ವಿಜಯಪುರ | ಅಕ್ಕಮಹಾದೇವಿ ವಿವಿ ವಿದ್ಯಾರ್ಥಿನಿಯರಿಗೆ ವಸತಿ ಕಲ್ಪಿಸಲು ಡಿವಿಪಿ ಆಗ್ರಹ

Date:

Advertisements

ನಾಡಿನ ಏಕೈಕ ಮಹಿಳಾ ವಿಶ್ವವಿದ್ಯಾಲಯ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ವಿದ್ಯಾರ್ಥಿನಿಯರಿಗೆ ವಸತಿ ಸೌಕರ್ಯ ಕಲ್ಪಿಸಬೇಕೆಂದು ಆಗ್ರಹಿಸಿ ವಿಶ್ವವಿದ್ಯಾಲಯದ ಆಡಳಿತ ಭವನದ ಎದುರು ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾ ಸಂಚಾಲಕ ಅಕ್ಷಯ್ ಕುಮಾರ ಮಾತನಾಡಿ, “ನಾಡಿನ ಏಕೈಕ ಮಹಿಳಾ ವಿಶ್ವವಿದ್ಯಾಲಯ ನಮ್ಮ ವಿಜಯಪುರ ಜಿಲ್ಲೆಯಲ್ಲಿದೆಯೆಂದು ಹೆಮ್ಮೆಯಿಂದ ಹೇಳಲು ಮಾತ್ರ ಸೀಮಿತವಾಗಿದೆಯೇ ಹೊರತು, ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡುವ ಬೇರೆ ಬೇರೆ ಜಿಲ್ಲೆಗಳ ವಿದ್ಯಾರ್ಥಿನಿಯರಿಗೆ ಯಾವುದೇ ರೀತಿಯ ಮೂಲ ಸೌಕರ್ಯಗಳು ಇಲ್ಲದಿರುವುದು ವಿಪರ್ಯಾಸದ ಸಂಗತಿಯಾಗಿದೆ” ಎಂದರು.

“ವಿಶ್ವವಿದ್ಯಾಲಕ್ಕೆ ಬೇರೆ ಬೇರೆ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿನಿಯರಿಗೆ ಕನಿಷ್ಟ ಪಕ್ಷ ಸರಿಯಾದ ವಸತಿ ಸೌಕರ್ಯ ನೀಡುವಲ್ಲಿ ವಿಶ್ವವಿದ್ಯಾಲಯದ ಆಡಳಿತ ವರ್ಗ ವಿಫಲವಾಗಿದೆ. ಆರು ತಿಂಗಳ ಹಿಂದೆಯೇ ವಸತಿ ನಿಲಯಗಳ ವ್ಯವಸ್ಥೆಯನ್ನು ಸರಿಪಡಿಸುವಂತೆ ಗಮನಕ್ಕೆ ತಂದಿದ್ದರೂ ಕೂಡಾ ಕುಲಪತಿಗಳು ಎಚ್ಚೆತ್ತಕೊಳ್ಳದಿರುವುದು ಖಂಡನೀಯ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

“ಕುಲಪತಿಗಳು ಈಗಲಾದರೂ ಎಚ್ಚೆತ್ತುಕೊಂಡು ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಮೂಲ ಸೌಕರ್ಯ ಕಲ್ಪಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ಮಾಡಬೇಕಾಗುತ್ತದೆ” ಎಂದು ಅಕ್ಷಯ್ ಕುಮಾರ್ ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ವಿದ್ಯಾರ್ಥಿಗಳು ಸಂವಹನ ಕೌಶಲ್ಯ ಬೆಳೆಸಿಕೊಳ್ಳಬೇಕು: ಸಿ ಯು ಬೆಳಕ್ಕಿ ಸಲಹೆ

ಈ ವೇಳೆ ಮನವಿ ಸ್ವೀಕರಿಸಿದ ವಿಶ್ವವಿದ್ಯಾಲಯದ ಕುಲಪತಿಗಳು, “ವಿಧ್ಯಾರ್ಥಿನಿಯರ ಬೇಡಿಕೆಯನ್ನು ಶೀಘ್ರವೇ ಈಡೇರಿಸುತ್ತೇವೆ” ಎಂದು ಪ್ರತಿಭಟನಾನಿರತ ವಿದ್ಯಾರ್ಥಿನಿಯರಿಗೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪರಿಷತ್ ಮುಖಂಡರಾದ ಯುವರಾಜ, ಮಹಾಂತೇಶ್, ಯಮನೂರಿ, ಪ್ರಜ್ವಲ, ಸಂದೇಶ್ ಮತ್ತು ಹಲವು ವಿದ್ಯಾರ್ಥಿನಿಯರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X