ವಿಜಯಪುರ | ಇನ್ನೊಂದು ವಾರ ಶುಷ್ಕ ವಾತಾವರಣ ಮುಂದುವರೆದರೆ ಬರ ಘೋಷಣೆ: ಎಂಬಿ ಪಾಟೀಲ್

Date:

Advertisements

ಮಳೆ ಕೊರತೆ ಅಥವಾ ಮೂರು ವಾರಗಳಿಗೂ ಅಧಿಕ ಕಾಲ ನಿರಂತರವಾಗಿ ಶುಷ್ಕ ವಾತಾವರಣ ಇದ್ದರೆ ಮಾತ್ರ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಸಾಧ್ಯ ಎಂದು ಕೇಂದ್ರ ಸರ್ಕಾರ ಮಾರ್ಗಸೂಚಿ ನಿಗದಿಗೊಳಿಸಿದೆ. ಪ್ರಸ್ತುತ ವಿಜಯಪುರ ಜಿಲ್ಲೆಯ ತಿಕೋಟಾದಲ್ಲಿ ಎರಡು ವಾರಗಳ ಕಾಲ ನಿರಂತರ ಶುಷ್ಕ ವಾತಾವರಣವಿದೆ. ಇನ್ನೊಂದು ವಾರ ಇದೇ ಪರಿಸ್ಥಿತಿ ಮುಂದುವರೆದರೆ ತಿಕೋಟಾ ತಾಲೂಕು ಸಹ ಬರಪೀಡಿತ ತಾಲೂಕು ಪಟ್ಟಿಯಲ್ಲಿ ಸೇರ್ಪಡೆಯಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ವಿಜಯಪುರ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ನಡೆದ ಬರ ಪರಿಹಾರ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. “ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಕೇಂದ್ರ ಸರ್ಕಾರ ಹಲವಾರು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಆ ಮಾರ್ಗಸೂಚಿಗಳಲ್ಲಿಯೂ ಕೆಲವು ಬದಲಾವಣೆ ಮಾಡುವಂತೆ ಈಗಾಗಲೇ ಕೇಂದ್ರ ಸರ್ಕಾರದೊಂದಿಗೆ ರಾಜ್ಯ ಸರ್ಕಾರ ಪತ್ರ ವ್ಯವಹಾರ ನಡೆಸಿದೆ” ಎಂದರು.

“ಬರ ಪೀಡಿತ ತಾಲೂಕು ಘೋಷಣೆಯಾಗಲು ಶೇ.60ರಷ್ಟು ಮಳೆ ಕೊರತೆ ಇರಬೇಕು ಅಥವಾ ಸತತ ಮೂರು ವಾರ ಶುಷ್ಕ ವಾತಾವರಣ ಇರಬೇಕು. ತಿಕೋಟಾದಲ್ಲಿ ಜುಲೈ ತಿಂಗಳಲ್ಲಿ ಅಧಿಕ ಪ್ರಮಾಣದಲ್ಲಿ ಮಳೆಯಾಗಿದೆ. ಆದರೆ ಜೂನ್, ಆಗಸ್ಟ್ ತಿಂಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿತ್ತಾದರೂ, ಸೆಪ್ಟೆಂಬರ್ ತಿಂಗಳಲ್ಲಿ ಶೇ.5ರಷ್ಟು ಮಳೆ ಹೆಚ್ಚಾಗಿದೆ. ಹೀಗಾಗಿ ಬರಪೀಡಿತ ತಾಲೂಕು ಘೋಷಣೆಗೆ ತೊಡಕಾಗಿದೆ. ಹೀಗಾಗಿ, ಮೂರು ವಾರಗಳ ಕಾಲ ಶುಷ್ಕ ವಾತಾವರಣವಿದ್ದರೆ ಮಾತ್ರ ಬರ ಘೋಷಣೆ ಮಾಡಲು ಸಾಧ್ಯ. ಸದ್ಯ ಎರಡು ವಾರ ಶುಷ್ಕ ವಾತಾವರಣ ಮುಂದುವರೆದಿದೆ. ಇನ್ನೊಂದು ವಾರ ಇದೇ ವಾತಾವರಣ ಮುಂದುವರೆದರೆ ತಿಕೋಟಾ ಸಹ ಬರಪೀಡಿತ ತಾಲೂಕು ಪಟ್ಟಿಯಲ್ಲಿ ಸೇರ್ಪಡೆಯಾಗಲಿದೆ” ಎಂದರು.

