ವಿಜಯಪುರ | ರಾಜ್ಯದಲ್ಲಿ ಬರ, ಕೇಂದ್ರದ ಅಸಹಕಾರ; ಸಚಿವ ಎಂ.ಬಿ ಪಾಟೀಲ್‌ ಆರೋಪ

Date:

Advertisements

ರಾಜ್ಯದಲ್ಲಿ ಭೀಕರ ಬರ ಇದ್ದರೂ ಸಹ ಕೇಂದ್ರ ಸರ್ಕಾರ ಕಿಂಚಿತ್ತೂ ಸ್ಪಂದಿಸುತ್ತಿಲ್ಲ. ಈ ವಿಷಯದಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಹೆಚ್ಚಿನ ಪ್ರಮಾಣದಲ್ಲಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ್‌ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಅಧ್ಯಯನ ಮಾಡಿದ ನಂತರ, ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಬರದ ವಿಷಯವಾಗಿ ಯಾವ ಜವಾಬ್ದಾರಿ ನಿಭಾಯಿಸಿಲ್ಲ. ಇದು ರೈತ ವಿರೋಧಿ ನೀತಿಯಾಗಿದೆ. ಆದರೆ, ಕೇಂದ್ರದಲ್ಲಿ 27ಸಂಸದರಿದ್ದರೂ ಈ ಪೈಕಿ ಯಾರೂ ಕೂಡಾ ಬರದ ಬಗ್ಗೆ ಮಾತನಾಡುತ್ತಿಲ್ಲ.

ರಾಜ್ಯದ ಸಂಸದರು, ಕೇಂದ್ರ ಸರ್ಕಾರ, ಪ್ರಧಾನಿ ಹಾಗೂ ಸಚಿವರನ್ನು ಭೇಟಿ ಮಾಡುತ್ತಿಲ್ಲ. ಅವರು ಇವರಿಗೆ ಸಮಯವನ್ನೇ ಕೊಡುತ್ತಿಲ್ಲ. ಹೀಗಾಗಿ, ಇಲ್ಲಿಯವರೆಗೆ ಕೇಂದ್ರದಿಂದ ಒಂದು ಬಿಡಿಗಾಸು ಪರಿಹಾರ ಬಂದಿಲ್ಲ, ಬಿಜೆಪಿ ನಾಯಕರು ಬರ ಅಧ್ಯಯನ ಮಾಡಿದರು. ಆದರೆ, ವರದಿ ಕೊಟ್ಟಿದ್ದಾರೋ ಇಲ್ಲವೋ ಅದು ಗೊತ್ತಿಲ್ಲ ಎಂದರು.

Advertisements

ಬರ ನಿರ್ವಹಣೆ ಪ್ರತಿಯೊಬ್ಬರ ಜವಾಬ್ದಾರಿ. ಅಧಿಕಾರದಲ್ಲಿ ಯಾರೇ ಇದ್ದರೂ, ತಕ್ಷಣ ರೈತರ ನೆರವಿಗೆ ಬರಬೇಕು. ಈ ವಿಷಯದಲ್ಲಿ ರಾಜ್ಯಕ್ಕಿಂತ ಕೇಂದ್ರ ಸರ್ಕಾರದ ಜವಾಬ್ದಾರಿ ಹೆಚ್ಚು ಎಂಬುದನ್ನು ಮರೆಯಬಾರದು.

ಜಿಲ್ಲೆಯಲ್ಲಿರುವ 10ಸಾವಿರ ಹೆಕ್ಟೇರ್ ಲಿಂಬೆ ಬೆಳೆಯುವ ಪ್ರದೇಶದ ಪೈಕಿ ಅಂದಾಜು 7.5ಕೋಟಿ ಹೆಕ್ಟೇರ್ ಲಿಂಬೆ ಹಾನಿಯಾಗಿದೆ. ಈಗಾಗಲೇ ಜಿಲ್ಲಾಡಳಿತ ವರದಿ ಕೂಡ ಒಪ್ಪಿಸಿದೆ. ಆ ಪ್ರಕಾರ ಕೇಂದ್ರದ ಎನ್‌ಡಿಆರ್‌ಎಫ್ ನಿಯಮಾವಳಿ ಪ್ರಕಾರ ಪರಿಹಾರ ನೀಡಲಾಗುವುದು. ಕೇಂದ್ರದ ಎನ್‌ಡಿಆರ್‌ಎಫ್ ನಿಯಮಾವಳಿ ಕೂಡ ಬದಲಾಗುವ ಅವಶ್ಯಕತೆ ಇದೆ ಎಂದರು.

ರೈತರು ಸೂರ್ಯಪಾನಕ್ಕೆ ಪ್ರತಿ ಎಕರೆಗೆ ಹತ್ತು ಸಾವಿರ ಖರ್ಚು ಮಾಡಿದ್ದಾರೆ. ಆದರೆ, ಪರಿಹಾರ ಮೂರೂವರೆ ಸಾವಿರ ಪರಿಹಾರ ಸಿಗಲಿದೆ. ಲಿಂಬೆ ಬೆಳೆಗಾರರ ಸ್ಥಿತಿ ಕೂಡ ಭಿನ್ನವಾಗಿಲ್ಲ. ಮೂರು ಲಕ್ಷ ಎಕರೆ ತೊಗರಿ ನಾಶವಾಗಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಅವಕಾಶ ಕಲ್ಪಿಸಲಾಗುತ್ತಿದೆ. ಸರಕಾರ ಕ್ಯಾಬಿನೆಟ್‌ನಲ್ಲೂ ನಿರ್ಧಾರ ಮಾಡಿದ್ದು, ಉದ್ಯೋಗ ಖಾತ್ರಿ ಮಾನವ ದಿನಗಳ ಸೃಜನತೆಗೆ ಲಿಮಿಟ್ ನೀಡಿಲ್ಲ. ಎಷ್ಟು ಜನ ಬಂದರೂ ಕೆಲಸ ನೀಡಬೇಕೆಂದು ತಿಳಿಸಲಾಗಿದೆ ಎಂದರು.

ಇಡೀ ರಾಜ್ಯ ತೀವ್ರ ಬರದಿಂದ ತತ್ತರಿಸಿದ್ದರಿಂದ ಈಗಾಗಲೇ ರಾಜ್ಯ ಸರಕಾರ ರಾಜ್ಯದ ಬಹುತೇಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಹೀಗಾಗಿ ಸರ್ಕಾರ ಕುಡಿಯುವ ನೀರು ಸೇರಿದಂತೆ ಪ್ರತಿಯೊಂದಕ್ಕೂ ಜಿಲ್ಲಾಧಿಕಾರಿ ಪಿಡಿ ಖಾತೆಯಲ್ಲಿ ಹಣ ಠೇವಣಿ ಮಾಡಲಾಗಿದೆ ಎಂದು ವಿವರಿಸಿದರು.

ಇನ್ನೂ ಅಗತ್ಯ ಬಿದ್ದರೆ, ನೂರು ಕೋಟಿಯವರೆಗೆ ಹಣ ನೀಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಭರವಸೆ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಅಧಿಕಾರಿಗಳು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಸರ್ಕಾರದ ಸ್ಪಷ್ಟ ಸೂಚನೆಯಿರುವುದರಿಂದ ಬಹುತೇಕ ಇಲಾಖೆಗಳು ಬರದ ಮಾಹಿತಿ ನೀಡಿವೆ ಎಂದು ಮಾಹಿತಿ ಹಂಚಿಕೊಂಡರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X