನು ಮನೆಯಿಂದ ಒಂದು ಹೆಜ್ಜೆ ಮುಂದೆ ಬಂದು ಸ್ವ-ಉದ್ಯೋಗ ಮಾಡಲು ಅಥವಾ ತಮ್ಮ ಯಾವುದೇ ಆಗತ್ಯತೆಗಳನ್ನು ಪೂರೈಸಿಕೊಳ್ಳಲು ಅನುಕೂಲವಾಗುತ್ತದೆ. ನೀವೂ ಕೂಡ ಸ್ವಾವಲಂಬಿಗಳಾಗಿ ಯಾರಿಗೂ ಹೊರೆಯಾಗದಂತೆ ಜೀವನ ನಡೆಸಬೇಕು” ಎಂದು ಪ್ರೋತ್ಸಾಹಿಸಿದರು.

ಕಾರ್ಯಕ್ರಮದಲ್ಲಿ 50ಕ್ಕೂ ಅಧಿಕ ಮಂದಿ ವಿಶೇಷಚೇತನರು ಭಾಗಿಯಾಗಿ ಸಲಕರಣೆ ಪಡೆದುಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮಲೆನಾಡು-ಕರಾವಳಿ ಕೃಷಿ ವಲಯವಾಗಿ ಘೋಷಿಸಬೇಕು; ಸುಧೀರ್ ಕುಮಾರ್ ಮುರೊಳ್ಳಿ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಉಡುಪಿ | ಅನುಚಿತ ವರ್ತನೆಗೆ ಸಂತ್ರಸ್ತರನ್ನು ಹೊಣೆ ಮಾಡಲಾಗದು : ಡಾ. ದಿವ್ಯಾ ರಾಣಿ

ಉಡುಪು, ಸ್ನೇಹ ಅಥವಾ ಸಾಮಾಜಿಕ ಜಾಲತಾಣಗಳ ಬಳಕೆಯಂತಹ ವೈಯಕ್ತಿಕ ಆಯ್ಕೆಗಳು ಯಾವುದೇ...

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...