Advertisements

“ಬರ ಪರಿಸ್ಥಿತಿಯನ್ನು ಅಧಿಕಾರಿಗಳು ಅತ್ಯಂತ ಗಂಭೀರವಾಗಿ ನಿಭಾಯಿಸಬೇಕು. ಕುಡಿಯುವ ನೀರಿನ ಸಮಸ್ಯೆ, ಟ್ಯಾಂಕರ್ ಲಭ್ಯತೆ, ಬೆಳೆ ಪರಿಹಾರ ಮೊದಲಾದ ವಿಷಯಗಳ ಬಗ್ಗೆ ಪಿಡಿಓ ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂಧ ಕಾರ್ಯನಿರ್ವಹಿಸಬೇಕು. ವಿಶೇಷವಾಗಿ ಅಧಿಕಾರಿಗಳು ಒತ್ತಡದಲ್ಲಿದ್ದರೂ ಸಹ ಸಾರ್ವಜನಿಕರ ಕರೆ ಸ್ವೀಕರಿಸಬೇಕು. ಕೇವಲ ಕಚೇರಿಯಲ್ಲಿ ಕುಳಿತುಕೊಂಡರೆ ಸಲ್ಲದು. ಫೀಲ್ಡ್ ವಿಸಿಟ್ ಮಾಡಿ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಬೇಕು. ಫೀಲ್ಡ್ ವಿಸಿಟ್ ಹೆಸರಿನಲ್ಲಿ ಹೊರಗಡೆ ಅಡ್ಡಾಡಿದರೆ ಸರ್ಕಾರ ಸಹಿಸಲ್ಲ. ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸದೇ ಹೋದರೆ ಅಧಿಕಾರಿಗಳನ್ನೇ ಹೊಣೆಗಾರಿಕೆಯನ್ನಾಗಿ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಆಲಮಟ್ಟಿ ಜಲಾಶಯದಲ್ಲಿ 96 ಟಿಎಂಸಿ ಲೈವ್ ಸ್ಟೋರೆಜ್ ನೀರಿನ ಲಭ್ಯತೆ ಇದೆ. ನಾರಾಯಣಪೂರ ಜಲಾಶಯದಲ್ಲಿ 11.83 ಟಿಎಂಸಿ ನೀರಿನ ಲಭ್ಯತೆ ಇದೆ. ಆದರೆ, ಒಳ ಹರಿವು ಸಂಪೂರ್ಣ ಶೂನ್ಯವಾಗಿದೆ. ಒಟ್ಟಾರೆಯಾಗಿ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದಾಗ 12 ಟಿಎಂಸಿಯಷ್ಟು ನೀರಿನ ಲಭ್ಯತೆ ಪ್ರಮಾಣ ಕಡಿಮೆಯಾಗಿದೆ” ಎಂದರು.

ಸಭೆಯಲ್ಲಿ ಶಾಸಕ ವಿಠ್ಠಲ ಕಟಕದೊಂಡ, ರಾಜುಗೌಡ ಪಾಟೀಲ ಕುದರಿಸಾಲೋಡಗಿ, ಅಶೋಕ ಮನಗೂಳಿ, ಜಿಲ್ಲಾಧಿಕಾರಿ ಟಿ. ಭೂಬಾಲನ್, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರೋಷನ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹೃಷಿಕೇಶ ಭಗವಾನ ಸೋನಾವನೆ ಮೊದಲಾದವರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X